ಬೀದರ್‌ | ಸೌಹಾರ್ದತೆ ಸಾರುವ ಸುಗ್ಗಿ ಹಬ್ಬ ‘ಎಳ್ಳ ಅಮಾವಾಸ್ಯೆ’

Date:

ಗ್ರಾಮೀಣ ಭಾಗದಲ್ಲಿ ಅವಿಭಕ್ತ ಕುಟುಂಬಗಳು ಇರುವುದರಿಂದಲೇ ಸಮಾಜದಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸಿದೆ ಎಂದು ಅಖಿಲ ಭಾರತ ವಿಶ್ವವಿದ್ಯಾಲಯಗಳ ನೌಕರರ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯ ವೀರಭದ್ರಪ್ಪ ಅಭಿಪ್ರಾಯ ಪಟ್ಟರು

ಅಖಿಲ ಭಾರತ ವಿಶ್ವ ವಿದ್ಯಾಲಯಗಳ ನೌಕರರ ಒಕ್ಕೂಟ ಹಾಗೂ ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆ ಬೀದರ್ ಇವರ ಸಂಯುಕ್ತಾಶ್ರಯದಲ್ಲಿ ಬೀದರ್ ತಾಲೂಕಿನ ಕಂಗನಕೋಟ ಗ್ರಾಮದ ಓಂಕಾರ ಪಾಟೀಲ್ ಅವರ ತೋಟದಲ್ಲಿ ಎಳ್ಳ ಅಮಾವಾಸ್ಯೆ ನಿಮ್ಮಿತ್ತ ಆಯೋಜಿಸಿದ್ದ ಕವಿಗೋಷ್ಠಿ ಹಾಗೂ ಸುಗ್ಗಿ ಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, “ಪಟ್ಟಣಗಳಲ್ಲಿ ಒಬ್ಬರಿಗೊಬ್ಬರು ಅಪರಿಚಿತರಂತೆ ಇರುತ್ತಾರೆ. ಆದರೆ ಹಳ್ಳಿ ಗಳಲ್ಲಿ ಜನರು ಒಬ್ಬರಿಗೊಬ್ಬರು ಸೌಹಾರ್ದತೆಯಿಂದ ಬಾಳು ತ್ತಿರುವುದು ಸಂತಸದ ಸಂಗತಿಯಾಗಿದೆ” ಎಂದು ಅಭಿಪ್ರಾಯ ಪಟ್ಟರು.

ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅರವಿಂದ್ ಕುಲಕರ್ಣಿ ಅತಿಥಿಯಾಗಿ ಮಾತನಾಡಿ, “ಎಳ್ಳ ಅಮಾವಾಸ್ಯೆಯು ಸುಗ್ಗಿ ಹಬ್ಬವಾಗಿದೆ, ಕರ್ನಾಟಕದ ಸೌಹಾರ್ದತೆ ಮತ್ತು ಭಾವೈಕ್ಯತೆಯ ಸಂಕೇತವಾಗಿದ್ದು, ಈ ಹಬ್ಬವನ್ನು ರೈತರು ಭಕ್ತಿ ಪೂರ್ವಕವಾಗಿ ಆಚರಿಸುತ್ತಾರೆ. ಭೂಮಿತಾಯಿಗೆ ನೈವೇದ್ಯ ಅರ್ಪಿಸುವುದು, ಚರಗ ಚೆಲ್ಲುವುದು, ಹಳ್ಳಿಯ ಸೊಗಡುಗಳನ್ನು ಹಾಡುವುದು, ಜೋಕಾಲಿ ಆಟ, ಕೋಲಾಟ, ಮುಂತಾದವುಗಳನ್ನು ಏರ್ಪಡಿಸುವುದರಿಂದ, ಪಟ್ಟಣದಲ್ಲಿರುವ ಜನರನ್ನು ಹಳ್ಳಿಯ ಕಡೆ ಗಮನ ಹರಿಸುವಂತೆ ಮಾಡುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಬ್ಬದ ಸುಗ್ಗಿಯಲ್ಲಿ ಬರುವಂತಹ ಬೇಳೆ ಕಾಳುಗಳು, ಕಡಲೆ, ತೊಗರಿ, ಅವರೇ, ಅಲಸಂದಿ ಮುಂತಾದ ಕಾಳುಗಳಿಂದ ತಯಾರಿಸಲ್ಪಟ್ಟ ಭಜ್ಜಿ ಪಲ್ಲೆಯು ವಿಶೇಷ ವಾಗಿರುತ್ತದೆ. ಇದರೊಂದಿಗೆ ಸಜ್ಜಿ ರೊಟ್ಟಿ, ಜೋಳದ ಅನ್ನ, ಅಂಬಲಿ, ನುಚ್ಚು, ಕಡುಬು ಮುಂತಾದವುಗಳು ಗ್ರಾಮೀಣ ಭಾಗದಲ್ಲಿ ತಯಾರಿಸಲ್ಪಡುವ ವಿಶಿಷ್ಟ ಮೃಷ್ಟಾನ್ನ ಭೋಜನ ವನ್ನು ತಯಾರಿಸಿ ಜಾತಿಭೇದ ವಿಲ್ಲದೆ ಎಲ್ಲರೂ ಸಮಾನತೆಯಿಂದ ಕೂಡಿ ಬೆಳೆ ಬೆಳೆದು ನಿಂತ ಹೊಲದಲ್ಲಿ ಆಚರಿಸುವ ಸಂಭ್ರಮದ ಹಬ್ಬವಾಗಿರುತ್ತದೆ. ಇಂತಹ ಹಬ್ಬದಿಂದ ಸಮಾಜದಲ್ಲಿ ಸಮಾನತೆಯಿಂದ ಕೂಡಿ ಬಾಳುವ ಮನೋಭಾವನೆ ಬೆಳೆಯುತ್ತದೆ” ಎಂದು ಅಭಿಪ್ರಾಯಪಟ್ಟರು.

ಹಿರಿಯ ಸಾಹಿತಿ ಡಾ.ಎಂ.ಜಿ.ದೇಶಪಾಂಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಕರ್ನಾಟಕದ ಉತ್ತರ ಭಾಗದದಲ್ಲಿ ಆಚರಿಸುವ ಎಳ್ಳಮಾಸ್ಯೆಯು ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದ್ದು, ಜನರು ಹಬ್ಬದ ರುಚಿಯನ್ನು ಸವಿಯಲು ಬರುತ್ತಾರೆ” ಎಂದು ನುಡಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸಿದರು.

ಈ ಸುದ್ದಿ ಓದಿದ್ದೀರಾ? ಔರಾದ್ ಸೀಮೆಯ ಕನ್ನಡ | ಈವೊರ್ಷ್ ಯಳಮಾಸಿ ಭಜ್ಜಿ ಉಳ್ಳಾಕ್ ನಮ್ ಹೊಲ್ಕಡಿನೇ ಬರೀ

ಕಾರ್ಯಕ್ರಮದಲ್ಲಿ ಪ್ರಮುಖರಾದ ಅಶೋಕ್ ಬೂದಿಹಾಳ್, ಸುನಿತಾ ಆನಂದ, ಗುರು ಪ್ರಸಾದ್ ಉಪ್ಪೆ, ಸಮ್ಮುಖ ಶಂಭು, ಅಭಿ ಶಂಭು, ಸಂತೋಷ, ಸಂಗೀತ, ಬಸವರಾಜ ದಯಾಸಾಗರ, ಸಿದ್ದರಾಮ್ ವಾಗ್ಮರೆ ಸೇರಿದಂತೆ ಮುಂತಾದವರಿದ್ದರು. ಓಂಕಾರ್ ವಿಜಯ್ ಕುಮಾರ್ ಉಪ್ಪೆ ಸ್ವಾಗತಿಸಿದರು, ಸಂಜುಕುಮಾರ ಸ್ವಾಮಿ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...