ಹೆಣ್ಣುಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕಾಗಿ ಬೀದರ್ ನಗರದಲ್ಲಿ ಬಸವಕಲ್ಯಾಣದ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಬಸವಲಿಂಗ ಪಟ್ಟದ್ದೇವರು ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯ ಆರಂಭಿಸಿದ್ದಾರೆ.
ಈ ವಿದ್ಯಾಲಯದ ಪ್ರವೇಶಕ್ಕಾಗಿ ಇದೇ ಮಾ.8ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ಬೀದರ್ನ ವಿದ್ಯಾನಗರ ಮೈಲೂರು ಕ್ರಾಸ್ ಸಮೀಪದ ಡಾ.ಚನ್ನಬಸವ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ಲಿಖಿತ ಪರೀಕ್ಷೆಗೆ ಹಾಜರಾಗಲು ತಿಳಿಸಲಾಗಿದೆ.
ಈ ಪರೀಕ್ಷೆಯು 5ನೇ ತರಗತಿಯ ಪಠ್ಯಕ್ರಮದ ಇದ್ದು ಪ್ರಶ್ನೆ ಪತ್ರಿಕೆ 100 ಅಂಕಗಳ ಬಹು ಮಾದರಿಯಲ್ಲಿ ಇರುತ್ತವೆ. ಪರೀಕ್ಷೆಗೆ ಬರುವಾಗ ವಿದ್ಯಾರ್ಥಿ ಆಧಾರ ಕಾರ್ಡ್ ಝರಾಕ್ಸ್ ಪ್ರತಿ ಮತ್ತು ಎರಡು ಪಾಸ್ಪೋರ್ಟ್ ಸೈಜ್ ಭಾವಚಿತ್ರ ತಪ್ಪದೆ ತರಬೇಕು.
ಈ ವಿದ್ಯಾಲಯದಲ್ಲಿ 20 ಹೆಣ್ಣುಮಕ್ಕಳಿಗೆ ಮಾತ್ರ ಅವಕಾಶ ಇರುತ್ತದೆ. ವಿದ್ಯಾರ್ಥಿನಿಯು 5ನೇ ತರಗತಿ ಪಾಸಾಗಿರಬೇಕು. ಶಿಕ್ಷಣದ ಮಾಧ್ಯಮ ಕನ್ನಡವಾಗಿರುತ್ತದೆ. ಶಾಲೆಯ ಪಠ್ಯದ ಜತೆಗೆ ಬಸವಾದಿ ಶರಣ ಸಂಸ್ಕೃತಿಯ ವಿಶೇಷ ಅಧ್ಯಯನವನ್ನು ಮಾಡಿಸಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿನಿಯರಿಗೆ 6ನೇ ತರಗತಿಯಿಂದ 10ನೇ ತರಗತಿವರೆಗೆ ಉಚಿತವಾಗಿ ಶಿಕ್ಷಣ, ಊಟ ಮತ್ತು ವಸತಿ ನೀಡಲಾಗುವುದು.
ಇದನ್ನೂ ಓದಿ : ಬೀದರ್ | ಚಂದ್ರ ಗ್ರಹಣ : ʼಮೌಢ್ಯತೆ ತೊಲಗಲಿʼ ಜಾಗೃತಿ ಕಾರ್ಯಕ್ರಮ
ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 8050964650, 9448358029, 94496255773, 9972642252, 8904638908ಕ್ಕೆ ಸಂಪರ್ಕಿಸಲು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.





