ಬೀದರ್ | ಭರವಸೆ ಬೇಡ, ಲಿಖಿತ ಆದೇಶ ನೀಡಿ : ಅಧಿಕಾರಿಗಳಿಗೆ ಅಲೆಮಾರಿಗಳ ಖಡಕ್‌ ಮಾತು!

Date:

ಔರಾದ್‌ ಪಟ್ಟಣದ ಬೀದಿ ಬದಿಯಲ್ಲಿ ಜೋಪಡಿಗಳಲ್ಲಿ ವಾಸಿಸುವ ಅಲೆಮಾರಿ ಜನಾಂಗಕ್ಕೆ ಮಂಜೂರಾದ ನಿವೇಶನ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಮೂರನೇ ದಿನವೂ ಮುಂದುವರೆಯಿತು.

ಪಟ್ಟಣದ ತಹಸೀಲ್ದಾರ್‌ ಕಚೇರಿ ಎದುರುಗಡೆ ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಕಳೆದ ಮೂರು ದಿನಗಳಿಂದ ಅಧಿಕಾರಿಗಳು ಭೇಟಿ ನೀಡಿ ಭರವಸೆ ನೀಡಿ, ಪ್ರತಿಭಟನಾಕಾರರ ಮನವೋಲಿಸುವ ಪ್ರಯತ್ನ ನಡೆಯುತ್ತಿದೆ. ಆದರೆ, ʼನಮಗೆ ಒಣ ಭರವಸೆ ಬೇಡ, ನಿವೇಶನದ ಲಿಖಿತ ಒಪ್ಪಿಗೆ ಪತ್ರ ಕೈಗೆ ಕೊಡಿʼ ಎಂದು ಪಟ್ಟು ಹಿಡಿದು ಧರಣಿ ಮುಂದುವರೆಸಿದ್ದಾರೆ.

ಬೀದರ್‌ ಎಸಿ ಮೊಹಮ್ಮದ್‌ ಶಕೀಲ್‌ ಹಾಗೂ ತಹಸೀಲ್ದಾರ್‌ ಮಹೇಶ ಪಾಟೀಲ್ ಅವರು ಬುಧವಾರ ಸಂಜೆ ಧರಣಿ ಸ್ಥಳಕ್ಕೆ ಭೇಟಿ ನೀಡಿ, ʼಅಲೆಮಾರಿ ಜನಾಂಗದವರಿಗಾಗಿ ಮಂಜೂರಾದ ಜಾಗ ಶೀಘ್ರದಲ್ಲಿ ನೀಡಲಾಗುವುದು. ಅಲೆಮಾರಿಗಳಿಗೆ ಮೀಸಲಾದ ಸರ್ವೇ ನಂ-183 ಜಾಗ ಕೂಡ ಹಂಚಿಕೆ ಮಾಡಲಾಗುವುದುʼ ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2026 01 21 at 11.03.06 PM

ಒಕ್ಕೂಟದ ಮುಖಂಡ ರಾಹುಲ್‌ ಖಂದಾರೆ ಮಾತನಾಡಿ ʼಕಳೆದ ನಾಲ್ಕು ದಶಕಗಳಿಂದ 200ಕ್ಕೂ ಅಧಿಕ ಅಲೆಮಾರಿ ಕುಟುಂಬಗಳು ಬೀದಿಯಲ್ಲಿ ಕನಿಷ್ಠ ಸೌಲಭ್ಯ ಇಲ್ಲದೆ ನರಕಯಾತನೆ ಅನುಭವಿಸುತ್ತಿದೆ. ಆದರೂ ಜಿಲ್ಲಾಡಳಿತ ಮಾನವೀಯತೆಯಿಂದ ನಿವೇಶನ ಹಂಚಿಕೆ ಮಾಡುವ ಕೆಲಸ ಮಾಡಲಿಲ್ಲ. ವಸತಿಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಕೇವಲ ಭರವಸೆಗೆ ಸೀಮಿತವಾಗಿದೆ. ಮತ್ತೆ ಭರವಸೆ ಕೊಟ್ಟು ಸಮಧಾನಪಡಿಸುವ ಪ್ರಯತ್ನ ಮಾಡಬೇಡಿ, ಶಾಶ್ವತವಾಗಿ ನಿವೇಶನ ನೀಡಿ, ಆದೇಶ ಪತ್ರ ಕೈಗೆ ಕೊಡಿ. ಅಲ್ಲಿಯವರೆಗೆ ಧರಣಿ ಮುಂದುವರೆಯಲಿದೆʼ ಎಂದರು.

ಬುಧವಾರ ಧರಣಿ ಸ್ಥಳಕ್ಕೆ ಮಾಜಿ ವಿಧಾನ ಪರಿಷತ್ತಿನ ಸದಸ್ಯರಾದ ಕೆ.ಪುಂಡಲಿಕರಾವ್‌, ಅರವಿಂದಕುಮಾರ ಅರಳಿ, ಎದ್ದೇಳು ಕರ್ನಾಟಕ ರಾಜ್ಯ ಸಮಿತಿಯ ಹೋರಾಟಗಾರ್ತಿ ಮಲ್ಲಿಗೆ ಸಿರಿಮನೆ, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯಕುಮಾರ ಮಾಳಗೆ, ಸಾಮಾಜಿಕ ಕಾರ್ಯಕರ್ತರಾದ ಮಹೇಶ ಗೊರನಾಳಕರ್‌, ಜಗದೀಶ್ವರ ಬಿರಾದರ, ಸಂದೀಪ ಮುಕಿಂದೆ, ಲಕ್ಷ್ಮಣ ಮಂಡಲಗೇರಾ, ಶಕ್ತಿಕಾಂತ ಭಾವಿದೊಡ್ಡಿ, ಡಾ.ಮಕ್ತುಂಬಿ ಎಂ., ಶಿವಮೂರ್ತಿ ಬಳತ್‌, ರಾಮಣ್ಣಾ ಒಡೆಯರ್‌, ಬಸವರಾಜ ಶೆಟಕಾರ್‌ ಮತ್ತಿತರರು ಭೇಟಿ ನೀಡಿ ಹೋರಾಟಕ್ಕೆ ಬೆಂಬಲಿಸಿ ಮಾತನಾಡಿದರು. ‌

ʼಈ ಹಿಂದೆ ಹಿಂದುಳಿದ ವರ್ಗಗಳ ಇಲಾಖೆಯಿಂದ ಪಟ್ಟಣದ ಹೊರವಲಯದ ಸರ್ವೇ ನಂ-183ರಲ್ಲಿ 2 ಎಕರೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, ಅದನ್ನು ಅಲೆಮಾರಿ ಜನಾಂಗಕ್ಕೆ ಹಂಚಿಕೆ ಮಾಡದೆ ರಾಜಕೀಯ ಒತ್ತಡದಿಂದ ನಿವೇಶನ ರದ್ದುಪಡಿಸಲು ಪ್ರಸ್ತಾವನೆ ಕಳುಹಿಸಲಾಗಿದೆ. ಪಟ್ಟಣದಿಂದ ದೂರದಲ್ಲಿರುವ ಸರ್ವೇ ನಂ-205ರಲ್ಲಿ ನಿವೇಶನ ಮಂಜೂರಾತಿ ನೀಡಲಾಗಿದೆ. ಅದಕ್ಕೆ ನಾವು ಒಪ್ಪುವುದಿಲ್ಲ. ಸರ್ವೇ ನಂ-183ರ ನಿವೇಶನ ರದ್ದತಿ ಪ್ರಸ್ತಾವನೆ ಕೂಡಲೇ ಹಿಂಪಡೆದು ಅಲೆಮಾರಿ ಸಮುದಾಯಕ್ಕೆ ಹಂಚಿಕೆ ಮಾಡಬೇಕು. ಅದೇ ಸರ್ವೇ ನಂಬರ್‌ನಲ್ಲಿ ಇನ್ನೂ 2 ಎಕರೆ ಜಮೀನು ಹೆಚ್ಚುವರಿಯಾಗಿ ನೀಡಬೇಕು. ಇಲ್ಲದಿದ್ದರೆ ಈ ಹೋರಾಟ ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲʼ ಎಂದು ಆಗ್ರಹಿಸಿದರು.

ಅಧಿಕಾರಿಗಳು ಈಗಾಗಲೇ ಅನೇಕ ಸಲ ಪೊಳ್ಳು ಭರವಸೆಗಳನ್ನು ನೀಡಿದ್ದಾರೆ, ಹೊರತು ಯಾವುದೂ ಅನುಷ್ಠಾನ ಕೈಗೊಂಡಿಲ್ಲ. ಈಗ ನೀಡುವ ಭರವಸೆಗಳು ಘೋಷಣೆಯಾಗಲಿ. ಮಂಜೂರಾದ ಜಾಗದಲ್ಲಿ ಅಧಿಕೃತವಾಗಿ ನಾಮಫಲಕ ಅಳವಡಿಸಬೇಕು. ಇಲ್ಲದಿದ್ದರೆ ಹೋರಾಟ ಜಿಲ್ಲಾ, ರಾಜ್ಯಮಟ್ಟಕ್ಕೆ ಕೊಂಡೊಯ್ಯಲಾಗವುದುʼ ಎಂದು ಹೋರಾಟಗಾರರು ಎಚ್ಚರಿಸಿದರು.

WhatsApp Image 2026 01 21 at 10.26.45 PM
ರಾಜ್ಯದ ಭೂಮಿ ಮತ್ತು ವಸತಿ ವಂಚಿತ ಹಕ್ಕು ಹೋರಾಟ ಸಮಿತಿಯ ಮಲ್ಲಿಗೆ ಸಿರಿಮನೆ ಮಾತನಾಡಿದರು.

ಅದಕ್ಕೆ ಎಸಿ ಮೊಹಮ್ಮದ್‌ ಶಕೀಲ್‌ ಅವರು ಪ್ರತಿಕ್ರಿಯಿಸಿ, ʼಸರ್ಕಾರದಿಂದ ಮಂಜೂರಾದ ಜಾಗ ಅನ್ಯರಿಗೆ ಹಂಚಿಕೆಯಾಗಿಲ್ಲ. ಅಲೆಮಾರಿ ಸಮುದಾಯಕ್ಕೆ ಮಂಜೂರಾದ ಜಾಗ ರದ್ದತಿ ಕೋರಿ ತಾಲೂಕು ಆಡಳಿತದಿಂದ ಸಲ್ಲಿಕೆಯಾದ ಪ್ರಸ್ತಾವನೆ ಹಿಂಪಡೆಯಲು ಸೂಚಿಸಲಾಗುವುದು. ಆದರೆ, ಅದಕ್ಕೆ ನಾಲ್ಕೈದು ದಿನಗಳ ಸಮಯ ಬೇಕಾಗುತ್ತದೆʼ ಎಂದು ಉತ್ತರಿಸಿ ಧರಣಿ ಅಂತ್ಯಗೊಳಿಸುವಂತೆ ಮನವೋಲಿಸಿದರು.

ಅದಕ್ಕೆ ಧರಣಿನಿರತರು ಮಾತನಾಡಿ ʼನಾಲ್ಕು ದಿನಗಳಾದರೂ ಪರವಾಗಿಲ್ಲ. ತ್ವರಿತವಾಗಿ ಸರ್ಕಾರದ ಪ್ರಕ್ರಿಯೆಯಂತೆ ಆದೇಶಿಸಿ, ಅದರ ಪ್ರತಿ ನಮ್ಮ ಕೈಗೆ ಕೊಡಿʼ, ಬರೀ ಭರವಸೆಯಿಂದ ಧರಣಿ ಸ್ಥಳದಿಂದ ಕದಲುವುದಿಲ್ಲʼ ಎಂದು ಖಡಕ್‌ ಆಗಿ ಹೇಳಿದ ನಂತರ ಅಧಿಕಾರಿಗಳು ಅಲ್ಲಿಂದ ವಾಪಸ್‌ ತೆರಳಿದರು.

ಇದನ್ನೂ ಓದಿ : ಬೀದರ್‌ | ಅಧಿಕಾರಿಗಳ ಮನವೋಲಿಕೆ ವಿಫಲ : ಮುಂದುವರೆದ ಅಲೆಮಾರಿಗಳ ಧರಣಿ

ಒಕ್ಕೂಟದ ಪ್ರಮುಖರಾದ ನಾಗನಾಥ ವಾಕೋಡೆ, ಸುಭಾಷ ಲಾಧಾ, ಸಿದ್ದಾರ್ಥ ಭೋಸ್ಲೆ, ಸಂತೋಷ ಸಿಂಧೆ, ಪ್ರವೀಣ ಕಾರಂಜೆ, ಸಂತೋಷ ಸೂರ್ಯವಂಶಿ, ಪ್ರವೀಣ್ ಕಾರಂಜೆ, ಸುಂದರ ಮೇತ್ರೆ ಹಾಗೂ ಅಲೆಮಾರಿ ಸಮುದಾಯದವರು ಮಹಿಳೆಯರು, ಮಕ್ಕಳು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...