ಬಸವಕಲ್ಯಾಣ | ಸಸ್ಯ ಸಂಪತ್ತಿನಿಂದ ಬದುಕು ನೆಮ್ಮದಿ : ವೈಜಯಂತಾ ತ್ರಿಮುಖೆ

Date:

ಸಸ್ಯ ಸಂಪತ್ತಿನಿಂದಲೆ ಮನುಷ್ಯನ ಬದುಕು ನೆಮ್ಮದಿಯಿಂದ ಇರಲು ಸಾಧ್ಯ. ಗಿಡ ಮರಗಳ ನೆಲೆಯಲ್ಲಿ ದೊಡ್ಡ ಜೀವಜಾಲ ಅಡಗಿದೆ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ವೈಜಯಂತಾ ತ್ರಿಮುಖೆ ಹೇಳಿದರು.

ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಿಂದ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸಹಯೋಗದಲ್ಲಿ ತಾಲೂಕಿನ ಹಳ್ಳಿ ಗ್ರಾಮದಲ್ಲಿರುವ ತೋಟಗಾರಿಕೆ ಕೇಂದ್ರದಲ್ಲಿ ಶ್ರೀ ಬಸವೇಶ್ವರ ಪದವಿ ಕಾಲೇಜಿನ ಜೀವವಿಜ್ಞಾನ ವಿಭಾಗದಿಂದ ಈಚೆಗೆ ಹಮ್ಮಿಕೊಂಡಿದ್ದ ಜೀವ ಜಾಲ ಅಧ್ಯಯನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ʼವಿದ್ಯಾರ್ಥಿಗಳಲ್ಲಿ ನೆಲ, ನೀರು, ಸಸ್ಯ ಸಂಸ್ಕೃತಿಯ ಗಂಭೀರ ಅಧ್ಯಯನ ಅಗತ್ಯ. ಸಸ್ಯ ಕಸೀಕರಣ, ತೋಟಗಾರಿಕೆ ತರಬೇತಿ ಮೂಲಕ ಆಸಕ್ತ ರೈತರಿಗೆ ಅನುಕೂಲವಾಗುವ ಹಾಗೂ ಲಾಭದಾಯಕ ಬೆಳೆ ಬೆಳೆಯಲು ಇಲಾಖೆಯಿಂದ ಹಲವು ಯೋಜನೆಗಳು ಅನುಷ್ಠಾನಕ್ಕೆ ತರಲಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಹಳ್ಳಿ ತೋಟಗಾರಿಕೆ ಕೇಂದ್ರದ ಅಧಿಕಾರಿ ಶ್ರೀಧರ್ ಪೂಜಾರಿ ಮಾತನಾಡಿ, ʼಸಸ್ಯ ಸಂಸ್ಕೃತಿಯ ಸಂಶೋಧನಾತ್ಮಕ ಅಧ್ಯಯನಗಳು ಕಾಲೇಜು ಮತ್ತು ವಿಶ್ವವಿದ್ಯಾಲಯ ಮಟ್ಟದಲ್ಲಿ ನಡೆಯುತ್ತವೆ. ತೋಟಗಾರಿಕೆ ಇಲಾಖೆ ರೈತರ ಮತ್ತು ಸರ್ಕಾರದ ಯೋಜನೆಗಳ ನಡುವಿನ ಸೋಪಾನವಾಗಿದೆʼ ಎಂದು ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಮಾತನಾಡಿ, ʼಗುಡ್ಡ, ಬೆಟ್ಟ, ನೀರು, ನೆಲ ನಿಸರ್ಗದ ಬಹುದೊಡ್ಡ ಜೀವಜಗತ್ತು ಕಾಪಿಟ್ಟುಕೊಂಡು ಬಂದಿದೆ. ಮನುಷ್ಯನ ಹಪಾಹಪಿತನದಿಂದ ಪ್ರಕೃತಿ ಹಲ್ಲೆಗೊಳಗಾಗುತ್ತಿದೆ. ನಗರ ಕೇಂದ್ರಿತ ಜೀವನದ ಹಂಬಲದಿಂದ ನಿಸರ್ಗಕ್ಕೆ ನಿರ್ಲಕ್ಷಿಸಲಾಗುತ್ತಿದೆʼ ಎಂದು ಬೇಸರ ವ್ಯಕ್ತಪಡಿಸಿದರು.

ʼಆಧುನಿಕತೆ, ಅಭಿವೃದ್ಧಿ ಎಂಬುದು ಜೀವ ಸಂಕುಲಕ್ಕೆ ಅನುಕೂಲವೊ ಅಪಾಯವೊ ಯೋಚಿಸಬೇಕಿದೆ. ಗಣಿಗಾರಿಕೆಯಿಂದ ಕಾಡಿನ ಸಂಪತ್ತು, ರಿಯಲ್ ಎಸ್ಟೇಟ್ ಗಳಿಂದ ಅನ್ನ ಕೊಡುವ ಫಲವತ್ತಾದ ನೆಲ ಸಂಪತ್ತು ಬಂಡವಾಳಶಾಹಿಗಳ ವಶವಾಗುತ್ತಿದೆ.
ಮನುಷ್ಯನ ಅನಿಯಂತ್ರಿತ ಆಮಿಷಗಳಿಂದ ಪ್ರಾಕೃತಿಕ ಸಂಪತ್ತಿಗೆ ಅಪಾಯ ಒದಗಿದೆʼ ಎಂದರು.

ಬಿ.ಎಸ್ಸಿ ಜೀವವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಸಿಕಸಿ, ಜೇನು ಸಾಕಾಣಿಕೆ, ರೇಷ್ಮೆ ಕೃಷಿ, ಎರೆಹುಳು ಬಗೆಗೆ ಕ್ರೇತ್ರಾಧ್ಯಯನ ನಡೆಸಿದರು. ಜೀವ ವಿಜ್ಞಾನ ವಿಭಾಗ ಮುಖ್ಯಸ್ಥ ಅಶೋಕ ರೆಡ್ಡಿ ಗದಲೇಗಾವ ಮಾತನಾಡಿದರು

ಇದನ್ನೂ ಓದಿ : ಬೀದರ್‌ | ವೇಶ್ಯಾವಾಟಿಕೆ ದಂಧೆ : ಹೊರ ರಾಜ್ಯದ 5 ಮಹಿಳೆಯರ ರಕ್ಷಣೆ; ಇಬ್ಬರ ಆರೋಪಿಗಳ ಬಂಧನ

ಕುಶಾಲತಾ ಕಂಬಾರ, ರೇಷ್ಮೆ ಇಲಾಖೆಯ ಬಸವರಾಜ ಗದಲೇಗಾಂವ ಮತ್ತಿತರರಿದ್ದರು. ವಿವೇಕಾನಂದ ಶಿಂಧೆ ಸ್ವಾಗತಿಸಿದರು. ಸಂಗೀತಾ ಮಹಾಗಾವೆ ನಿರೂಪಿಸಿದರು. ಪ್ರಿಯಾ ಚೌಹಾಣ್ ವಂದಿಸಿದರು.

6378a520579666f153c2fe302416fd40eb44392fa3ff3c717bc425bc472039bf?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...