ಬೀದರ್‌ | ಕೇಂದ್ರ ತಂಡಕ್ಕೆ ಮಳೆ ಹಾನಿ ತೀವ್ರತೆ ಮಾಹಿತಿ ಒದಗಿಸಿದ ಜಿಲ್ಲಾಡಳಿತ

Date:

ಕಳೆದ ಮುಂಗಾರು ಹಂಗಾಮಿನಲ್ಲಿ ಅತೀ ಹೆಚ್ಚು ಮಳೆಯಿಂದಾಗಿ ಸಂಭವಿಸಿದ ಬೆಳೆ ಹಾಗೂ ಮೂಲಭೂತ ಸೌಕರ್ಯಗಳ ಹಾನಿಯ ಕುರಿತು ಸೋಮವಾರ ಬೀದರ ಜಿಲ್ಲೆಗೆ ಭೇಟಿ ನೀಡಿದ ಕೇಂದ್ರ ಸರ್ಕಾರದ ತಂಡಕ್ಕೆ ಜಿಲ್ಲಾಡಳಿತ ಮನವರಿಕೆ ಮಾಡಿಕೊಡಲಾಯಿತು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯಲ್ಲಿ ಕೇಂದ್ರ ಸರಕಾರದ ಗೃಹ ಹಾಗೂ ಸಂಸದೀಯ ವ್ಯವಹಾರಗಳ ಜಂಟಿ ಕಾರ್ಯದರ್ಶಿ ರಾಜೀವಕುಮಾರ ನೇತೃತ್ವದ ತಂಡವು ಸೋಮವಾರ ಬೀದರನಲ್ಲಿ ಮುಂಗಾರು ಪ್ರವಾಹದ ಹಾನಿ ಕುರಿತಾದ ಮಾಹಿತಿಯನ್ನು ಪಡೆದರು. ಕೇಂದ್ರ ಸರಕಾರದ ಕೃಷಿ ಹಾಗೂ ಎಣ್ಣೆ ಕಾಳು ಅಭಿವೃದ್ಧಿ ನಿಗಮದ ನಿರ್ದೇಶಕ ಡಾ.ಪೊನ್ನುಸ್ವಾಮಿ ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಜಯಶ್ರೀ ಕಕ್ಕರ್ ಉಪಸ್ಥಿತರಿದ್ದರು.

ರಾಜ್ಯ ಸರಕಾರದ ಕಂದಾಯ ಇಲಾಖೆಯ ವಿಪತ್ತು ನಿರ್ವಹಾಣಾ ಪ್ರಧಾನ ಕಾರ್ಯದರ್ಶಿ ಮೌನೀಶ ಮೌದಗೀಲ್ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಕೇಂದ್ರ ತಂಡಕ್ಕೆ ಮುಂಗಾರು ಮಳೆಯಿಂದಾದ ಹಾನಿಯ ತೀವೃತೆ ಬಗ್ಗೆ ಮನವರಿಕೆ ಮಾಡಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಂಭದಲ್ಲಿ ಕೇಂದ್ರ ತಂಡದ ಜೊತೆ ವಿಡಿಯೋ ಸಂವಾದದ ಮೂಲಕ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಾತನಾಡಿ, ʼರಾಜ್ಯದಲ್ಲಿ ಆಗಿರುವ ಒಟ್ಟಾರೆ ಹಾನಿಯ ಸಮೀಕ್ಷಾ ವರದಿ ಹಾಗೂ ಪ್ರಸ್ತಾವನೆಯ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು. ಆಧುನಿಕ ತಂತ್ರಜ್ಞಾನ ಬಳಸಿ ಹಾನಿಯ ವರದಿಯನ್ನು ಆಯಾ ಜಿಲ್ಲೆಗಳು ಸಿದ್ಧಪಡಿಸಿವೆ. ಅಗತ್ಯ ಛಾಯಾಚಿತ್ರ ಹಾಗೂ ಪತ್ರಿಕಾ ವರದಿಗಳನ್ನು ಮಂಡಿಸಲಾಗಿದೆʼ ಎಂದರು.

ಮೌನೀಶ ಮೌದಗಿಲ್ ಅವರು ಮಾತನಾಡಿ, ʼರಾಜ್ಯದ ಕಲ್ಯಾಣ ಕರ್ನಾಟಕದಲ್ಲಿ ಆಗಿರುವ ಹೆಚ್ಚಿನ ಮಳೆ ಹಾಗೂ ಹಾನಿಯ ಬಗ್ಗೆ ತಂತ್ರಜ್ಞಾನ ಬಳಸಿ ಸಿದ್ದಪಡಿಸಿದ ವರದಿ ಹಾಗೂ ಅಗತ್ಯ ಅನುದಾನದ ಬೇಡಿಕೆ ಬಗ್ಗೆ ತಿಳಿಸಿದ ಅವರು, ಬದಲಾದ ಹವಾಮಾನ ವೈಪರಿತ್ಯದ ಪರಿಣಾಮದಿಂದ ಕಳೆದ ರಾಜ್ಯಾದ್ಯಂತ ಸತತ ಪ್ರವಾಹ ಹಾಗೂ ಬರಗಾಲ ಸಂಭವಿಸುತ್ತಿದೆʼ ಎಂದರು.

ʼ125 ವರ್ಷಗಳ ಇತಿಹಾಸದಲ್ಲಿ 2025ರ ಮೇ ತಿಂಗಳಲ್ಲಿ ದಾಖಲೆಯ ಮಳೆಯಿಂದಾಗಿ ಜಲಾಶಯ ಕೆರೆ, ಹಳ್ಳ ಕೊಳ್ಳ ತುಂಬಿ, ಬಹುತೇಕ ಎಲ್ಲ ಕೃಷಿ ಬೆಳೆ ಹಾಗೂ ತೋಟಗಾರಿಕಾ ಬೆಳೆಗಳು ನಾಶಗೊಂಡು ಸಾಕಷ್ಟು ಮೂಲಭೂತ ಸೌಕರ್ಯಗಳ ಹಾನಿಯಾಗಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಶೇ 90ರಷ್ಟು ಬೆಳೆ ಹಾನಿ ಸಂಭವಿಸಿದೆ ಎಂದು ಕೇಂದ್ರ ತಂಡಕ್ಕೆ ಅಂಕಿ ಸಂಖ್ಯೆಗಳ ಸಮೇತ ಮಾಹಿತಿ ನೀಡಿದರು. ಆಧುನಿಕ ತಂತ್ರಜ್ಞಾನ ಮೊಬೈಲ್ ಆಪ್ ಬಳಸಿ ಹಾನಿಯ ವರದಿ ಸಿದ್ದಪಡಿಸಲಾಗಿದೆʼ ಎಂದು ತಿಳಿಸಿದರು.

ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಸೇರಿ ಪ್ರತಿ ಗ್ರಾಮದ ಪ್ರತಿ ಜಮೀನಿಗೆ ಸರ್ವೆ ನಂಬರ್‌ವಾರು ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಾಗಿದೆ. ಪರಿಹಾರ ಆಪ್‌ನಲ್ಲಿ ವಿವರಗಳನ್ನು ದಾಖಲಿಸಿದೆ. ಪ್ರತಿ ರೈತರಿಗೆ ಆಧಾರ ಲಿಂಕ್ ಕಡ್ಡಾಯಗೊಳಿಸಿದ ಕಾರಣ ಪರಿಹಾರವು ನೇರವಾಗಿ ರೈತರ ಖಾತೆಗೆ ಜಮೆ ಆಗುತ್ತದೆ‌ʼ ಎಂದು ಮೌನೀಶ ಮೌದಗೀಲ್ ತಿಳಿಸಿದರು.

ʼಕೇಂದ್ರ ಸರಕಾರದ ಪುನರ್ ನಿರ್ಮಾಣದ ನಿಯಮಾವಳಿಯಂತೆ ಮೂಲಭೂತ ಸೌಕರ್ಯಗಳ ಹಾನಿಯ ವರದಿಯನ್ನು ಸಿದ್ಧಪಡಿಸಲಾಗಿದೆʼ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ʼಬೀದರ ಜಿಲ್ಲೆಯ ಮಳೆ ಹಾನಿ ಕುರಿತು ಛಾಯಾಚಿತ್ರಗಳು ಹಾಗೂ ಪತ್ರಿಕಾ ವರದಿಗಳ ಮೂಲಕ ವಿವರಿಸಿದರು. ಒಟ್ಟು 1.67 ಲಕ್ಷ ಹೆಕ್ಟೇರ್‌ ಬೆಳೆ ಹಾನಿಗೊಳಗಾಗಿದ್ದು, ಜಿಲ್ಲೆಯಲ್ಲಿ ಒಟ್ಟಾರೆ 711 ಕೋಟಿ ರೂ. ಹಾನಿಯಾದ ಬಗ್ಗೆ ತಿಳಿಸಿದರು. ರಾಜ್ಯ ಸರಕಾರದ ವಿಪತ್ತು ನಿರ್ವಹಣಾದಿಂದ ಬಿಡುಗಡೆಯಾದ 133 ಕೋಟಿ ರೂ.ಗಳನ್ನು ವಿತರಿಸಲಾಗಿದೆ. ಒಟ್ಟು 1,502 ಮನೆಗಳು ಹಾನಿಯಾಗಿದೆ. ರಸ್ತೆ, ಸೇತುವೆ ವಿವಿಧ ಮೂಲಭೂತ ಸೌಕರ್ಯಗಳ 231 ಕೋಟಿ ರೂ. ಹಾನಿಯಾಗಿದೆʼ ಎಂದು ವಿವರಿಸಿದರು.

ಜಿಲ್ಲಾಡಳಿತ ನೀಡಿದ ಹಾನಿಯ ವರದಿಯನ್ನು ಪರಿಗಣಿಸಿ ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ಕೇಂದ್ರ ಸರಕಾರದ ಗೃಹ ಹಾಗೂ ಸಂಸದೀಯ ವ್ಯವಹಾರಗಳ ಜಂಟಿ ಕಾರ್ಯದರ್ಶಿ ರಾಜೀವಕುಮಾರ ತಿಳಿಸಿದರು.

ಇದನ್ನೂ ಓದಿ : ವಾಷಿಂಗ್ಟನ್ ಸುಂದರ್ ಜತೆ ತಮಿಳಿನಲ್ಲಿ ಮಾತನಾಡಿದ ಕನ್ನಡಿಗ ರಾಹುಲ್: ಕಾಮೆಂಟರಿ ಬಾಕ್ಸ್‌ನಲ್ಲಿ ‘ರಾಷ್ಟ್ರಭಾಷೆ’ ವಿವಾದ

ಬೀದರ ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಬೀದರ ಸಹಾಯಕ ಆಯುಕ್ತ ಮೊಹಮ್ಮದ ಶಕೀಲ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ತಹಸೀಲ್ದಾರರು ಉಪಸ್ಥಿತರಿದ್ದರು. ಕೇಂದ್ರ ತಂಡವು ಔರಾದ್ ತಾಲ್ಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...