ಬೀದರ್‌ | ಬಸವಣ್ಣನವರ ಅಪ್ಪಟ ಅನುಯಾಯಿ ಚನ್ನಬಸವ ಪಟ್ಟದ್ದೇವರು : ಸಚಿವ ಈಶ್ವರ ಖಂಡ್ರೆ

Date:

ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರು ಅಪ್ಪಟ ಬಸವಣ್ಣನವರ ಅನುಯಾಯಿ ಆಗಿದ್ದರು. ತಮ್ಮ ಇಡೀ ಬದುಕು ಬಸವತತ್ವ ಪ್ರಚಾರ ಪ್ರಸಾರಕ್ಕೆ ಮುಡಿಪಾಗಿಟ್ಟಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಸೋಮವಾರ ಆಯೋಜಿಸಿದ್ದ ಡಾ.ಚನ್ನಬಸವ ಪಟ್ಟದ್ದೇವರ 136ನೆಯ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ,ʼಚನ್ನಬಸವ ಪಟ್ಟದ್ದೇವರು ಅಪಾರ ದೂರದೃಷ್ಟಿ ಉಳ್ಳುವರಾಗಿದ್ದರು. ಗಡಿಭಾಗದ ಸಮಗ್ರ ಅಭಿವೃದ್ಧಿಗೆ ಶಿಕ್ಷಣ ಪ್ರಮುಖ ಅಸ್ತ್ರವೆಂದರಿತು 1936ರಲ್ಲಿ ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಆರಂಭಿಸಿ ಈ ಭಾಗದ ಅಭಿವೃದ್ಧಿಗೆ ನಾಂದಿ ಹಾಡಿದ್ದರುʼ ಎಂದರು.

ʼಚನ್ನಬಸವ ಪಟ್ಟದ್ದೇವರ ಸೇವೆ ಕೇವಲ ಬಸವತತ್ವ ಪ್ರಚಾರ ಪ್ರಸಾರಕ್ಕೆ ಸೀಮಿತ ಆಗಿರದೇ ಗಡಿಭಾಗವನ್ನು ಕನ್ನಡ ನೆಲದಲ್ಲಿ ಉಳಿಸಲು ಹೋರಾಟ ನಡೆಸಿದರು. ಅವರ ನಡೆ-ನುಡಿ ಒಂದೆ ಆಗಿತ್ತು. ಮಾತಿನ ಸದ್ದು ದೂರ ಕೇಳಿಸುತ್ತದೆ, ಕೆಲಸದ ಸದ್ದು ಅದಕ್ಕಿಂತಲೂ ದೂರ ಕೇಳಿಸುತ್ತದೆ. ಹಾಗಾಗಿ ಪೂಜ್ಯರು ಮಾತಿನ ಸ್ವಾಮೀಜಿ ಆಗಿರದೇ ಕೆಲಸದ ಸ್ವಾಮೀಜಿ ಆಗಿದ್ದರು. ಅಂತಹ ಪೂಜ್ಯರು ನಮಗೆ ಸಿಕ್ಕಿರುವುದು ನಮ್ಮೆಲ್ಲರ ಸೌಭಾಗ್ಯ ಅವರ ವಿಚಾರಧಾರೆ ಎಲ್ಲರೂ ಅನುಸರಿಸಿ ಭವ್ಯ, ಸುಂದರ ಬದುಕು ರೂಪಿಸಿಕೊಳ್ಳಬೇಕುʼ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 12 22 at 9.46.03 PM

ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ, ʼಚನ್ನಬಸವ ಪಟ್ಟದ್ದೇವರು ಬದುಕು ನಮ್ಮೆಲ್ಲರಿಗೂ ಆದರ್ಶಪ್ರಾಯವಾಗಿದೆ. ಪೂಜ್ಯರು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆ ಅನುಪಮವಾಗಿದೆʼ ಎಂದು ತಿಳಿಸಿದರು.

ಭಾರತೀಯ ಬಸವ ಬಳಗದ ರಾಜ್ಯಾಧ್ಯಕ್ಷ ಬಾಬು ವಾಲಿ ಬಸವ ಗುರುವಿನ ಪೂಜೆ ನೆರವೇರಿಸಿದರು. ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ನೇತ್ರತ್ವ ವಹಿಸಿದರು. ಬಸವಲಿಂಗ ಸ್ವಾಮೀಜಿ, ಶಿವಯೋಗೀಶ್ವರ ಸ್ವಾಮೀಜಿ, ಚನ್ನವೀರ ಸ್ವಾಮೀಜಿ, ಶಿವಪ್ರಸಾದ ಸ್ವಾಮೀಜಿ ನೇತೃತ್ವ ವಹಿಸಿದ್ದರು. ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಶರಣಬಸವ ಸ್ವಾಮೀಜಿ ಅನುಭಾವ ನೀಡಿದರು.

ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಮಾಜಿ ಅಧ್ಯಕ್ಷ ಡಿ.ಕೆ.ಸಿದ್ರಾಮ, ಹಿರಿಯ ನ್ಯಾಯವಾದಿ ರಾಜಶೇಖರ ಅಷ್ಟೂರೆ, ಬೀದರ್ ಲೋಕೋಪಯೋಗಿ ಇಲಾಖೆಯ ಇಇ ಶಿವಶಂಕರ ಕಾಮಶೆಟ್ಟಿ, ಕರ್ನಾಟಕ ರಾಜ್ಯ ಮಹಿಳಾ ಮಂಡಳದ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ, ನೀಲಮ್ಮ ವಿಕೆ ಪಾಟೀಲ್, ಯುವ ಮುಖಂಡರಾದ ರವಿ ಮೀಸೆ, ಪ್ರಕಾಶ ಟೊಣ್ಣೆ, ಬಂಡೆಪ್ಪ ಕಂಟೆ, ಪ್ರಕಾಶ ಘೂಳೆ, ಭಾರತೀಯ ಬಸವ ಬಳಗದ ಜಿಲ್ಲಾಧ್ಯಕ್ಷ ಡಾ.ಸಂಜುಕುಮಾರ ಜುಮ್ಮಾ ಸೇರಿದಂತೆ ಹಲವರು ಇದ್ದರು. ಹಾಸ್ಯ ಕಲಾವಿದ ನವಲಿಂಗ ಪಾಟೀಲ್ ನಿರೂಪಿಸಿ, ವಂದಿಸಿದರು.

ಕಾಯಕ ಪ್ರಶಸ್ತಿ ಪ್ರದಾನ :

ಬಸವಕಲ್ಯಾಣ ವಿಶ್ವಬಸವಧರ್ಮ ಟ್ರಸ್ಟ್ ಅನುಭವ ಮಂಟಪದ ಕಾರ್ಯದರ್ಶಿ ಡಾ.ಎಸ್.ಬಿ.ದುರ್ಗೆ ಅವರಿಗೆ 2025ನೇ ಸಾಲಿನ ಡಾ.ಚನ್ನಬಸವ ಪಟ್ಟದ್ದೇವರು ಕಾಯಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ದಾಸೋಹಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಮಾಜಿ ಅಧ್ಯಕ್ಷ ಡಿ.ಕೆ.ಸಿದ್ರಾಮ ಪ್ರಶಸ್ತಿ ಪ್ರದಾನ ಮಾಡಿದರು.

ಗ್ರಂಥ ಲೋಕಾರ್ಪಣೆ :

ಸಾಹಿತಿ ಸುನಿತಾ ದಾಡಗೆ ಬರೆದ ಕನ್ನಡದ ನಂದಾದೀಪ, ಚನ್ನಬಸವೇಶ್ವರ ಗುರುಕುಲ ಸಮುಚ್ಛಯದ ಅಧೀಕ್ಷಕ, ಸಾಹಿತಿ ಗಣಪತಿ ಭೂರೆ ಅವರು ಬರೆದ ಅಕ್ಷರಲೋಕದ ನಕ್ಷತ್ರ ಗ್ರಂಥ ಬಿಡುಗಡೆಗೊಂಡವು. ಜತೆಗೆ ಗುರುಪ್ರಸಾದ ಚಂದ್ರಶೇಖರ ನಿರ್ದೇಶನದಲ್ಲಿ ಹೊರತಂದ ʼದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆʼ ಎಂಬ ಕಿರುಚಿತ್ರ ಬಿಡುಗಡೆಗೊಂಡಿತು. ಎನ್‌ಎಸ್‌ಎಸ್‌ಕೆ ಮಾಜಿ ಅಧ್ಯಕ್ಷ ಡಿ.ಕೆ.ಸಿದ್ರಾಮ ಪುಸ್ತಕ ಬಿಡುಗಡೆಗೊಳಿಸಿದರು.

WhatsApp Image 2025 12 22 at 9.46.50 PM

ವಿಶೇಷ ಸನ್ಮಾನ :

ಕಲಬುರಗಿ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಶರಣಪ್ಪ ಸುಲಗುಂಟೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲಾದಪುರ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ
ಬಬಲೇಶ್ವರ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ, ವಿದ್ಯುತ್ ಮಂಡಳ ಎಂಜನಿಯರ್‌ಗಳ ಸಂಘದ ಶಾಶ್ವತ ನಿರ್ದೇಶಿತ ಸದಸ್ಯ ವೀರಭದ್ರಪ್ಪ, ವಿದ್ಯುತ್ ಮಂಡಳ ಎಂಜನಿಯರ್‌ಗಳ
ಸಂಘದ ಉಪಾಧ್ಯಕ್ಷ ಸಚಿನ ಜಿ.ಹೆಚ್, ಕೇಂದ್ರ ಸಮಿತಿ ಸದಸ್ಯ ರಮೇಶ ಪಾಟೀಲ್, ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಸದಸ್ಯ ಮಹೇಶ ಘಾಳೆ ಮತ್ತು ಗುರುಪ್ರಸಾದ ಚಂದ್ರಶೇಖರ ಅವರನ್ನು ಶ್ರೀಮಠದ ಪರವಾಗಿ ವಿಶೇಷವಾಗಿ ಸನ್ಮಾನಿಸಲಾಯಿತು.

ಪಟ್ಟದ್ದೇವರ ಜನಪರ, ಜೀವಪರ ಸೇವೆ ಪ್ರೇರಣೆ :

ಗಡಿಭಾಗದಲ್ಲಿ ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರು ಸಲ್ಲಿಸಿರುವ ಜನಪರ, ಜೀವಪರ ಸೇವೆ ನಮ್ಮೆಲ್ಲರಿಗೂ ಪ್ರೇರಣೆಯಾಗಿ ನಿಲ್ಲುತ್ತವೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 136ನೆಯ ಜಯಂತ್ಯುತ್ಸವ ನಿಮಿತ್ತ ಸೋಮವಾರ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

WhatsApp Image 2025 12 22 at 9.49.19 PM

ʼನಿಜಾಂನ ಆಡಳಿತದಲ್ಲಿ ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರು ದಿಟ್ಟತನ ಪ್ರದರ್ಶಿಸಿ ಕನ್ನಡ ಉಳಿಸಿ, ಬೆಳೆಸುವುದರ ಜತೆಗೆ ಗಡಿಭಾಗವನ್ನು ಕನ್ನಡ ನೆಲದಲ್ಲಿ ಉಳಿಯುವಂತೆ ಮಾಡಿದರು. ಅನುಭವ ಮಂಟಪ ಪೂನರ್ ನಿರ್ಮಿಸಿ ಬಸವಾದಿ ಶರಣರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿದರು. ಚನ್ನಬಸವ ಪಟ್ಟದ್ದೇವರ ಕೊಡುಗೆಯನ್ನು ವಿದ್ಯಾರ್ಥಿಗಳಿಗೆ ತಿಳಿಹೇಳುವ ಸದಾಶಯದೊಂದಿಗೆ ಬಸವಾದಿ ಶರಣರ ಮತ್ತು ಚನ್ನಬಸವ ಪಟ್ಟದ್ದೇವರು ಜೀವನ ಸಾಧನೆ ಕುರಿತು ವಿವಿಧ ಸ್ಪರ್ದೆಗಳು ಏರ್ಪಡಿಸಲಾಗಿದೆʼ ಎಂದು ಅವರು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ನಿರ್ಮಿಸುವ ಗುರಿ : ಡಾ.ಮಾನಸ

ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ, ಶಂಕರಲಿಂಗ ಸ್ವಾಮೀಜಿ, ಅನಿಲ ಮಹಾರಾಜರು ನೇತೃತ್ವ ವಹಿಸಿದ್ದರು. ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣಪತಿ ಬೋಚರೆ, ಕಸಾಪ ಮಹಿಳಾ ಪ್ರತಿನಿಧಿ ಮಲ್ಲಮ್ಮ ಆರ್ ಪಾಟೀಲ್, ಸದ್ಗುರು ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸೋಮನಾಥ ಮುದ್ದಾ, ಹಿರೇಮಠ ಸಂಸ್ಥಾನ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗಯ್ಯ ಸ್ವಾಮಿ, ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಸಿಕ್ರೇಶ್ವರ ಶೆಟಕಾರ್, ಸಂಗೀತ ಶಿಕ್ಷಕ ಶಿವಾಜಿ ಸಗರ, ಬಸವರಾಜ ಮಾಳಗೆ, ಲಚಮಾ ರೆಡ್ಡಿ ಇದ್ದರು. ಬಾಬು ಬೆಲ್ದಾಳ ಸ್ವಾಗತಿಸಿದರು. ಸವಿತಾ ಭೂರೆ ನಿರೂಪಿಸಿ, ವಂದಿಸಿದರು.

ಬೆಳ್ಳಂಬೆಳ್ಳಗೆ ಬಸವ ನಡಿಗೆ :

ಬೆಳಿಗ್ಗೆ 6.30ಕ್ಕೆ ಹಿರೇಮಠ ಸಂಸ್ಥಾನದಿಂದ ಬಸವ ನಡಿಗೆ ಆರಂಭಗೊಂಡು ವಿವಿಧ ವೃತ್ತ, ಮುಖ್ಯ ರಸ್ತೆ ಮೂಲಕ ಸಾಗಿ ಚನ್ನಬಸವಾಶ್ರಮ ಪರಿಸರದಲ್ಲಿ ಸಮಾವೇಶಗೊಂಡಿತು. ಬೆಳ್ಳಂಬೆಳ್ಳಗೆ ಚಳಿಯ ನಡುವೆ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ನಡೆದ ಬಸವ ನಡಿಗೆಯಲ್ಲಿ ವಿಶ್ವಗುರು ಬಸವಣ್ಣ ಮತ್ತು ಡಾ.ಚನ್ನಬಸವ ಪಟ್ಟದ್ದೇವರ ಭಾವಚಿತ್ರದ ಮೆರವಣಿಗೆ ಶ್ರದ್ಧೆ, ಭಕ್ತಿಯಿಂದ ನೆರವೇರಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...