ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಹಾಗೂ ಚನ್ನಬಸವ ಪಟ್ಟದ್ದೇವರ
27ನೆಯ ಸ್ಮರಣೋತ್ಸವ ಮತ್ತು ವಚನ ಜಾತ್ರೆ ಹಾಗೂ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ಯ ಏಪ್ರಿಲ್ 1ರಿಂದ 20ರವರೆಗೆ ಪ್ರತಿದಿನ ಸಾಯಂಕಾಲ 6 ಗಂಟೆಗೆ ಹಂದಿಗುಂದದ ಸಿದ್ಧೇಶ್ವರ ಮಠದ ಶಿವಾನಂದ ಮಹಾಸ್ವಾಮಿ ಅವರಿಂದ ನಡೆಯಲಿರುವ ಬಸವ ದರ್ಶನ ಪ್ರವಚನದ ಕರಪತ್ರ ಬಿಡುಗಡೆಗೊಳಿಸಲಾಯಿತು.
ಸಾನಿಧ್ಯ ವಹಿಸಿದ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ʼಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ ಹಾಗೂ ವಚನ ಜಾತ್ರೆ ಹಾಗೂ ನನ್ನ ಅಮೃತ ಮಹೋತ್ಸವ ನೆಪ ಮಾತ್ರ. ಆದರೆ ಆ ನೆಪದಲ್ಲಿ ಬಸವತತ್ವ ಪ್ರಸಾರ ಮಾಡುವುದೇ ನಮ್ಮ ಮೂಲ ಉದ್ದೇಶವಾಗಿದೆ. ಅದಕ್ಕಾಗಿ ಈ ವರ್ಷ ಬಸವದರ್ಶನ ಪ್ರವಚನವನ್ನು ಏರ್ಪಡಿಸಲಾಗಿದೆ. ಅದಕ್ಕಾಗಿ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ತಾವೆಲ್ಲರೂ ಪ್ರಯತ್ನಸಬೇಕುʼ ಎಂದರು.
ʼಇಂದಿನ ದಿನಮಾನಗಳಲ್ಲಿ ಮನೆ-ಮನೆ ತೆರಳಿ ಆಮಂತ್ರಣ ನೀಡುವ ಅನಿವಾರ್ಯತೆ ಉಂಟಾಗಿದೆ. ಧರ್ಮ ಕಾರ್ಯಕ್ಕಾಗಿ ದುಡಿದವರಿಗೆ ದೇವರ ಕರುಣೆ ಆಗುತ್ತದೆ. ಬಸವಗುರುವಿನ ಕರುಣೆ ಆಗಬೇಕಾದರೆ ನಾವು ಬಸವಕಾರ್ಯಕ್ಕೆ
ದುಡಿಯುವುದನ್ನು ಕಲಿಯಬೇಕು. ಬಸವತತ್ವ ಪ್ರಸಾರದ ಕಳಕಳಿ ನಮ್ಮಲ್ಲಿ ಇರಬೇಕು. ನಮ್ಮ ಕೌಟುಂಬಿಕ
ಕಾರ್ಯಕ್ಕಾಗಿ ನಾವು ಎಲ್ಲರಿಗೆ ಹೇಗೆ ಪ್ರೀತಿಯಿಂದ ಆಮಂತ್ರಿಸುತ್ತೇವೆ, ಅದೇ ರೀತಿ ಈ ಕಾರ್ಯಕ್ರಮಕ್ಕೆ ತಾವೆಲ್ಲರೂ
ಸಮಯ ನೀಡಿದರೆ ಈ ಕಾರ್ಯಕ್ರಮ ಯಶಸ್ವಿಯಾಗುತ್ತದೆʼ ಎಂದು ಹೇಳಿದರು.
ಕಲಬುರಗಿಯ ಹಿರಿಯ ಸಾಹಿತಿ ಕಲ್ಯಾಣರಾವ ಪಾಟೀಲ ಕರಪತ್ರ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಮಲ್ಲಮ್ಮ ಆರ್.ಪಾಟೀಲ ಅವರಿಗೆ ಕರ್ನಾಟಕ ಸರಕಾರದ ಕಿತ್ತೂರು ರಾಣಿ ಪ್ರಶಸ್ತಿ ಘೋಷಣೆ ಆದ
ಪ್ರಯುಕ್ತ ಪೂಜ್ಯರಿಂದ ಸನ್ಮಾನಿಸಲಾಯಿತು.
ಇದನ್ನೂ ಓದಿ : ಬೀದರ್ನಲ್ಲಿ ಮಾ.25ರಂದು ಉದ್ಯೋಗ ಮೇಳ
ಪ್ರವಚನ ಸೇವಾ ಸಮಿತಿ ಅಧ್ಯಕ್ಷೆ ಪಂಕಜಾ ಶಿವು ಲೋಖಂಡೆ, ರೇಖಾ ಶಿವರಾಜ ಮಹಾಜನ, ರೇಖಾಬಾಯಿ
ರಾಜಶೇಖರ ಅಷ್ಟೂರೆ, ನಿರ್ಮಲಾ ಚಂದ್ರಕಾಂತ ಪಾಟೀಲ, ಶಾರದಾಬಾಯಿ ಬಾಬುರಾವ ಹುಣಜೆ, ಸುನೀತಾ
ಮಹಾದೇವಪ್ಪ ಮಮ್ಮಾ, ರುದ್ರಾಣಿ ವಿಲಾಸ ಬಕ್ಕಾ, ಸುವರ್ಣಾ ಓಂಕಾರ ಬಲ್ಲೂರೆ, ಪ್ರೇಮಲಾ ಶರಣಪ್ಪ ತೊಂಡಾರೆ,
ವನೀತಾ ಶಿವಕುಮಾರ ಪಾಟೀಲ, ಬಸಮ್ಮತಾಯಿ, ಶಂಭುಲಿಂಗ ಕಾಮಣ್ಣ, ನಾಗಶೆಟ್ಟೆಪ್ಪ ಲಂಜವಾಡೆ, ಗುಂಡಪ್ಪ
ಸಂಗಮಕರ, ಶಾಂತಯ್ಯ ಸ್ವಾಮಿ, ರಾಜು ಜುಬರೆ, ಮಲ್ಲಿಕಾರ್ಜುನ ಹುಣಜೆ, ದೀಪಕ್ ಠಮಕೆ ಮುಂತಾದವರು ಉಪಸ್ಥಿತರಿದ್ದರು.





