ಔರಾದ ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಸ್ಮಶಾನ ಭೂಮಿ ಸಂಬಂಧಿಸಿದ ಗೊಂದಲ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಸರ್ವೇ ನಂ.29/3ರಲ್ಲಿ ಹಲವು ವರ್ಷಗಳಿಂದ ಜನವಸತಿ ಇರುವುದಾಗಿ ಸ್ಥಳೀಯರು ಹೇಳುತ್ತಿದ್ದರೆ, ಆದರೆ, ಇದೇ ಜಾಗವನ್ನು 2022-23ರ ಪಹಣಿ ಮರುಸೃಜನ ಪ್ರಕ್ರಿಯೆಯಲ್ಲಿ ಸಾರ್ವಜನಿಕ ಸ್ಮಶಾನಕ್ಕಾಗಿ 20 ಗುಂಟೆ ಭೂಮಿಯನ್ನು ಕಾಯ್ದಿರಿಸಿರುವುದು ವಿಚಾರ ದಾಖಲೆಗಳಿಂದ ತಿಳಿದು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮತ್ತು ಗೊಂದಲ ಹೆಚ್ಚಾಗಿದೆ.
ದೀರ್ಘಕಾಲದಿಂದ ಜನರು ವಾಸಿಸುತ್ತಿರುವ ಜಾಗವನ್ನು ಸ್ಮಶಾನಕ್ಕೆ ಮೀಸಲಿಡುವುದು ಸರಿಯಲ್ಲ. ಸರ್ಕಾರದ ದಾಖಲೆಗಳಲ್ಲಿ ಇಂತಹ ವ್ಯತ್ಯಾಸ ಕಾಣಿಸಿಕೊಳ್ಳುತ್ತಿರುವುದು ಆಡಳಿತಾತ್ಮಕ ದೋಷವೇ ಅಥವಾ ನಿರ್ಲಕ್ಷ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಸ್ಮಶಾನ ಭೂಮಿಯ ನಿಖರ ಗುರುತನ್ನು ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಕುರಿತು ಸ್ಥಳೀಯ ನಿವಾಸಿ ಶಿವಕುಮಾರ್ ಸಾದುರೆ ಮಾತನಾಡಿ, ʼಜನವಸತಿ ಇರುವ ಜಾಗವನ್ನು ಸ್ಮಶಾನಕ್ಕೆ ಮೀಸಲಿಡುವುದು ನ್ಯಾಯಸಮ್ಮತವಲ್ಲ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಸ್ಪಷ್ಟನೆ ನೀಡಬೇಕುʼ. ಸ್ಮಶಾನಕ್ಕಾಗಿ ತತ್ಕ್ಷಣ ಜಮೀನು ಗುರುತಿಸಬೇಕುʼ ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಬೀದರ್ | ʼಜಲ ಜೀವನʼಕ್ಕೆ ಗ್ರಹಣ, ಹನಿ ನೀರಿಗೂ ತತ್ವಾರ; ಬೇಕಿದೆ ದೂರಗಾಮಿ ಪರಿಹಾರ-ಭಾಗ-1





