ಬೀದರ್‌ | ಗೋಲ್ಡನ್ ಸ್ಕಾಲರಶಿಪ್ ಪ್ರವೇಶ ಪರೀಕ್ಷೆ : 1,207 ಮಕ್ಕಳು ಪರೀಕ್ಷೆಗೆ ಹಾಜರು

Date:

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಪ್ರತಿ ವರ್ಷದಂತೆ ಭಾನುವಾರ 2026-27ನೇ ಸಾಲಿನ ಮೊದಲ ಹಂತದ ಗುರುಕುಲ ಗೋಲ್ಡನ್ ಸ್ಕಾಲರಶಿಪ್ ಪ್ರವೇಶ ಪರೀಕ್ಷೆ ಸುಸೂತ್ರವಾಗಿ ನಡೆದವು.

2026ರ ಜನವರಿ ಅಂತ್ಯದ ವರೆಗೂ ಐದು ಹಂತದಲ್ಲಿ ಪರೀಕ್ಷೆ ನಡೆಯಲಿದ್ದು ಮೊದಲ ಹಂತದ ಪರೀಕ್ಷೆಗೆ ರಾಜ್ಯ ಸೇರಿ ನೆರೆಯ ಮಹಾರಾಷ್ಟ್ರ ತೆಲಂಗಾಣ ರಾಜ್ಯದ ನಾನಾ ಕಡೆಗಳಿಂದ 1,900 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು. ಅದರಲ್ಲಿ ವಿವಿಧೆಡೆ ಪ್ರಸ್ತುತ ಎಸ್ಸೆಸ್ಸೆಲ್ಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 1,207 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು.

ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಸೇರಿದಂತೆ ರಾಜ್ಯದ ಸುಮಾರು 25 ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ತೆಲಂಗಾಣ ರಾಜ್ಯದ ಜಹೀರಾಬಾದ್, ಹೈದರಾಬಾದ್ ಮತ್ತು ಮಹಾರಾಷ್ಟ್ರದ ನಾಂದೇಡ, ಲಾತೂರು, ಉದಗೀರ, ಸೋಲಾಪುರ ಸೇರಿದಂತೆ ಮುಂತಾದ ಕಡೆಗಳಿಂದ ವಿದ್ಯಾರ್ಥಿಗಳು ಆಗಮಿಸಿ ಪರೀಕ್ಷೆ ಬರೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

100 ಮಕ್ಕಳಿಗೆ ಉಚಿತ ಶಿಕ್ಷಣ :

ಗುರುಕುಲ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆಯಲ್ಲಿ ಮೊದಲ 100 ರ‍್ಯಾಂಕ್ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ ಎರಡು ವರ್ಷ ಪಿಯುಸಿ ಶಿಕ್ಷಣ, ವಸತಿ, ಕೋಚಿಂಗ್ ಮತ್ತು ರಿಯಾಯಿತಿ ಫೀನಲ್ಲಿ ಶಿಕ್ಷಣ ಸಿಗಲಿದೆ. ಮೊದಲ 25 ರ‍್ಯಾಂಕ್
ಪಡೆಯುವ ವಿದ್ಯಾರ್ಥಿಗಳು ಉಚಿತ ಶಿಕ್ಷಣ, ವಸತಿ ಮತ್ತು ಕೋಚಿಂಗ್ ಸೌಲಭ್ಯ ಪಡೆಯಲಿದ್ದಾರೆ. 75 ವಿದ್ಯಾರ್ಥಿಗಳು ಶೇ.50ರಷ್ಟು ರಿಯಾಯಿತಿಯಲ್ಲಿ ಶಿಕ್ಷಣ, ವಸತಿ, ಕೋಚಿಂಗ್ ಸೌಲಭ್ಯ ಪಡೆದುಕೊಳ್ಳಲಿದ್ದಾರೆ.

ಇದನ್ನೂ ಓದಿ : ಬೀದರ್‌ | ಮುಗಿಯದ ಸಮುದಾಯ ಮಹಿಳಾ ಶೌಚಾಲಯ ಕಾಮಗಾರಿ : ತೆರೆಯದ ಬಾಗಿಲು!

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ʼಗಡಿ ಭಾಗದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಮತ್ತು ರಿಯಾಯಿತಿ ಫೀ ನಲ್ಲಿ ಶಿಕ್ಷಣ, ವಸತಿ ಮತ್ತು ಕೋಚಿಂಗ್ ನೀಡುವ ಸದಾಶಯದೊಂದಿಗೆ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ರೂಪಿಸಿರುವ ಗುರುಕುಲ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆಗೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದು ಸಂತಸ ತರಿಸಿದೆʼ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಎಪ್ರಿಲ್‌ನಲ್ಲಿ ವಚನ ಜಾತ್ರೆ, ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ: ಕರಪತ್ರ ಬಿಡುಗಡೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು ಸಲ್ಲಿಸುತ್ತಿರುವ...

ಬೀದರ್‌ | ʼಈದಿನʼದ ಐದು ಸಣ್ಣ ಸುದ್ದಿಗಳು ಓದಿ

ಬೀದರ್‌ | ಫೆ.22-23ರಂದು ವಿವಿಧ ಮೇಳ ಆಯೋಜನೆ : ಕೃಷಿ ಇಲಾಖೆಯ...

ಬೀದರ್‌ | ಭಗವಂತ ಖೂಬಾ ಮೇಲಿನ ಪ್ರಕರಣ ದ್ವೇಷ ರಾಜಕಾರಣಕ್ಕೆ ಸಾಕ್ಷಿ : ಸೋಮನಾಥ ಪಾಟೀಲ್

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಬಿಜೆಪಿ ಪಕ್ಷದ ನಾಯಕರು,...

ಸಚಿವ ಖಂಡ್ರೆಗೆ ನಿಂದನೆ : ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ದೂರು ದಾಖಲು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ...