ಬೀದರ್‌ | 8 ದಿನಗಳ ʼಧಮ್ಮ ಪ್ರವಚನʼ ಸಮಾರೋಪ

Date:

ಬೀದರ್ ನಗರದ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ಫೆಬ್ರವರಿ 22ರಿಂದ ಮಾರ್ಚ್ 1ರವರೆಗೆ 8 ದಿನಗಳ ಕಾಲ ಪ್ರತಿ ದಿನ ಸಂಜೆ ನಡೆದ ಧಮ್ಮ ಪ್ರವಚನ ಮಾಲಿಕೆಯ ಸಮಾರೋಪ ಸಮಾರಂಭವು ಭಾನುವಾರ ನೆರವೇರಿತು.

ಮುಖ್ಯ ಪ್ರವಚನಕಾರ ಭಂತೆ ಡಾ.ಕಲ್ಲಯಾಣ ಸಿರಿ ಮಾತನಾಡಿ, ʼಧಮ್ಮ ಸಂಸ್ಕಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಕಾರ್ಯಗತಗೊಳಿಸಿದಾಗ ಮಾತ್ರ ಬಾಬಾ ಸಾಹೇಬರ ಕನಸು ನನಸಾಗುತ್ತದೆ. ಅಂಬೇಡ್ಕರ್‌ ಅವರು ಶೋಷಿತರ, ದಮನಿತರ ಶ್ರೇಯೋಭಿವೃದ್ಧಿಗಾಗಿ ಬೌದ್ಧ ಧಮ್ಮವನ್ನು ಸ್ವೀಕರಿಸಿ, ಇತರರಿಗೂ ಧಮ್ಮ ಮಾರ್ಗವನ್ನು ಅನುಸರಿಸುವಂತೆ ಕರೆ ನೀಡಿದ್ದರು. ಬೌದ್ಧ ಧಮ್ಮವನ್ನು ಬೌದ್ಧಿಕವಾಗಿ ಅರ್ಥ ಮಾಡಿಕೊಂಡು ಅನುಸರಿಸುವ ಅಗತ್ಯವಿದೆʼ ಎಂದು ಅವರು ಅಭಿಪ್ರಾಯಪಟ್ಟರು

ಭಾರತೀಯ ಬೌದ್ಧ ಮಹಾಸಭೆ ಜಿಲ್ಲಾಧ್ಯಕ್ಷ ರಾಜಪ್ಪ ಗುನ್ನಳ್ಳಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಎಂಟು ದಿನಗಳ ಕಾಲ ವಿವಿಧ ವಿಷಯಗಳ ಕುರಿತು ಭಿಕ್ಕುಗಳ ಬೋಧನೆಗಳಿಂದ ಧಮ್ಮದ ತತ್ವಗಳನ್ನು ತಿಳಿದುಕೊಳ್ಳುವ ಅವಕಾಶ ದೊರೆತಿದೆ. ಬೌದ್ಧರಾದರೆ ಮೀಸಲಾತಿಗೆ ಧಕ್ಕೆಯಾಗುವುದಿಲ್ಲʼ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಗ್ರಾಮೀಣ ಪ್ರದೇಶಗಳಲ್ಲಿ ಬೌದ್ಧಾಚಾರ್ಯರ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ. ಪ್ರತಿ ಮನೆಗೊಬ್ಬ ಸಮತಾ ಸೈನಿಕರನ್ನಾಗಿ ಮಾಡುವ ಸಂಕಲ್ಪ ಕೈಗೊಳ್ಳಬೇಕು. ಸಮುದಾಯ ಭವನಗಳು ಮತ್ತು ಬೌದ್ಧ ವಿಹಾರಗಳು ಶಿಕ್ಷಣ ಕೇಂದ್ರಗಳಾಗಿ ರೂಪುಗೊಳ್ಳಬೇಕುʼ ಎಂದು ಹೇಳಿದರು.

WhatsApp Image 2026 03 03 at 8.50.07 AM

ಆಣದೂರು ವೈಶಾಲಿನಗರದ ಭಂತೆ ಧಮ್ಮಾನಂದ, ಹಿಪ್ಪಳಗಾಂವ ಭಂತೆ ಬೋಧಿರತ್ನ ಮತ್ತು ಭಂತೆ ವರಜ್ಯೋತಿಯ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಕರುಣಾ ಸಾಗರರವರ ನೇತ್ರತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಧಮ್ಮಕಾರ್ಯದಲ್ಲಿ ಜೀವನ ಸಮರ್ಪಿಸಿದ ಮಹನೀಯರಿಗೆ ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್‌ | ಕುಡಿಯುವ ನೀರಿನ ಸಮಸ್ಯೆಯೇ? : ನೇರವಾಗಿ ಅಧಿಕಾರಿಗಳಿಗೆ ಸಂಪರ್ಕಿಸಲು ಮನವಿ

ಭಂತೆ ಧಮ್ಮದೀಪ, ಸಂಘಜ್ಯೊತಿ, ಸಂಘ ಸೇವಕ, ಶಾಂತಿ ಸಮಣ, ಮಹಾಸಭೆಯ ಭಾಲ್ಕಿ ತಾಲೂಕಾಧ್ಯಕ್ಷ ವಿಜಯಕುಮಾರ ಗಾಯಕವಾಡ, ರಾಜ್ಯ ಪದಾಧಿಕಾರಿ ಬಾಬು ಆಣದೂರೆ, ಕಾಶಿನಾಥ ಚಲುವಾ, ಮಂಜುಳಾ ಭಾವಿದೊಡ್ಡಿ, ಸಂತೋಷ ಫುಲೆ, ತುಕಾರಾಮ ಗೌರೆ ಹಾಗೂ ಬಾಬಶೆಟ್ಟಿ ಮಂಠಾಳಕರ್‌ ಉಪಸ್ಥಿತರಿದ್ದರು. ಚಂದ್ರಕಲಾ ಬಡಿಗೇರ್ ನಿರೂಪಿಸಿದರು.‌ ಮಹಾಸಭೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿಂಗೆ ಸೂರ್ಯಕಾಂತ ಸ್ವಾಗತಿಸಿದರು. ಬೀದರ ತಾಲೂಕಾಧ್ಯಕ್ಷ ಶಿವಕುಮಾರ ಸದಾಫುಲೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...