ಔರಾದ್‌ | ಸಮಾನತೆ ಸಂದೇಶ ಸಾರಿದ ಸಂತ ಸೇವಾಲಾಲ್‌ : ಶಾಸಕ ಪ್ರಭು‌ ಚವ್ಹಾಣ

Date:

ಬಂಜಾರಾ ಸಮಾಜವು ಅನಕ್ಷರತೆ, ಅಂಧಶ್ರದ್ಧೆ ಮತ್ತು ಬಡತನದಂತಹ ನಾನಾ ಸಮಸ್ಯೆಗಳಿಂದ ಬಳಲಿತ್ತು. ಸಾಮಾಜಿಕ, ಆರ್ಥಿಕವಾಗಿ  ತೀವ್ರ ಹಿಂದುಳಿದಿತ್ತು. ಅಂತಹ ಸಮಯದಲ್ಲಿ ಸಂತ ಸೇವಾಲಾಲ್‌ ಮಹಾರಾಜರು ಸಮಾಜದಲ್ಲಿ ಜಾಗೃತಿ ಮೂಡಿಸಿ, ಶಿಸ್ತು, ನೈತಿಕತೆ ಮತ್ತು ಸಮಾನತೆಯ ಸಂದೇಶ ಸಾರಿದರು ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಹೇಳಿದರು.

ಸಂತ ಸೇವಾಲಾಲ್ ಮಹಾರಾಜರ 287ನೇ ಜಯಂತಿ ಪ್ರಯುಕ್ತ ಭಾನುವಾರ ಘಮಸುಬಾಯಿ ತಾಂಡಾ ಬೋಂತಿಯ ಗೃಹ ಕಚೇರಿಯಲ್ಲಿ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿ, ʼಸಂತ ಸೇವಾಲಾಲ್ ಮಹಾರಾಜ ಅವರು ದೇಶ ಕಂಡ ಬಹುದೊಡ್ಡ ಸಂತ, ಮಹಾ ತಪಸ್ವಿ, ಬಂಜಾರಾ ಸಮುದಾಯದ ಧರ್ಮಗುರು, ಸಮಾಜ ಸುಧಾರಕರು. ವಿಶೇಷವಾಗಿ ಬಂಜಾರಾ ಸಮಾಜದ ಉನ್ನತಿಗೆ ಹುಟ್ಟಿ ಬಂದ ಅವತಾರ ಪುರುಷರಾಗಿದ್ದಾರೆʼ ಎಂದರು.

ʼದುಶ್ಚಟಗಳಿಗೆ ಸಿಲುಕಿದ್ದ ಅನೇಕರ ಜೀವನವನ್ನು ಅವರು ಸತ್ಸಂಗ, ಸನ್ಮಾರ್ಗ ಮತ್ತು ಉತ್ತಮ ಮೌಲ್ಯಗಳ ಮೂಲಕ ಪರಿವರ್ತಿಸಿದ್ದರು. ಸಮಾಜದಲ್ಲಿ ನೈತಿಕತೆ, ಸತ್ಯನಿಷ್ಠೆ, ಭಕ್ತಿ ಮತ್ತು ಶ್ರಮದ ಮಹತ್ವವನ್ನು ಸಾರಿದ್ದರು. ಅಂಧಶ್ರದ್ಧೆಗಳನ್ನು ತೊಲಗಿಸಿ, ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿ, ಆತ್ಮಗೌರವದಿಂದ ಬದುಕುವಂತೆ ಕಲಿಸಿಕೊಟ್ಟ ಮಹಾನ್ ಗುರು ಅವರಾಗಿದ್ದರುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಅನ್ಯಾಯ, ಶೋಷಣೆಯ ವಿರುದ್ಧ ಧೈರ್ಯವಾಗಿ ಹೋರಾಡಿ ಬಂಜಾರಾ ಸಮಾಜವನ್ನು ಸಂಘಟಿತಗೊಳಿಸಿದ್ದರು. ಅವರ ತತ್ವಾದರ್ಶಗಳು ಬಂಜಾರಾ ಸಮಾಜದಲ್ಲಿ ಒಗ್ಗಟ್ಟು ಮತ್ತು ಸ್ವಾವಲಂಬನೆಗೆ ದಾರಿದೀಪವಾಗಿವೆ. ಬಂಜಾರಾ ಸಮಾಜದ ಏಳಿಗೆಯಲ್ಲಿ ಸೇವಾಲಾಲ್ ಅವರ ಪಾತ್ರ ಪ್ರಮುಖವಾಗಿದೆ. ನನ್ನ ಊರಿನಲ್ಲಿ ಮಾತಾ ಜಗದಂಬಾ, ಸೇವಾಲಾಲ್ ಮಹಾರಾಜ ಮತ್ತು ಕುಲಗುರು ಡಾ.ರಾಮರಾವ ಮಹಾರಾಜರ ಮಂದಿರಗಳನ್ನು ನಿರ್ಮಿಸಿ ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇನೆʼ ಎಂದರು.

ʼಸೇವಾಲಾಲ್ ಮಹಾರಾಜರ ಜೀವನ ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಅವರ ತ್ಯಾಗ, ಸೇವಾ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಇನ್ನಷ್ಟು ಉನ್ನತಿಯಾಗಲು ಸಾಧ್ಯ. ಸೇವಾಲಾಲ್‌ ಅವರ ತತ್ವ ಸಿದ್ಧಾಂತಗಳು ಎಲ್ಲರೂ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕಾಗಿದೆʼ ಎಂದು ನುಡಿದರು.

ಇದನ್ನೂ ಓದಿ : ಯಾದಗಿರಿ | ರಸ್ತೆ ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ : ಸ್ಥಳದಲ್ಲಿಯೇ ಮೂವರು ಸಾವು

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಸಚಿನ ರಾಠೋಡ,  ಸುಭಾಷ ರಾಠೋಡ, ಬಳವಂತ ಪವಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...