ಬೀದರ್ | ಸಾಹಿತ್ಯದಿಂದ ವೈಚಾರಿಕತೆ ಬೋಧಿಸಿದ ದಾಸರು

Date:

ದಾಸರು ಅಜ್ಞಾನ ಮತ್ತು ಅಂಧಕಾರದಿಂದ ಬಳಲುತ್ತಿದ್ದ ಜನಸಾಮಾನ್ಯರನ್ನು ಅವರ ಆಡುಭಾಷೆಯಲ್ಲೇ ಭಕ್ತಿ ಮಾರ್ಗದ ಮೂಲಕ ಜಾಗೃತಿಗೊಳಿಸಿದರು ಎಂದು ಅಹಿಲ್ಯಾಬಾಯಿ ಹೊಳ್ಕರ ಪ್ರೌಢ ಶಾಲೆಯ ಮುಖ್ಯಗುರು
ಸೈಯದ್ ಸಲಾವೋದ್ದೀನ್ ಹೇಳಿದರು.

ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತಿನ, ವತಿಯಿಂದ ಶಿವರಾತ್ರಿ ಪ್ರಯುಕ್ತ ಬೀದರ್ ನಗರದ ಅಹಿಲ್ಯಾಬಾಯಿ ಹೊಳ್ಕರ ಪ್ರೌಢ ಶಾಲೆಯ ಆವರಣದಲ್ಲಿ “ಹರಿದಾಸರ ಶಿವಸ್ತುತಿ” ಕುರಿತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ದಾಸರು ಸಾತ್ವಿಕ ವಿಚಾರಗಳ ಮೂಲಕ ಸಮಾಜದ ಡೊಂಕನ್ನು ತಿದ್ದಿ, ವೈಚಾರಿಕತೆಯನ್ನು ಬೋಧಿಸಿದ ಮಹಾನ್ ಸಂತರು’ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಿತಿ ಡಾ.ಸುನೀತಾ ಕುಡ್ಲಿಕರ್ ಅವರು ಹರಿದಾಸರ ಶಿವಸ್ತುತಿ ಕುರಿತು ಉಪನ್ಯಾಸ ನೀಡಿ, ‘ವಿಷ್ಣುಭಕ್ತರಾಗಿದ್ದ ಹರಿದಾಸರು ಶಿವಭಕ್ತಿಯ ಪಾರಮ್ಯ ಮೆರೆದಿರುವುದು ವಿಶಿಷ್ಟ. ಹರಿದಾಸರ ಸಂದೇಶದಂತೆ ಶಿವಧ್ಯಾನದಿಂದ ಮನದಲ್ಲಿನ ಅಜ್ಞಾನವನ್ನು ದೂರ ಮಾಡಿ ಅಧ್ಯಾತ್ಮಿಕ ಶಕ್ತಿ ಹೆಚ್ಚಿಸಿಕೊಳ್ಳಬೇಕು’ ಎಂದರು.

‘ಹರಿದಾಸರು ಶಿವ, ಮಹಾದೇವ, ಮಹಾರುದ್ರರನ್ನು ಆಪ್ತ ದೇವರಾಗಿ ಸ್ತುತಿಸಿದ್ದಾರೆ. “ಚಂದ್ರಚೂಡ ಶಿವಶಂಕರ ಪಾರ್ವತಿರಮಣ ನಿನಗೆ ನಮೋ ನಮೋ”, “ಶಿವ ಶಿವ ಶಿವ ಎನ್ನಿರೊ-ಮೂಜಗದವರೆಲ್ಲ”, “ಕೈಲಾಸವಾಸ ಗೌರೀಶ ಈಶ” ಮೊದಲಾದ ಕೀರ್ತನೆಗಳ ಮೂಲಕ ಶಿವಧ್ಯಾನ ಮಾಡಿ ಮನಸ್ಸಿನ ಶಾಂತಿ, ಏಕಾಗ್ರತೆ ಮತ್ತು ಆಂತರಿಕ ಅರಿವು ವೃದ್ಧಿಸಿಕೊಳ್ಳಬೇಕು’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷ ಡಾ.ರವೀಂದ್ರ ಲಂಜವಾಡಕರ ಮಾತನಾಡಿ, ‘ಹರಿದಾಸರು ಕನ್ನಡ ಸಾಹಿತ್ಯ ಭಂಡಾರಕ್ಕೆ ಅಮೂಲ್ಯ ಕಾಣಿಕೆ ನೀಡಿದ್ದಾರೆ. ಅವರ ಸಂದೇಶಗಳು ಸಮಾಜದಲ್ಲಿ ಸದಾ ಪ್ರಚಾರವಾಗಬೇಕು’ ಎಂದು ಹೇಳಿದರು.

ಇದನ್ನೂ ಓದಿ : ಬೀದರ್ | ಡೆತ್ ನೋಟ್ ಬರೆದಿಟ್ಟು 10ನೇ ವಿದ್ಯಾರ್ಥಿ ನೇಣಿಗೆ ಶರಣು

ಕಾರ್ಯಕ್ರಮದಲ್ಲಿ ವೈಜಿನಾಥ ಬಿರಾದಾರ, ಬಾಲಮ್ಮಾ, ರೋಹಿಣಿ, ಪಲ್ಲವಿ ಸೇರಿದಂತೆ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...