ಬೀದರ್ | ಗೃಹಜ್ಯೋತಿ ಯೋಜನೆ ಬಡಜನರ ಆರ್ಥಿಕ ಹೊರೆತಗ್ಗಿಸಲಿದೆ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

Date:

  • ಬೀದರ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ
  • ರಾಜ್ಯ ಸರ್ಕಾರದ ಐದು ಯೋಜನೆಗಳು ಜನರ ಆರ್ಥಿಕತೆಗೆ ಸಹಕಾರಿ

ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಯಿಂದ ಬಡಜನರ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಹೊರೆ ತಗ್ಗಿಸುವುದರ ಜೊತೆಗೆ ಅವರ ಮನೆ ಬೆಳಗಲಿದೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ಬೀದರ ನಗರದ ಪ್ರತಾಪ ನಗರದ ಹತ್ತಿರದ ಘಾಳೆ ಲಕ್ಸುರಿ ಕನ್ವೆನ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಆಗಸ್ಟ್ 5 ರಂದು ಕಲಬುರ್ಗಿಯಲ್ಲಿ ಮುಖ್ಯಮಂತ್ರಿಗಳು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ್ದಾರೆ. ಅದರಂತೆ ಬೀದರದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ್ದೇನೆ. ಜಿಲ್ಲೆಯಲ್ಲಿ 3,67,871 ಜನ ವಿದ್ಯುತ್ ಬಳಕೆದಾರರಿದ್ದು, ಇದರಲ್ಲಿ 2,99,628 ಜನ ಗೃಹಜ್ಯೋತಿ ಯೋಜನೆಯಡಿ ನೋಂದಣಿ ಮಾಡಿಸಿಕೊಂಡಿರುವುದರಿಂದ ಶೇ.81% ಪ್ರತಿಶತ ಜನರು ಈ ಯೋಜನೆ ಲಾಭ ಪಡೆಯಲಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಜಾರಿ ಮಾಡಲಾಗುತ್ತಿದೆ. ಅದರಂತೆ ಈಗಾಗಲೇ ಜಾರಿ ಮಾಡಿರುವ ಶಕ್ತಿ ಯೋಜನೆಯಡಿ ದಿನನಿತ್ಯ 50 ಲಕ್ಷ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿ ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹಾಗೂ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ.ಅಕ್ಕಿ ನೀಡಲು ನಿರ್ಧರಿಸಲಾಗಿತ್ತು ಆದರೆ ಅಕ್ಕಿ ಹೊಂದಿಸಲು ಆಗದೇ ಇರುವುದರಿಂದ ತಲಾ 170 ರೂ. ರಂತೆ ಪಡಿತರ ಕುಟುಂಬರ ಮುಖ್ಯಸ್ಥರ ಖಾತೆಗಳಿಗೆ ಹಣ ಜಮೆ ಮಾಡಲಾಗಿದೆ ಎಂದು ಹೇಳಿದರು.

ಆಗಸ್ಟ್ 27ಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ:

ಇನ್ನುಳಿದ ಯೋಜನೆಗಳಾದ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ ಈಗಾಗಲೇ ನೋಂದಣಿ ಪ್ರಾರಂಭವಾಗಿದ್ದು, 1 ಕೋಟಿ ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇದರ ಸಂಖ್ಯೆ 1.50 ಕೋಟಿಗೆ ದಾಟುವ ಸಂಭವ ಇದೆ. ಈ ಯೋಜನೆಗೆ ಆಗಸ್ಟ್ 27 ರಂದು ಚಾಲನೆ ನೀಡಲಾಗುವುದು. ಅದೇ ರೀತಿ ನಿರುದ್ಯೋಗಿ ಯುವಕ ಯುವತಿಯರಿಗೆ ನಿರುದ್ಯೋಗ ಪದವಿಧರರಿಗೆ 3 ಸಾವಿರ ರೂ. ಹಾಗೂ ಡಿಪ್ಲೋಮಾ ಪದವಿಧರರಿಗೆ 1500 ರೂ. ನೀಡುವ ಯುವನಿಧಿ ಯೋಜನೆ ಜನವರಿಯಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದರು.

ಕೆಕೆಆರ್‌ಡಿಬಿ.ಗೆ 5 ಸಾವಿರ ಕೋಟಿ ಅನುದಾನ:

ಅರಣ್ಯ ಇಲಾಖೆಯಿಂದ ರಾಜ್ಯದ್ಯಾಂತ 5 ಕೋಟಿ ಸಸಿಗಳನ್ನು ನೆಡುವ ಗುರಿಯಿತ್ತು, ಈಗಾಗಲೇ 41 ದಿನಗಳಲ್ಲಿ ರಾಜ್ಯದಲ್ಲಿ 3 ಕೋಟಿ 10 ಲಕ್ಷ ಸಸಿಗಳನ್ನು ನೆಡಲಾಗಿದೆ. ಬೀದರ ಜಿಲ್ಲೆಯಲ್ಲಿ 10.5 ಲಕ್ಷ ಸಸಿಗಳನ್ನು ನೆಡಲಾಗಿದೆ, ಈಗಾಗಲೇ ಬೀದರ ಜಿಲ್ಲೆಯಲ್ಲಿ ಕೃಷ್ಣಾಮೃಗ ಮೀಸಲು ಪ್ರದೇಶ ನಿರ್ಮಿಸಲು ನಿರ್ಧರಿಸಿದ್ದು, ಅರಣ್ಯ ಇಲಾಖೆಯಿಂದ 2 ಕೋಟಿ ಅನುದಾನ ನೀಡಲಾಗಿದೆ. ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೇಟ್‌ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 3 ಸಾವಿರ ಕೋಟಿ ಅನುದಾನ ನೀಡಿದ್ದು, ಕಳೆದ ಬಾರಿ 2 ಸಾವಿರ ಕೋಟಿ ಅನುದಾನ ಸೇರಿ ಒಟ್ಟು 5 ಸಾವಿರ ಕೋಟಿ ಅನುದಾನ ಕೆ.ಕೆ.ಆರ್.ಡಿ.ಬಿಯಡಿಲ್ಲಿದೆ. ಮುಂದಿನ ದಿನಗಳಲ್ಲಿ ಈ ಭಾಗದ ಅಭಿವೃದ್ಧಿಗೆ ಅದನ್ನು ಹಂತ ಹಂತವಾಗಿ ಬಳಸಲಾಗುವುದು ಎಂದರು.

ಜಿಲ್ಲೆಯಲ್ಲಿ ತ್ಯಾಜವನ್ನು ಹೊರಸೂಸಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಕೈಗಾರಿಕೆಗಳ ಬಗ್ಗೆ ತನಿಖೆ ನಡೆಸಿ ಅವರ ವಿರುದ್ಧ ಕ್ರಮ ವಹಿಸುವಂತೆ ಅಧಿಕಾರಿಗಳಿ ಸೂಚಿಸಿದ್ದೇನೆ. ಈಗಾಗಲೇ 8 ಕೈಗಾರಿಕೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪರಿಸರದ ನಿಯಮಗಳನ್ನು ಮೀರಿ ಕೈಗಾರಿಕೆಗಳನ್ನು ನಡೆಸುತ್ತಿದ್ದರೆ ಅವರ ವಿರುದ್ಧವು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

WhatsApp Image 2023 08 12 at 8.58.45 AM 1

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಮಾತನಾಡಿ, ತಿಂಗಳ ವಿದ್ಯುತ ಬಿಲ್ ಕಟ್ಟಲಾಗದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕೆಲವು ಜನರಿದ್ದಾರೆ. ಅವರಿಗೆ ಗೃಹಜ್ಯೋತಿ ಯೋಜನೆಯಿಂದ ಲಾಭವಾಗಲಿದೆ ಅದೇ ರೀತಿ ಗೃಹಲಕ್ಷ್ಮಿ ಯೋಜನೆಯಿಂದ ಮನೆಯ ಯಜಮಾನಿಯರು 2 ಸಾವಿರ ಪಡೆಯಲಿದ್ದಾರೆ. ಇದು ಅವರ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿದೆ. ರಾಜ್ಯ ಸರ್ಕಾರದ ಐದು ಮಹತ್ವಕಾಂಕ್ಷಿ ಯೋಜನೆಗಳ ಲಾಭವನ್ನು ರಾಜ್ಯದ ಶೇ.80 ರಿಂದ 90 ಪ್ರತಿಶತ ಜನ ಲಾಭ ಪಡೆಯಲಿದ್ದಾರೆ ಇದು ದೇಶಕ್ಕೆ ಮಾದರಿಯಾಗಲಿದೆ. ಮಹಿಳೆಯರಿಗೆ, ಯುವಕರಿಗೆ, ಸೇರಿದಂತೆ ರಾಜ್ಯದ ಎಲ್ಲಾ ಜನರು ಈ ಐದು ಯೋಜನೆಗಳಲ್ಲಿ ಒಂದಲ್ಲಾ ಒಂದು ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಗೃಹಜ್ಯೋತಿ ಯೋಜನೆಯಡಿ ಲಾಭ ಪಡೆದ ಫಲಾನುಭವಿಗಳಿಗೆ ಜೀರೊ ವಿದ್ಯುತ್ ಬಿಲ್ ವಿತರಿಸಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ ಸದಸ್ಯರುಗಳಾದ ಅರವಿಂದಕುಮಾರ ಅರಳಿ, ಭೀಮವಾರ ಬಿ. ಪಾಟೀಲ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಜೆಸ್ಕಾಂ ಕಲರ್ಬುರ್ಗಿ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಪಾಂಡ್ವೆ ರಾಹುಲ್ ತುಕಾರಾಮ್, ಜೆಸ್ಕಾಂ ಕಲಬುರ್ಗಿ ವಿಭಾಗದ ತಾಂತ್ರಿಕ ನಿರ್ದೇಶಕ ಮತ್ತು ಮುಖ್ಯ ಅಭಿಯಂತರ ಆರ್.ಡಿ. ಚಂದ್ರಶೇಖರ, ಬೀದರ ಜೇಸ್ಕಾಂ ಕಾರ್ಯ ಪಾಲಕ ಅಭಿಯಂತರರ ರಮೇಶ ಪಾಟೀಲ್, ಜೇಸ್ಕಾಂನ ವಿವಿಧ ಅಧಿಕಾರಿಗಳು, ಸಿಬ್ಬಂದಿಗಳು, ಗೃಹಜ್ಯೋತಿ ಯೋಜನೆಯ ಫಲಾನುಭವಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...