ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ ಮಹಾತ್ಮ ಜೋತಿಭಾ ಫುಲೆ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಾಳೆ (ಮಾ.21) ಬೆಳಿಗ್ಗೆ 11ಗಂಟೆಗೆ ʼಸಮಾನತೆ ಸಭೆʼ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರಾದ ಕಾಶಿನಾಥ ಚೆಲವಾ ತಿಳಿಸಿದ್ದಾರೆ.
ಸಭೆಯಲ್ಲಿ ಚಲನ ಚಿತ್ರ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಆಗಮಿಸುತ್ತಿದ್ದಾರೆ. ಸಮಾನ ಮನಸ್ಕರೊಂದಿಗೆ ಸಂವಾದ ನಡೆಸಲಿದ್ದಾರೆ. ಸಭೆಯಲ್ಲಿ ವಿವಿಧ ಜನಪರ ಸಂಘಟನೆಗಳ ಮುಖಂಡರು, ಸಾಮಾಜಿಕ ಚಿಂತಕರು, ಗಣ್ಯರು ಭಾಗವಹಿಸಲಿದ್ದಾರೆ.
ಜಿಲ್ಲೆಯ ಸಮಾನ ಮನಸ್ಕರು, ಸಾಮಾಜಿಕ ಹೋರಾಟಗಾರರು, ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡು ವಿಚಾರಗಳನ್ನು ಹಂಚಿಕೊಳ್ಳಬೇಕೆಂದು ಕಾರ್ಯಕ್ರಮ ಸಂಯೋಜಕ ಮುಕೇಶ ಚೆಲವಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!
ನಟ ಚೇತನ ಅಹಿಂಸಾ ಅವರು ಸಮಾನತೆ ಮತ್ತು ಸಾಮರಸ್ಯಕ್ಕಾಗಿ ಜನರನ್ನು ಒಗ್ಗೂಡಿಸಲು ರಾಜ್ಯಾದ್ಯಂತ ಸಮಾನತೆಯ ಸಭೆಗಳನ್ನು ಆಯೋಜಿಸುತ್ತಿದ್ದಾರೆ. ವಿದ್ಯಾರ್ಥಿಗಳು, ಸಮಾನತೆ ಸಮಾಜ ಆಶಯದ ಮನಸ್ಸುಗಳು ಭಾಗವಹಿಸಬೇಕೆಂದು ಕೋರಿದ್ದಾರೆ.





