ಬೀದರ್‌ | ಶಿಕ್ಷಣ ಕ್ಷೇತ್ರದಿಂದ ಪುಸ್ತಕ ಸಂಸ್ಕೃತಿ ಬೆಳವಣಿಗೆ : ಬರಗೂರು ರಾಮಚಂದ್ರಪ್ಪ

Date:

ಪುಸ್ತಕ ಸಂಸ್ಕೃತಿ, ಪುಸ್ತಕೋದ್ಯಮ ಬೆಳವಣಿಗೆಗೆ ಶಿಕ್ಷಣ ಕ್ಷೇತ್ರ ಬಹಳ ಮುಖ್ಯವಾಗಿದೆ. ಆದರೆ, ಸರ್ಕಾರಗಳು ಬರವಣಿಗೆಯನ್ನೇ ಕಡಿತಗೊಳಿಸುವ ಪರೀಕ್ಷಾ ಪದ್ಧತಿ ಅನುಸರಿಸುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಅಭಿಪ್ರಾಯಪಟ್ಟರು.

ಬೀದರ್‌ ನಗರದ ಸಾಯಿ ಸ್ಕೂಲ್‌ ಮೈದಾನದಲ್ಲಿ ವೀರಲೋಕ ಬುಕ್ಸ್‌, ಭಾಲ್ಕಿ ಹಿರೇಮಠ ಸಂಸ್ಥಾನ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಜ.24 ರಿಂದ ಮೂರು ದಿನಗಳ ಕಾಲ ಆಯೋಜಿಸಿದ ಪುಸ್ತಕ ಸಂತೆಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿಯಲ್ಲಿ ಆಂತರೀಕ ಮೌಲ್ಯಮಾಪನಕ್ಕೆ 20 ಅಂಕ ಇಟ್ಟು ಹಾಗೂ ಪರೀಕ್ಷೆ 13 ಅಂಕ ಬರೆದರೆ ಸಾಕು ಉತೀರ್ಣ ಆಗಬಹುದು ಎಂಬ ಪರೀಕ್ಷಾ ಪದ್ಧತಿಯನ್ನು ತಂದರೆ ಓದುವ ಅಭಿರುಚಿ, ಪುಸ್ತಕ ಸಂಸ್ಕೃತಿ ಹೇಗೆ ಬೆಳೆಸುತ್ತದೆ. ಮಕ್ಕಳು ಮೊದಲು ಓದು-ಬರಹ ಕಲಿಯಬೇಕು. ಅದಕ್ಕೆ ಮೂಲ ಶಿಕ್ಷಣ ಕ್ಷೇತ್ರವಾಗಿದೆ. ನಾವು ಫಲಿತಾಂಶ ದಾಖಲೆ ಮಾಡುವ ಭರದಲ್ಲಿದ್ದೇವೆ. ಆದರೆ, ಮಕ್ಕಳ ಮನಸ್ಸಿನೊಳಗೆ ಪುಸ್ತಕ ಪ್ರೇಮ, ಸಾಮಾಜಿಕ ಬದ್ಧತೆ, ಮಾನವೀಯ ಮೌಲ್ಯ ಬೆಳೆಸುವಲ್ಲಿ ದಾಖಲೆ ಮಾಡಬೇಕಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮಕ್ಕಳಲ್ಲಿ ಓದುವ ಅಭಿರುಚಿ ಬೆಳೆಸಲು ಶಿಕ್ಷಣ ಕ್ಷೇತ್ರದಲ್ಲಿ ಜಾತ್ಯತೀತ ಶಿಕ್ಷಕರ ಅಗತ್ಯವಿದೆ. ಕಳೆದ ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಸಗಟು ಪುಸ್ತಕಗಳ ಖರೀದಿ ನಡೆದಿಲ್ಲ. ಗ್ರಂಥಾಲಯ ಕೂಡ ಖರೀದಿ ಮಾಡಿಲ್ಲ. ರಾಜ್ಯದಲ್ಲಿ ಗ್ರಂಥಾಲಯಗಳಿಗೆ ಪುಸ್ತಕ ಪೂರೈಸುವ ಇಚ್ಚಾಶಕ್ತಿ ಸರ್ಕಾರ ತೋರಬೇಕು. ಬಜೆಟ್‌ನಲ್ಲಿ ಗ್ರಂಥಾಲಯಗಳಿಗೂ ವಿಶೇಷ ಅನುದಾನ ಮೀಸಲಿಡಬೇಕುʼ ಎಂದು ಹೇಳಿದರು.

WhatsApp Image 2026 01 25 at 8.35.48 AM

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, ‘ಬೆರಳ ತುದಿಯಲ್ಲಿ ಮಾಹಿತಿ ಸಿಗುವ ಈ ಕಾಲದಲ್ಲಿಯೂ, ಆಳವಾದ ತಿಳುವಳಿಕೆ ಮತ್ತು ವ್ಯಕ್ತಿತ್ವ ವಿಕಾಸಕ್ಕೆ ಪುಸ್ತಕ ಓದುವಿಕೆಯೇ ನಿಜವಾದ ಮಾರ್ಗ. ಪುಸ್ತಕಗಳು ನಮ್ಮ ಚಿಂತನೆಗೆ ದಿಕ್ಕು ನೀಡುತ್ತವೆ, ಬದುಕಿನ ಮೌಲ್ಯಗಳನ್ನು ಅರಿಯುವ ದೃಷ್ಟಿಯನ್ನು ವಿಸ್ತರಿಸುತ್ತವೆ. ಯುವ ಪೀಳಿಗೆ ದಿನವೂ ಸ್ವಲ್ಪ ಸಮಯವನ್ನು ಓದಿಗೆ ಮೀಸಲಿಡುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಓದುವ ಸಂಸ್ಕೃತಿ ಬೆಳೆದರೆ ಜ್ಞಾನಸಂಪನ್ನ ಮತ್ತು ಜವಾಬ್ದಾರಿಯುತ ಸಮಾಜ ನಿರ್ಮಾಣ ಸಾಧ್ಯ’ ಎಂದರು.

ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, ʼಇಂದಿನ ಡಿಜಿಟಲ್ ಯುಗದಲ್ಲಿಯೂ ಪುಸ್ತಕಗಳ ಮಹತ್ವ ಕಡಿಮೆಯಾಗಿಲ್ಲ. ಪುಸ್ತಕ ಓದುವ ಹವ್ಯಾಸವು ಚಿಂತನಾ, ವಿವೇಕ, ಶಕ್ತಿ, ಸಂಸ್ಕಾರ ಹಾಗೂ ಸೃಜನಶೀಲತೆಯನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು, ಯುವಜನರು ಹಾಗೂ ಸಾರ್ವಜನಿಕರು ಪುಸ್ತಕಗಳನ್ನು ತಮ್ಮ ಜೀವನದ ಅವಿಭಾಜ್ಯ ಭಾಗವಾಗಿಸಿಕೊಂಡು, ದಿನನಿತ್ಯ ಓದುವ ಸಂಸ್ಕೃತಿಯನ್ನು ರೂಢಿಸಿಕೊಳ್ಳಬೇಕು. ಇಂತಹ ಪುಸ್ತಕ ಸಂತೆಗಳು ಜ್ಞಾನ ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಮಹತ್ವದ ವೇದಿಕೆಗಳಾಗಿವೆʼ ಎಂದರು.

ಇದನ್ನೂ ಓದಿ : ಬೀದರ್‌ | ʼಮನರೇಗಾʼ ದುರ್ಬಲಗೊಳಿಸಲು ‘ವಿಬಿ-ಜಿ ರಾಮ್ ಜಿ’ ಮಸೂದೆ ಜಾರಿ : ಸಚಿವ ಈಶ್ವರ ಖಂಡ್ರೆ

ಪೌರಾಡಳಿತ ಸಚಿವ ರಹೀಂ ಖಾನ್‌, ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು, ಹುಲಸೂರ ಗುರುಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ, ವೀರಲೋಕ ಬುಕ್ಸ್‌ನ ವೀರಕಪುತ್ರ ಶ್ರೀನಿವಾಸ, ಪುಸ್ತಕ ಸಂತೆ ಆಯೋಜಕ ಗುರುನಾಥ ರಾಜಗೀರಾ, ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...