ಮಾಜಿ ಸಚಿವ, ಶತಾಯಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
ಕಳೆದ ಎರಡ್ಮೂರು ದಿನಗಳಿಂದ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಅವರು, ಇದ್ದಕ್ಕಿದ್ದಂತೆ ಅವರ ಆರೋಗ್ಯ ಬಿಗಡಾಯಿಸಿದೆ. ಶುಕ್ರವಾರ ಬೆಳಗ್ಗೆಯಿಂದಲೇ ಉಸಿರಾಟದಲ್ಲಿ ತೀವ್ರ ತೊಂದರೆ ಕಂಡು ಬಂದಿದೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರು, ಕಾರ್ಯಕರ್ತರು, ಅಭಿಮಾನಿಗಳ, ಹಿತೈಷಿಗಳಿಗೆ ಡಾ.ಭೀಮಣ್ಣ ಖಂಡ್ರೆ ಅವರನ್ನು ಭೇಟಿಯಾಗಲು ಅವಕಾಶ ನೀಡಿರಲಿಲ್ಲ.
ಮಧ್ಯಾಹ್ನ 2 ಗಂಟೆ ಹೊತ್ತಿಗೆ ಅವರಲ್ಲಿ ಉಸಿರಾಟದ ಸಮಸ್ಯೆ ಮತ್ತಷ್ಟು ಹೆಚ್ಚಾಗಿತ್ತು. ತಕ್ಷಣವೇ ವೈದ್ಯರು ಆಕ್ಸಿಜನ್ ಪ್ರಮಾಣ ಹೆಚ್ಚಿಸಿದರು. ದಿನವೀಡಿ ಮುಚ್ಚಿದ ಕಣ್ಣು ತೆರೆಯಲಿಲ್ಲ ಹಾಗಾಗಿ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ.
ಭೀಮಣ್ಣ ಖಂಡ್ರೆ ಆರೋಗ್ಯ ವಿಚಾರಿಸಲು ಖಂಡ್ರೆ ನಿವಾಸಕ್ಕೆ ಮಠಾಧೀಶರು ಭೇಟಿ ಮುಂದುವರೆದಿದೆ. ಶುಕ್ರವಾರ ಕೂಡ ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಡಾ.ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ, ಡಾ.ಬಸವಲಿಂಗ ಪಟ್ಟದ್ದೇವರು, ಸುಲಫಲ ಮಠದ ಡಾ.ಜಗದ್ಗುರು ಸಾರಂಗಧರ ಶ್ರೀ, ಸೊನ್ನದ ಮಠದ ಶ್ರೀ, ಗುರುಬಸವ ಪಟ್ಟದ್ದೇವರು ಭೇಟಿ ನೀಡಿ ಭೀಮಣ್ಣ ಖಂಡ್ರ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಿ ಇನ್ನಷ್ಟು ದಿನ ಎಲ್ಲರಿಗೂ ಮಾರ್ಗದರ್ಶನ ಮಾಡಲಿ ಎಂದು ಹರಿಸಿದರು.
ಇದನ್ನೂ ಓದಿ : ಬೀದರ್ | ಆಗಸದಲ್ಲಿ ಚಿತ್ತಾರ ಮೂಡಿಸಿದ ‘ಏರ್ ಶೋ’





