ಬೀದರ್‌ | ಪುರಾತನ ʼಕರೇಜ್‌ʼಗೆ ಹಾನಿ : ಡಿಸಿ ಶಿಲ್ಪಾ ಶರ್ಮಾ ಭೇಟಿ, ಪರಿಶೀಲನೆ

Date:

ಬೀದರ್‌ ನಗರದ ನೌಬಾದ್-ಅಲಿಯಾಬಾದ್‌ ಸಮೀಪದ‌ ಪುರಾತನ ಕಾಲದ ʼಕರೇಜ್‌ʼ ಸುತ್ತಮುತ್ತ ಖಾಸಗಿಯವರು ನೆಲ ಅಗೆಯುತ್ತಿದ್ದು, ಇದರಿಂದ ‘ಕರೇಜ್‌’ನ ಸ್ವರೂಪಕ್ಕೆ ಧಕ್ಕೆಯಾಗುವ ಆತಂಕ ಎದುರಾಗಿದೆ.

ಅಲಿಯಬಾದ್‌ ಸಮೀಪ ಇರುವ ʼಕರೇಜ್‌ ದ್ವಾರʼ ಎದುರಲ್ಲೇ ಜೆಸಿಬಿಯಿಂದ ನಾಲೆ ತೆಗೆಯುತ್ತಿರುವ ಕಾಮಗಾರಿ ಎಗ್ಗಿಲದೇ ನಡೆಯುತ್ತಿದೆ. ಇದರಿಂದ ನೆಲದಾಳದ ನೀರಿನ ಮಾರ್ಗಕ್ಕೂ ಧಕ್ಕೆಯಾಗುವ ಸಾಧ್ಯತೆಯಿದೆ. ಸುರಂಗ ಬಾವಿ ಮೂಲಕ ಹೋಗುವ ಸಮೀಪದ ಕಿರು ಪುಷ್ಕರಣಿಯನ್ನು ಅಗೆಯಲಾಗಿದೆ. ವರ್ಷಪೂರ್ತಿ ಒಂದೇ ಮಟ್ಟದಲ್ಲಿ ನೀರು ಹರಿಯುವುದು ಕರೇಜ್‌ ವಿಶೇಷ. ಈಗ ಖಾಸಗಿಯವರು ನೆಲ ಅಗೆದಿರುವುದರಿಂದ ನೀರು ವೇಗವಾಗಿ ಹರಿಯುತ್ತಿದ್ದು, ಕರೇಜ್‌ನ ನೀರು ಖಾಲಿಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ವಿನಯ್‌ ಕುಮಾರ್‌ ಮಾಳಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಭೇಟಿ, ಪರಿಶೀಲನೆ :

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ಅನುಮತಿ ಇಲ್ಲದೆ ಅನಧಿಕೃತವಾಗಿ ಪುರಾತನ ಕರೇಜ್‌ ದ್ವಾರ ಸಮೀಪದಲ್ಲಿ ನೆಲ ಅಗೆಯುತ್ತಿದ್ದು, ಇದರಿಂದ ಸುರಂಗ ಬಾವಿ (ಕರೇಜ್) ಹಾನಿಯಾಗಿ ನೀರಿನ ಹರಿವಿನ ವ್ಯವಸ್ಥೆ ಅಡ್ಡಿಪಡಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಅಲಿಯಾಬಾದ್‌ ಸಮೀಪದ ಕರೇಜ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದಿದ್ದಾರೆ.

WhatsApp Image 2026 01 15 at 4.34.19 PM 1
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ʼಕರೇಜ್‌ʼʼಗೆ ಭೇಟಿ ನೀಡಿ ಪರಿಶೀಲಿಸಿದರು.

ʼಅನಧಿಕೃತವಾಗಿ ನೆಲ ಅಗೆಯುವುದರಿಂದ ಪುರಾತನ ಕರೇಜ್‌ಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ನೆಲ ಅಗೆಯುವ ಖಾಸಗಿ ವ್ಯಕ್ತಿಗಳಿಗೆ ತಿಳಿಸಿದ ಅವರು ʼಈ ಬಗ್ಗೆ ನಾಳೆ ಸಭೆ ಕರೆದು ಪರಿಶೀಲಿಸಲಾಗುವುದುʼ ಎಂದಿದ್ದಾರೆʼ ಎಂದು ತಿಳಿದು ಬಂದಿದೆ.

ʼಬೀದರ್‌ ಕರೇಜ್‌ ಪ್ರವಾಸಿ ಸ್ಥಳವಷ್ಟೇ ಅಲ್ಲ, ಅದು ಅಂತರ್ಜಲಾಶಯ. ದೀರ್ಘಕಾಲೀನ ಯೋಜನೆ ರೂಪಿಸಿ, ಅದನ್ನು ಸಂರಕ್ಷಿಸಬೇಕಿದೆ. ಕರೇಜ್‌ ಅಭವೃದ್ಧಿಪಡಿಸಿ, ಸಂರಕ್ಷಣೆಗೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ, ಪ್ರವಾಸೋದ್ಯಮ ಇಲಾಖೆ ಸಚಿವರಿಗೆ ಪತ್ರ ಬರೆಯಲಾಗಿದೆʼ ಎಂದು ವಿನಯ ಮಾಳಗೆ ತಿಳಿಸಿದ್ದಾರೆ.

ʼಕರೇಜ್‌ ಸಂರಕ್ಷಣೆ ಸಂಬಂಧ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ, ಸ್ಪಂದಿಸಿ ಭೇಟಿ ನೀಡಿ ಪರಿಶೀಲಿಸಿದ್ದು ಸ್ವಾಗತಾರ್ಹ. ಖಾಸಗಿ ವ್ಯಕ್ತಿಗಳು ಕರೇಜ್‌ ಹತ್ತಿರ ನೆಲ ಅಗೆಯುತ್ತಿರುವುದನ್ನು ಅವರು ಗಂಭೀರವಾಗಿ ತೆಗೆದುಕೊಂಡಿದ್ದು ಕರೇಜ್ ಸಂರಕ್ಷಣೆ ಹಾಗೂ ಅಭಿವೃದ್ಧಿ ಬಗ್ಗೆ ಆಸಕ್ತಿ ತೋರಿದ್ದಾರೆ. ಭವಿಷ್ಯದ ದೃಷ್ಟಿಯಿಂದ ನೌಬಾದ್-ಅಲಿಯಾಬಾದ್‌ ಹತ್ತಿರದ ಪುರಾತನ ʼಕರೇಜ್‌ʼ ಅಭಿವೃದ್ಧಿಪಡಿಸಿ ವಿಶ್ವ ಪಾರಂಪರಿಕ ತಾಣವಾಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕುʼ ಎಂದು ಕೋರಿದ್ದಾರೆ.

14-15ನೇ ಶತಮಾನದಲ್ಲಿ ಬಹಮನಿ ಸುಲ್ತಾನರ ಕಾಲದಲ್ಲಿ ನಿರ್ಮಾಣಗೊಂಡಿರುವ ‘ಕರೇಜ್‌’ ನಿಜಕ್ಕೂ ಒಂದು ವಿಸ್ಮಯ. ಸುಮಾರು 3 ಕಿ.ಮೀ ಪ್ರದೇಶದವರೆಗೆ ವ್ಯಾಪಿಸಿಕೊಂಡಿದೆ. ಕರೇಜ್ ನಿರ್ವಹಣೆ ಹಾಗೂ ಗಾಳಿ, ಬೆಳಕಿನ ವ್ಯವಸ್ಥೆಗೆ ಅಲ್ಲಲ್ಲಿ 27 ತೆರೆದ ಬಾವಿಗಳನ್ನು (ವೆಂಟ್ಸ್‌) ನಿರ್ಮಿಸಲಾಗಿದ್ದು. ಈ ಪೈಕಿ 7 ತೆರೆದ ಬಾವಿಗಳನ್ನು ಗುರುತಿಸಲಾಗಿದೆ. 2024ರಲ್ಲಿ ಕರೇಜ್‌ ಹಾದು ಹೋಗಿರುವ 100 ಮೀಟರ್‌ ಸುತ್ತಮುತ್ತಲಿನ ಪ್ರದೇಶವನ್ನು ʼಬಫರ್‌ ಜೋನ್‌ʼ ಎಂದು ಜಿಲ್ಲಾಡಳಿತ ಗುರುತಿಸಿ ಜಾಗ ಹದ್ದುಬಸ್ತು ಮಾಡಿದೆ.

ಇದನ್ನೂ ಓದಿ : ಬೀದರ್‌ | ಕೋಟಿ ಖರ್ಚಾದರೂ ಉದ್ಘಾಟನೆಯಾಗದ ಪದವಿ ಕಾಲೇಜು ಹಾಸ್ಟೆಲ್‌ : ಕುಸಿಯುತ್ತಿದೆ ದಾಖಲಾತಿ

2017ರಲ್ಲಿ ಅಂದಿನ ಜಿಲ್ಲಾಧಿಕಾರಿ ದಿ.ಅನುರಾಗ ತಿವಾರಿ ಅವರು ಮುತುವರ್ಜಿ ವಹಿಸಿ ಕರೇಜ್‌ನಲ್ಲಿ ಹೂಳು ತೆಗೆದು ಅಭಿವೃದ್ಧಿಪಡಿಸಿದರು. ಕಳೆದ ಬಾರಿ ರಾಜ್ಯ ಸರ್ಕಾರ ಬೀದರ್-‌ವಿಜಯಪುರನಲ್ಲಿರುವ ಪುರಾತನ ಕರೇಜ್‌ ಅಭಿವೃದ್ಧಿಗಾಗಿ 15 ಕೋಟಿ ಅನುದಾನ ನೀಡಿತು. ಆದರೆ, ಅಧಿಕಾರಿಗಳ ಇಚ್ಚಾಶಕ್ತಿ ಕೊರತೆಯಿಂದ ʼಕರೇಜ್‌ʼ ಅಭಿವೃದ್ಧಿ ಕನಸಾಗಿಯೇ ಉಳಿದಿದೆ. 2013ರಿಂದ ಬೀದರ್‌ನ ಟೀ ಯುವಾ ತಂಡವು ಕರೇಜ್‌ ಅಭಿವೃದ್ಧಿ ಮತ್ತು ಸಂರಕ್ಷಣೆ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಗುರುತಿಸಬೇಕೆಂಬ ನಿಟ್ಟಿನಲ್ಲಿ ಶ್ರಮಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...