ಬೀದರ್‌ | ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

Date:

ಬಲಗೈ ಸಮುದಾಯಕ್ಕೆ ಒಳಮೀಸಲಾತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಹಾಗೂ ಸಮಾನ ಹಂಚಿಕೆಗೆ ಒತ್ತಾಯಿಸಿ ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಬೀದರ್ ನಗರದ ಶಾಹಗಂಜ್ ಅಂಬೇಡ್ಕರ್ ಭವನದಲ್ಲಿ ಫೆಬ್ರವರಿ 20ರಂದು ಮಧ್ಯಾಹ್ನ 2 ಗಂಟೆಗೆ ನಡೆದ ಬಲಗೈ ಸಮುದಾಯದ ಜಿಲ್ಲಾ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಮುಖಂಡರಾದ ಮಾರುತಿ ಬೌದ್ಧೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖಂಡರು ಮಾತನಾಡಿ, ʼಒಳಮೀಸಲಾತಿ ರೋಸ್ಟರ್ ಬಿಂದುವಿನ ಅನುಷ್ಠಾನದಿಂದ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದೆʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಒಳಮೀಸಲಾತಿ ವರ್ಗಿಕರಣದಂತೆ ಪ್ರವರ್ಗ (ಎ) ಗೆ ಶೇ 6ರಷ್ಟು ಅವಕಾಶಗಳು ಸಿಗುತ್ತಿವೆ. ಆದರೆ, ಪ್ರವರ್ಗ-ಬಿ (ಶೇ 6ರಷ್ಟು) ಪ್ರವರ್ಗ-ಸಿಗೆ (ಶೇ 5ರಷ್ಟು) ಅನ್ಯಾಯ ಆಗುತ್ತಿದೆ. ಇದರಿಂದ ಸಮುದಾಯದ ಅನೇಕ ಅರ್ಹರಿಗೆ ಅವಕಾಶಗಳು ಕಮ್ಮಿಯಾಗುತ್ತಿವೆ. ಉದ್ಯೋಗ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಯಾವುದೇ ತಾರತಮ್ಯವಿಲ್ಲದೆ ಸಮಾನ ಹಂಚಿಕೆ ಮಾಡಬೇಕುʼ ಎಂದು ಒಕ್ಕೊರಲಿನಿಂದ ಸರ್ಕಾರವನ್ನು ಒತ್ತಾಯಿಸಲಾಯಿತು.

ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸೇರಿದಂತೆ ಸಂಬಂಧಿತ ಸಚಿವರು ಮತ್ತು ಶಾಸಕರ ವಿರುದ್ಧ ಅಗತ್ಯವಾದರೆ ಬೀದರ್ ಬಂದ್ ಸೇರಿದಂತೆ ಬೃಹತ್ ಹೋರಾಟ ರೂಪಿಸುವುದಾಗಿ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

ಸಮಿತಿ ಅಧ್ಯಕ್ಷರಾಗಿ ಮಹೇಶ ಗೊರನಾಳಕರ್‌ ಆಯ್ಕೆ :

ಇದೇ ಸಂದರ್ಭದಲ್ಲಿ ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಮುಖಂಡರಾದ ಮಹೇಶ ಗೊರನಾಳಕರ್ ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರದೀಪ ನಾಟೇಕರ್, ಪ್ರಕಾಶ ರಾವಣ, ಭೀಮರಾವ ಮಾಲಗತ್ತಿ, ರಾಹುಲ್ ಡಾಂಗೆ, ಪವನ ಮಿಠಾರೆ, ಸಂಜುಕುಮಾರ ಸಾಗರ, ವಿನೋದ ಬಂದಗೆ, ಸೂರ್ಯಕಾಂತ ಸಾಧೂರೆ ಹಾಗೂ ಅರುಣ ಪಟೇಲ್ ಅವರನ್ನು ಆಯ್ಕೆ ಮಾಡಲಾಯಿತು.

ಇದನ್ನೂ ಓದಿ : ಬೀದರ್‌ | ನಾಳೆ ಉದ್ಯೋಗ, ಸಿರಿಧಾನ್ಯ, ಫಲಪುಷ್ಪ, ಮತ್ಸ್ಯಮೇಳ : ಕಣ್ಮನ ಸೆಳೆಯುವ ʼಮಾಡರ್ನ್‌ ಲೇಡಿʼ

ಸಭೆಯಲ್ಲಿ ಬಲಗೈ ಸಮುದಾಯದ ಮುಖಂಡರಾದ ಅನೀಲಕುಮಾರ ಬೆಲ್ದಾರ, ಬಾಬುರಾವ ಪಾಸ್ವಾನ, ಡಾ. ಕಾಶಿನಾಥ ಚೆಲ್ವಾ, ವಿಠಲದಾಸ ಪ್ಯಾಗೆ, ಕಲ್ಯಾಣರಾವ ಭೋಸ್ಲೆ, ದೀಲಿಪ್ ಭೋಸ್ಲೆ, ಶ್ರೀಪತರಾವ ದಿನೆ, ಶಿವಕುಮಾರ ನಿಲಿಕಟ್ಟಿ, ರಾಜಕುಮಾರ ಬನ್ನೆರ, ಅಂಬಾದಾಸ ಗಾಯಕವಾಡ, ವಿಜಯಕುಮಾರ ಗಾಯಕವಾಡ, ಸಂಜುಕುಮಾರ ಲಾಧಾ, ಸುಭಾಷ ಲಾಧಾ, ವಿಷ್ಣುವರ್ಧನ್ ವಾಲ್ದೊಡ್ಡಿ, ಶಿವಕುಮಾರ ಭಾವಿಕಟ್ಟಿ, ಸುಧಾಕರ್ ರಾಜಗೀರಾ, ಸಂದೀಪ್ ಕಾಂಟೆ, ಪುಟ್ಟರಾಜ ದಿನೆ, ಗೌತಮ ಬಗ್ದಲಕರ್, ಅಮೃತ ಮುತ್ತಂಗಿಕರ್, ಝೆರೆಪ್ಪಾ ಬೆಲ್ದಾರ್, ಗೌತಮ ಪ್ರಸಾದ, ಉದಯ ನಾಯಕ, ಮೋಹನ್ ಡಾಂಗೆ, ಅಜಯ ದೀನೆ, ಬಾಬುರಾವ ಮಿಠಾರೆ, ಪ್ರಸನ್ನ ಡಾಂಗೆ, ರವಿ ಚಿದ್ರಿ, ಸುಧಾಮಣಿ ಗುಪ್ತಾ, ಶೇಶರಾವ ಬೆಳಕುಣಿ, ಝರೆಪ್ಪಾ ರಾಂಪೂರೆ, ಕಂಟೆಪ್ಪಾ ಪೂಜಾರಿ, ತುಕಾರಾಮ ದೊಡ್ಡಿ, ರಾಹುಲ್ ಭಂಗೂರೆ, ಸತೀಶ್ ಲಕ್ಕಿ, ಪ್ರದೀಪ ಕುದರೆ ಸೇರಿದಂತೆ ಅನೇಕ ಹೋರಾಟಗಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...