ಬೀದರ್ |‌ ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಿ : ಶಾಸಕ ಶೈಲೇಂದ್ರ ಬೆಲ್ದಾಳೆ

Date:

ವಿದ್ಯಾರ್ಥಿಗಳು ತಂದೆ-ತಾಯಿ, ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಂಡರೆ ಜೀವನ ಉಜ್ವಲಗೊಳ್ಳುತ್ತದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಸಂಸ್ಕಾರ ಶಿಕ್ಷಣ ಸಹಕಾರಿಯಾಗುತ್ತದೆ ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ನುಡಿದರು.

ಬೀದರ್ ತಾಲೂಕಿನ ಬಗದಲ ಗ್ರಾಮದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಲಾದ ಮಾಜಿ ಪ್ರಧಾನಮಂತ್ರಿ ಮೊರಾರ್ಜಿ ದೇಸಾಯಿ ಅವರ ಮೂರ್ತಿ ಅನಾವರಣ ಹಾಗೂ ಗುರು ಹಿರಿಯರ ಆಶಿರ್ವಾದ-2026 ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ʼನಮ್ಮ ಅಭ್ಯುದಯಕ್ಕೆ ಸರ್ವಸ್ವವನ್ನು ಸಮರ್ಪಿಸಿದ ಪಾಲಕರ ಕನಸನ್ನು ಉತ್ತಮ ವ್ಯಕ್ತಿಗಳಾಗಿ ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ತೀರಿಸಬೇಕು. ವಿದ್ಯಾರ್ಥಿಗಳಲ್ಲಿ ಗುರು ಹಿರಿಯರ ಬಗ್ಗೆ ಗೌರವ ಮತ್ತು ಶಿಸ್ತುನಿಂದ ಜೀವನದಲ್ಲಿ ಮೌಲ್ಯ ಶಿಕ್ಷಣ ದೊರೆಯುತ್ತದೆ. ಗುರುಗಳ ಮಾರ್ಗದರ್ಶನ, ಹಿರಿಯರ ಅನುಭವ ಹಾಗೂ ಪೋಷಕರ ಆಶೀರ್ವಾದದೊಂದಿಗೆ ವಿದ್ಯಾರ್ಥಿ ಜೀವನದಲ್ಲಿ ಮಹೋನ್ನತ ಸಾಧನೆ ಸಾಧ್ಯ. ಗೌರವ, ಶ್ರಮ ಹಾಗೂ ನಿಷ್ಠೆ ಮೈಗೂಡಿಸಿಕೊಂಡ ವಿದ್ಯಾರ್ಥಿಗಳೇ ಭವಿಷ್ಯದಲ್ಲಿ ಸಮಾಜಕ್ಕೆ ಉತ್ತಮ ನಾಯಕರಾಗುತ್ತಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮುಂದಿನ ಭವಿಷ್ಯ ಭಾರತದ ನಿಜವಾದ ಆಸ್ತಿಗಳಾದ ವಿದ್ಯಾರ್ಥಿಗಳು ದೇಶ ಕಟ್ಟುವ ಸಂಕಲ್ಪ ಮಾಡಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕು. ದೇಶ ಸಮರ್ಪಣಾ ಭಾವದಿಂದ ಕರ್ತವ್ಯ ನಿರ್ವಹಿಸಬಲ್ಲ ಸಮರ್ಥ ನಾಗರೀಕರನ್ನು ನಿರೀಕ್ಷಿಸುತ್ತಿದೆ. ವ್ಯವಸ್ಥೆಯನ್ನು ಸಾಂಸ್ಥಿಕವಾಗಿ ಗಟ್ಟಿಗೊಳಿಸುವ ಗುರುತರ ಹೊಣೆಗಾರಿಕೆ ನಿಮ್ಮ ಮೇಲಿದೆ. ಬಗದಲ್ ಮೊರಾರ್ಜಿ ಗುಣಮಟ್ಟದ ಶಿಕ್ಷಣ ನೀಡಿ ಬೀದರ ದಕ್ಷಿಣ ಕ್ಷೇತ್ರದಲ್ಲಿ ಪ್ರತಿಷ್ಠಿತ ಶಾಲೆ ಎಂದು ಹೆಸರುವಾಸಿಯಾಗಿದೆ. ಸಿಬ್ಬಂದಿಗಳು ಮನಸ್ಸು ಮಾಡಿದರೆ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಬಹುದು ಎಂಬುದನ್ನು ಈ ಶಾಲೆ ತೋರಿಸಿಕೊಟ್ಟಿದೆʼ ಎಂದರು.

ʼಈ ಶಾಲೆಯ ಮಕ್ಕಳನ್ನು ಹೆಚ್ಚಿನ ಸಾಧನೆಗೈಯಲು ಪ್ರೋತ್ಸಾಹಿಸುವ ದಿಸೆಯಲ್ಲಿ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮಕ್ಕಳಿಗೆ ₹25 ಸಾವಿರ, ದ್ವಿತೀಯ ಸ್ಥಾನ ಪಡೆದವರಿಗೆ ₹15 ಸಾವಿರ ಹಾಗೂ ತೃತೀಯ ಸ್ಥಾನ ಪಡೆದವರಿಗೆ ₹10 ಸಾವಿರ ನಗದು ಪುರಸ್ಕಾರ ನೀಡುವುದಾಗಿ ಘೋಷಿಸಿದ ಅವರು, ಶಾಲೆಯ ಬಯಲು ರಂಗಮಂದಿರ ಮುಂಭಾಗದ ಮೇಲ್ಛಾವಣಿಗೆ ಅಗತ್ಯ ಅನುದಾನ ನೀಡುವೆ, ಚೆಸ್ ಥೀಮ್ ಪಾರ್ಕ್ ಮೇಲ್ ಛಾವಣಿಗೆ ₹2.5 ಲಕ್ಷ ಅನುದಾನ ನೀಡುವೆʼ ಎಂದು ಘೋಷಣೆ ಮಾಡಿದರು.

ಬೀದರ್ ರಾಮಕೃಷ್ಣ ವಿವೇಕಾನಂದ ಆಶ್ರಮದ ಜ್ಯೋತಿರ್ಮಯಾನಂದ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ, ʼಭಯ ಹೋಗಲಾಡಿಸಿ ನಿರ್ಭಯವಾಗಿ, ಧೈರ್ಯ ಶಾಲಿಗಳಾಗಿ ವಿದ್ಯಾರ್ಥಿಗಳು ಜೀವಿಸಬೇಕು. ಉನ್ನತ ಸಾಧನೆಗೈದು ಜೀವನ ಮತ್ತು ಪರೀಕ್ಷೆ ಎರಡರಲ್ಲಿಯೂ ಯಶಸ್ಸು ಗಳಿಸಬೇಕು. ದೊಡ್ಡ ಗುರಿ ಉದ್ದೇಶ ಇಟ್ಟುಕೊಂಡು ಅಸಾಮಾನ್ಯ ಸಾಧನೆಗೈದು ಗುರುತು ಬಿಟ್ಟು ಹೋಗುವ ಸಂಕಲ್ಪ ಮಕ್ಕಳು ಮಾಡಬೇಕುʼ ಎಂದು ನುಡಿದರು.

ಇದೇ ಸಂದರ್ಭದಲ್ಲಿ 2024-25 ನೇ ಸಾಲಿನ ಸಾಧಕ ವಿದ್ಯಾರ್ಥಿ ಅಭಿಷೇಕ ಸಂಜುಕುಮಾರ, ಕಾಯಕ ಜೀವಿಗಳಾದ ಗಂಗಮ್ಮ, ನಿಂಗಮ್ಮ, ಪ್ರಭಾವತಿ, ಮೃತ ನೌಕರ ಉಮೇಶ ಬಳೆಬಾಯಿ ಅವರ ತಾಯಿಯನ್ನು ಗೌರವಿಸಿ ಸತ್ಕರಿಸಲಾಯಿತು. 10ನೇ ತರಗತಿ ಮಕ್ಕಳು ತಮ್ಮ ಪಾಲಕರ ಗುರು ಹಿರಿಯರ ಆಶಿರ್ವಾದ ಪಡೆದರು.

ಇದನ್ನೂ ಓದಿ : ಬೀದರ್‌ | ಬಿಸಿಲಿನ ಧಗೆಗೆ ತಂಪೆರೆದ ಮಳೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೀದರನ ಜಿಲ್ಲಾ ಅಧಿಕಾರಿ ಸುನೀತಾ ಪಟವಾಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೀದರನ ವ್ಯವಸ್ಥಾಪಕ ಅಶೋಕ ಶೇರಿಕಾರ, ಕ್ರೈಸ್ ಜಿಲ್ಲಾ ಸಮನ್ವಯಾಧಿಕಾರಿ ಶರಣಪ್ಪ ಬಿರಾದಾರ ಸೇರಿದಂತೆ ಪ್ರಮುಖರಾದ ವೀರಶೆಟ್ಟಿ ಕಲ್ಲೂರ, ಬಸವರಾಜ ಚಟ್ನಳ್ಳಿ, ಕಾಶಿನಾಥ್ ಬಗದಲ್, ಸೂರ್ಯಕಾಂತ ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು. ಪ್ರಾಚಾರ್ಯ ಚನ್ನಬಸವ ಹೇಡೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ಪ್ರಾಚಾರ್ಯ ಗೌತಮ ಕುದರೆ ನಿರೂಪಿಸಿದರು. ಪ್ರದೀಪ ನಿಡೋದೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...