ಬೀದರ್‌ | ಸದೃಢ ಆರೋಗ್ಯಕ್ಕೆ ನಿತ್ಯ ವ್ಯಾಯಾಮ ಅಗತ್ಯ : ಸಚಿವ ರಹೀಂ ಖಾನ್

Date:

ಸದೃಢ ಆರೋಗ್ಯಕ್ಕೆ ಎಲ್ಲರೂ ನಿತ್ಯ ವ್ಯಾಯಾಮ ಅಗತ್ಯವಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಹೇಳಿದರು.

ಬೀದರ್ ನಗರದ ಕೆ.ಇ.ಬಿ. ಕಚೇರಿ ಸಮೀಪ ಈಚೆಗೆ ನಡೆದ ಜಾರ್ಜ್ ಫೆಟ್ನೆಸ್ ಜಿಮ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ʼವ್ಯಾಯಾಮ ಮಾಡುವುದರಿಂದ ರಕ್ತದೊತ್ತಡ, ಮಧುಮೇಹ ಮತ್ತಿತರ ರೋಗಗಳು ದೂರವಾಗುತ್ತವೆʼ ಎಂದರು.

ʼಮನುಷ್ಯನಲ್ಲಿ ಸಂಪತ್ತು ಎಷ್ಟಿದ್ದರೂ ಆರೋಗ್ಯ ಇಲ್ಲದಿದ್ದರೆ ಅದು ವ್ಯರ್ಥ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಜಿಮ್‍ಗಳಲ್ಲಿ ನಿತ್ಯ ಕನಿಷ್ಠ ತಾಸಾದರೂ ವ್ಯಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕು. ಯುವ ಜನರಿಗೆ ಆರೋಗ್ಯದ ಗುಟ್ಟು ಹೇಳಿಕೊಡುತ್ತಿರುವ ವಿಕ್ಟೋರಿಯಾ ಜಾರ್ಜ್ ಅವರು 10 ವರ್ಷಗಳಿಂದ ಜಿಮ್ ನಡೆಸುತ್ತಿದ್ದಾರೆ. ಇದೀಗ ಹೈಟೆಕ್ ಜಿಮ್ ಆರಂಭಿಸಿದ್ದಾರೆ. ಯುವಜನರು ಇದರ ಲಾಭ ಪಡೆಯಬೇಕುʼ ಎಂದು ಸಲಹೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸದ ಸಾಗರ್ ಖಂಡ್ರೆ ಉದ್ಘಾಟಿಸಿ ಮಾತನಾಡಿ, ʼಪ್ರಸ್ತುತ ಎಲ್ಲರಿಗೂ ಒತ್ತಡ ಹೆಚ್ಚಾಗಿದೆ. ಜಿಮ್‍ಗಳಲ್ಲಿ ವ್ಯಾಯಾಮ ಮಾಡುವ ಮೂಲಕ ಅದನ್ನು ನಿವಾರಿಸಿಕೊಳ್ಳಬಹುದು. ಜಾರ್ಜ್ ಅವರು ಜನರಿಗೆ ಆರೋಗ್ಯದ ಮಹತ್ವ ಮನವರಿಕೆ ಮಾಡಿಕೊಡುತ್ತಿದ್ದಾರೆ. ಫಿಟ್ನೆಸ್ ಜಿಮ್ ಮೂಲಕ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ನೆರವಾಗುತ್ತಿದ್ದಾರೆ. ಅವರ ಜನಪರ ಕಾಳಜಿ ಶ್ಲಾಘನೀಯʼ ಎಂದು ಹೇಳಿದರು.

WhatsApp Image 2026 01 02 at 8.58.18 PM
ಸಂಸದ ಸಾಗರ್‌ ಖಂಡ್ರೆ ಜಾರ್ಜ್ ಫೆಟ್ನೆಸ್ ಜಿಮ್ ಉದ್ಘಾಟಿಸಿದರು.

ಜಾರ್ಜ್ ಫಿಟ್ನೆಸ್ ಜಿಮ್ ಮಾಲೀಕರಾದ ವಿಕ್ಟೋರಿಯಾ ಜಾರ್ಜ್ ಮಾತನಾಡಿ, ʼಸ್ವಸ್ಥ ಸಮಾಜ ನಿರ್ಮಾಣ ಕೊಡುಗೆ ನೀಡಲು ಜಿಮ್ ಫಿಟ್ನೆಸ್ ಸೆಂಟರ್ ಪ್ರಾರಂಭಿಸಿದ್ದೇನೆ. ಜಿಮ್‍ನಲ್ಲಿ ಪ್ರತಿ ದಿನ ಯೋಗ ಮಾಡುವುದರಿಂದ ಸ್ನಾಯುಗಳು ಬಲಗೊಳ್ಳುತ್ತದೆ. ಕೊಬ್ಬು ಕರಗಿ ತೂಕ ನಿಯಂತ್ರಣದಲ್ಲಿ ಇರುತ್ತದೆ. ರಕ್ತ ಸಂಚಾರದಲ್ಲಿ ಸುಧಾರಣೆಯಾಗಿ, ಹೃದಯ ರೋಗದ ಅಪಾಯ ಕಡಿಮೆಯಾಗುತ್ತದೆʼ ಎಂದು ತಿಳಿಸಿದರು.

ʼಜಿಮ್‌ದಿಂದ ತಾಳ್ಮೆ ವೃದ್ಧಿಸುತ್ತದೆ. ದಿನವಿಡೀ ಮನಸ್ಸು ಉಲ್ಲಸಿತವಾಗಿರುತ್ತದೆ. ಆತ್ಮವಿಶ್ವಾಸ ಇಮ್ಮಡಿಗೊಳ್ಳುತ್ತದೆ. ರಾತ್ರಿ ನೆಮ್ಮದಿಯ ನಿದ್ರೆ ಬರುತ್ತದೆ. ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ ಎಂದು ಹೇಳಿದರು. ಸದ್ಯ ಶೇ 10 ರಷ್ಟು ಮಹಿಳೆಯರು ಮಾತ್ರ ಜಿಮ್ ಹಾಗೂ ಫಿಟ್ನೆಸ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆʼ ಎಂದು ಫಿಟ್ನೆಸ್ ಕೋಚ್ ಅನುಶಾ ಹೇಳಿದರು.

ಇದನ್ನೂ ಓದಿ : ಬೀದರ್‌ | ತೀವ್ರ ಚಳಿಗಾಲ : ಪ್ರಾಥಮಿಕ, ಪ್ರೌಢ ಶಾಲಾ ಸಮಯ ಬದಲಾವಣೆ

ಸೆಲೆಬ್ರಿಟಿ ಟ್ರೈನರ್ ರಾಖಿ, ಪಾಸ್ಟರ್ ಎಜಿಕಿಯೇಲ್, ಬೀದರ್ ಮಹಾನಗರ ಪಾಲಿಕೆಯ ಅಧ್ಯಕ್ಷ ಮುಹಮ್ಮದ್ ಗೌಸ್, ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರದಾರ್, ಮುಖಂಡ ಫನಾರ್ಂಡೀಸ್ ಹಿಪ್ಪಳಗಾಂವ್, ಜಿಸಸ್ ಗ್ಲೋಬಲ್ ಚರ್ಚ್‍ನ ಫಾದರ್ ರೆವರೆಂಡ್ ರಜನಿಕಾಂತ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...