ಬೀದರ್‌ | ದೈಹಿಕ ಆರೋಗ್ಯಕ್ಕೆ ಯೋಗ ಪೂರಕ : ರೇಷ್ಮಾ ಕೌರ್

Date:

ಬೀದರ್ ನಗರದ ಗುರುನಾನಕ್ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಾಮೂಹಿಕ ಯೋಗಾಭ್ಯಾಸ ನಡೆಯಿತು.

ಭಾರತ ಸರ್ಕಾರ ಆಯುಶ್ ಇಲಾಖೆಯ ಮೋರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದಲ್ಲಿ ಗುರುನಾನಕ ಶಿಕ್ಷಣ ಸಂಸ್ಥೆ, ಇಂಟರ್ನ್ಯಾಶನಲ್ ನ್ಯಾಚುರೋಪತಿ ಆರ್ಗನೈಜೇಶನ್, ಸೂರ್ಯ ಫೌಂಡೇಶನ್ ಹಾಗೂ ಪತಂಜಲಿ ಸಂಸ್ಥೆಯ ಆಯೋಜಕತ್ವದಲ್ಲಿ ನಡೆದ ಯೋಗ ದಿನಾಚಾರಣೆ ಕಾರ್ಯಕ್ರಮಕ್ಕೆ ಶ್ರೀ ನಾನಕ ಝಿರಾ ಸಾಹೇಬ್ ಫೌಂಡೆಷನ್ ಅಧ್ಯಕ್ಷ ಡಾ.ಎಸ್.ಬಲಬೀರ ಸಿಂಗ್ ಅವರು ಚಾಲನೆ ನೀಡಿದರು.

ಸಂಸ್ಥೆಯ ಮುಖ್ಯಸ್ಥರಾದ ರೇಷ್ಮಾ ಕೌರ್ ಮಾತನಾಡಿ, ʼಯೋಗ ಭಾರತದ ಪರಂಪರೆಯ ಕೊಡುಗೆಯಾಗಿದೆ, ಯೋಗವು ದೇಹ ಮನಸ್ಸನ್ನು ಒಳಗೊಂಡಿದೆ. ಮನುಷ್ಯ ಹಾಗೂ ಪ್ರಕೃತಿ ಮಧ್ಯದ ಬಾಂಧವ್ಯವೇ ಯೋಗ,ಯೋಗ ಬದುಕು ಬದಲಿಸುವ ಮತ್ತು ಅರಳಿಸುವ ವಿಧಾನವಾಗಿದೆ, ಜೊತೆಗೆ ಯೋಗ ಸಂಯಮ, ಸಾರ್ಥಕತೆಯನ್ನು ಒಳಗೊಂಡಿದ್ದು, ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನ ಉತ್ತಮವಾಗಿಸುತ್ತದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೂರ್ಯ ಫೌಂಡೇಶನ್ ಹಾಗೂ ಐಎನ್‌ಒ ರಾಜ್ಯ ಸಂಯೊಜಕ ಗುರುನಾಥ ರಾಜಗೀರಾ ಮಾತನಾಡಿ, ʼಯೋಗಕ್ಕೆ
ಸಾವಿರಾರು ವರ್ಷಗಳ ಇತಿಹಾಸವಿದ್ದು, ಭಾರತದ ಕರೆಗೆ ಓಗೊಟ್ಟು ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಯೋಗ ದಿನಾಚರಣೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸೂರ್ಯ ಫೌಂಡೇಶನ್ ಹಾಗೂ ಐಎನ್‌ಒ ವತಿಯಿಂದ ದೇಶಾದ್ಯಂತ ಎಂಟು ಸಾವಿರ ಕಡೆ ಮತ್ತು ಬೀದರ ಜಿಲ್ಲೆಯಲ್ಲಿ ಇಪ್ಪತ್ತೊಂದು ಕಡೆ ಯೋಗ ದಿನಾಚರಣೆ ಯಶಸ್ವಿಯಾಗಿ ನಡೆಸಲಾಗಿದೆʼ ಎಂದರು.

WhatsApp Image 2025 06 21 at 5.46.05 PM
ಯೋಗ ದಿನಾಚರಣೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದರು.

ಯೋಗ ಶಿಕ್ಷಕ ಹಾಗೂ ಐಎನ್‌ಒ ಜಿಲ್ಲಾದ್ಯಕ್ಷ ಗೋರಖನಾಥ ಕುಂಬಾರ ಅವರ ಅತ್ಯುತ್ತಮ ಯೋಗ ತರಬೇತಿ ಹಾಗೂ ಯೋಗಪಟು ಆನಂದ ಅವರ ಯೋಗ ಪ್ರದರ್ಶನ ಎಲ್ಲರ ಗಮನ ಸೆಳೆಯಿತು, ಬಳಿಕ ಇವರ ಸೇವೆಯನ್ನು ಮನಗಂಡು ಗುರುನಾನಕ್ ಶಿಕ್ಷಣ ಸಂಸ್ಥೆಯವರು ವಿಶೇಷ ಸನ್ಮಾನ ಮಾಡಿ ಪ್ರೋತ್ಸಾಹಿಸಿದರು.

ಇದನ್ನೂ ಓದಿ : ಬೀದರ್‌ | ಯೋಗದಿಂದ ಆರೋಗ್ಯ ವೃದ್ಧಿ : ಶಾಸಕ ಪ್ರಭು ಚವ್ಹಾಣ

ಪ್ರಮುಖರಾದ ಗುರು ನಾನಕ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಮೇಶ್ವರರಾವ್, ಮಾಜಿ ಕರ್ನಲ್ ಆರ್.ಡಿ.ಸಿಂಗ್, ಆನಂದ ರೆಡ್ಡಿ, ಶಿವಕುಮಾರ ಸ್ವಾಮಿ, ಸಚಿನ ಸೋಲಪುರೆ, ಯೊಗೆಂದ್ರ ಯದಲಾಪುರೆ, ಶಿವಮೂರ್ತಿ ಬಟನಾಪುರೆ ಸೇರಿದಂತೆ ಶಾಲೆಯ ಮುಖ್ಯಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...