ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) 2026ರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳ ಸಮಾನತೆ ಉತ್ತೇಜನಕ್ಕಾಗಿ ರೂಪಿಸಿರುವ ನಿಯಮಾವಳಿಗಳನ್ನು ತಕ್ಷಣ ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬೀದರ್ ನಗರದ ಶಾಹಗಂಜ ಬುದ್ಧ ಮಂದಿರದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.
ಮುಖಂಡರು ಮಾತನಾಡಿ, ʼವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ಕಿರುಕುಳ, ದೌರ್ಜನ್ಯ ಮತ್ತು ದಲಿತ ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡದಿಂದ ಉಂಟಾಗುತ್ತಿರುವ ಆತ್ಮಹತ್ಯೆಗಳ ಸರಣಿಯನ್ನು ತಡೆಗಟ್ಟಬೇಕು. ಯುಜಿಸಿ ತಂದಿರುವ 2026ರ ಕರಡು ನಿಯಮಾವಳಿಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ತಡೆ ಆದೇಶವನ್ನು ತೆರವುಗೊಳಿಸಿ, ಎಸ್.ಸಿ, ಎಸ್.ಟಿ. ವಿದ್ಯಾರ್ಥಿಗಳಿಗೆ ಪ್ರತ್ಯೇಕ ರಕ್ಷಣಾತ್ಮಕ ನಿಯಮಗಳನ್ನು ಜಾರಿಗೊಳಿಸಬೇಕುʼ ಎಂದು ಆಗ್ರಹಿಸಿದರು.
ʼಯುಜಿಸಿ 2026 ನಿಯಮಾವಳಿಗಳಿಗೆ ನೀಡಿರುವ ತಡೆ ತೆರವುಗೊಳಿಸಬೇಕು. ಎಸ್.ಸಿ., ಎಸ್.ಟಿ., ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ನಿಯಮಾವಳಿ ಜಾರಿ ವಿಶ್ವವಿದ್ಯಾಲಯಗಳಲ್ಲಿ ಜಾತಿ ದೌರ್ಜನ್ಯ ತಡೆಯಲು ಕಟ್ಟುನಿಟ್ಟಿನ ಕ್ರಮ ರೋಹಿತ್ ವೇಮುಲ ಕಾಯ್ದೆಯನ್ನು ರಾಜ್ಯದಲ್ಲಿ ಕಡ್ಡಾಯ ಜಾರಿಗೊಳಿಬೇಕುʼ ಎಂದು ಒತ್ತಾಯಿಸಿದರು.
ಇದನ್ನೂ ಓದಿ : ಬೀದರ್ | ಆಕಸ್ಮಿಕ ಬೆಂಕಿ : ಧಗಧಗನೆ ಹೊತ್ತಿ ಉರಿದ ಎರಡು ಕಾರು!
ಪ್ರತಿಭಟನೆಯಲ್ಲಿ ದಸಂಸ ರಾಜ್ಯ ಸಂಚಾಲಕ ಮಾರುತಿ ಬೌದ್ಧೆ, ಜಿಲ್ಲಾ ಸಂಚಾಲಕ ರಾಜಕುಮಾರ ವಾಘಮಾರೆ, ಅರುಣ ಪಟೇಲ್ ಸೇರಿದಂತೆ ಪ್ರಮುಖರಾದ ಬಾಬುರಾವ ಹೊನ್ನಾ, ಅಶೋಕ ಗಾಯಕವಾಡ, ರಮೇಶ ಉಮಾಪುರೆ, ಶಿವರಾಜ ತಡಪಳ್ಳಿ, ರಮೇಶ ಬೆಲ್ದಾರ್, ಸತೀಶ ರತ್ನಾಕರ್, ವಾಮನ ಮೈಸಲಗೆ, ಶಿರೋಮಣಿ ಹಲಗೆ, ನರಸಿಂಗ ಮೇಟಿ, ಝರೆಪ್ಪಾ ವರ್ಮಾ, ಗೌತಮ ಮುತ್ತಂಗಿಕರ್, ವಿಜಯಕುಮಾರ ಭಾವಿಕಟ್ಟಿ, ರಾಹುಲ ಹಾಲಹಿಪ್ಪರ್ಗಾ, ಬಸವರಾಜ ಭಾವಿದೊಡ್ಡಿ, ಸಂತೋಷ ಪಡಸಾಲೆ, ವಿನೋದ ಬಂದಗೆ, ಸಾಯಿ ಸಿಂಧೆ, ಗಾಲೇಬ್ ಹಾಶ್ಮಿ, ಜೈಭೀಮ ಚಿಮನಾಯಕ, ಅಜಯ ದಿನೆ, ಶಿವಕುಮಾರ ಗುನಳ್ಳಿ, ಸಂತೋಷ ಜೊಳದಾಬಕಾ, ಓಂಪ್ರಕಾಶ ರೊಟ್ಟೆ, ಜಗದೀಶ ಬಿರಾದಾರ, ಶಿವಕುಮಾರ ತುಂಗಾ, ಅಭಿ ಕಾಳೆ, ನಜೀರ್ ಅಹ್ಮದ, ಸೈಫ್ ಅಲಿ ಮತ್ತಿತರರು ಪಾಲ್ಗೊಂಡಿದ್ದರು.





