ಬೀದರ್‌ | ರಾಜ್ಯ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿಗೆ ಹೆಚ್ಚಿನ ಅನುದಾನ ಮೀಸಲಿಡಿ : ಡಿವಿಪಿ ಆಗ್ರಹ

Date:

ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಒತ್ತಾಯಿಸಿ ಬೀದರ್‌ ಜಿಲ್ಲಾ ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

ʼದೇಶ ಸ್ವಾತಂತ್ರ‍್ಯ ಪಡೆದು 75 ವರ್ಷಗಳಾದರೂ, ಸಂವಿಧಾನ ಜಾರಿಗೆ ಬಂದು ದೀರ್ಘಕಾಲವಾದರೂ ಪರಿಶಿಷ್ಟ ಜಾತಿ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಸಮರ್ಪಕವಾಗಿ ಅಭಿವೃದ್ಧಿಯಾಗಿಲ್ಲ. ಹಲವು ಸರ್ಕಾರಗಳು ಅಧಿಕಾರಕ್ಕೆ ಬಂದರೂ ಸಮುದಾಯಕ್ಕೆ ನೀಡುವ ಅನುದಾನಗಳು ಸಮರ್ಪಕವಾಗಿ ತಲುಪುತ್ತಿಲ್ಲʼ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ʼಪರಿಶಿಷ್ಟರಿಗೆ ಮೀಸಲಾದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಬಾಬಾ ಸಾಹೇಬರ ಹಾಗೂ ಸಂವಿಧಾನದ ಹೆಸರಿನಲ್ಲಿ ಮತ ಪಡೆದ ಸರ್ಕಾರ ಅಧಿಕಾರಕ್ಕೆ ಬಂದು 3 ಕಳೆದರೂ ರಾಜ್ಯ ಸರ್ಕಾರ ಸಮುದಾಯದಕ್ಕೆ ಹೆಚ್ಚು ಪ್ರಾತಿನಿದ್ಯ ನೀಡಿಲ್ಲʼ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಒಟ್ಟು ಬಜೆಟ್‌ನಲ್ಲಿ ಶೇ.30ರಷ್ಟು ಅನುದಾನವನ್ನು ಪರಿಶಿಷ್ಟ ಜಾತಿಗೆ ಮೀಸಲಿಡಬೇಕು. ಕಳೆದ ಮೂರು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ ಬಳಸಿದ ಪರಿಶಿಷ್ಟರ ಹಣವನ್ನು ಹಿಂದಿರುಗಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ನಂತರದ ವಸತಿ ಶಾಲೆಗಳ ಮೂಲಸೌಕರ್ಯಕ್ಕೆ ಹೆಚ್ಚಿನ ಅನುದಾನ ನೀಡಬೇಕು. ವಿದ್ಯಾರ್ಥಿ ನಿಲಯಗಳ ಗ್ರಂಥಾಲಯಗಳ ಡಿಜಿಟಲೀಕರಣ ಹಾಗೂ 2 ವಿದ್ಯಾರ್ಥಿಗಳಿಗೆ 1 ಕಂಪ್ಯೂಟರ್ ವ್ಯವಸ್ಥೆ ನೀಡಬೇಕುʼ ಎಂದು ಬೇಡಿಕೆಯಿಟ್ಟಿದ್ದಾರೆ.

ʼವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳ ಊಟದ ವೆಚ್ಚವನ್ನು ಮಾಸಿಕ 2,500ಕ್ಕೆ ಹೆಚ್ಚಿಸುವುದು. ಪ್ರತಿ ಜಿಲ್ಲೆಯಲ್ಲಿ ಡಾ.ಅಂಬೇಡ್ಕರ್ ತರಬೇತಿ ಕೇಂದ್ರ’ ಸ್ಥಾಪಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ‌ ನೀಡಬೇಕು. ಸರ್ಕಾರಿ ನೇಮಕಾತಿ ಪರೀಕ್ಷೆಗಳಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡುವುದು, ಪದವಿ ಹಾಗೂ ತಾಂತ್ರಿಕ ವಿದ್ಯಾರ್ಥಿಗಳಿಗೆ ಉಚಿತ ಗುಣಮಟ್ಟದ ಲ್ಯಾಪ್‌ಟಾಪ್ ಮರುಜಾರಿ, ಹಲವು ವರ್ಷಗಳಿಂದ ಉಳುಮೆ ಮಾಡುತ್ತಿರುವ ಬಗರ್‌ ಹುಕುಂ ಭೂಮಿಗೆ ಹಕ್ಕುಪತ್ರ ನೀಡುವುದು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯವನ್ನು ಜಿಲ್ಲೆಗೆ ಕನಿಷ್ಠ 100 ಮಂದಿಗೆ ತಲುಪಿಸಿ ಶೇ.70ರಷ್ಟು ಸಬ್ಸಿಡಿ ನೀಡಬೇಕು ಎಂಬುದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಕುಡಿಯುವ ನೀರಿನ ಸಮಸ್ಯೆಯೇ? : ನೇರವಾಗಿ ಅಧಿಕಾರಿಗಳಿಗೆ ಸಂಪರ್ಕಿಸಲು ಮನವಿ

ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ಜಿಲ್ಲಾ ಸಂಚಾಲಕ ಸಂದೀಪ್ ಕಾಂಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಮಾಲೆ, ಜಿಲ್ಲಾ ಕಾರ್ಯದರ್ಶಿ ಅನೀಲ ಮಡ್ಡೆ, ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಮಹೇಂದ್ರಕುಮಾರ ಹೊಸಮನಿ, ಬಹುಜನ ಯುತ್ ಪ್ಯಾಂಥರ್ ಜಿಲ್ಲಾಧ್ಯಕ್ಷ ಜನಾರ್ಧನ ದೀನೆ, ಯುವ ಮುಖಂಡ ಸಾಯಿ ಕೌರವ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...