ಬೀದರ್‌ | ಮಹಿಳೆಯರ ಸಬಲೀಕರಣವೇ ಸಮಾಜದ ಪ್ರಗತಿಯ ಮೂಲ : ಸಚಿವ ಈಶ್ವರ ಖಂಡ್ರೆ

Date:

ಮಹಿಳೆಯರ ಸಬಲೀಕರಣವೇ ಸಮಾಜದ ಪ್ರಗತಿಯ ಮೂಲವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಬೀದರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ʼತೊಟ್ಟಿಲು ತೂಗುವ ಕೈ ದೇಶವನ್ನೂ ಆಳಬಲ್ಲದು ಎಂಬ ಮಾತಿನಂತೆ ಮಹಿಳೆಯರು ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಉಕ್ಕಿನ ಮಹಿಳೆ ಎಂದು ಖ್ಯಾತಿ ಪಡೆದ ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ದಿಟ್ಟ ಆಡಳಿತ ದೇಶದ ಇತಿಹಾಸದಲ್ಲಿ ಮಹತ್ವದ ಅಧ್ಯಾಯವಾಗಿದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕ್ರೀಡಾ ಕ್ಷೇತ್ರದಲ್ಲಿ ಪಿ.ಟಿ.ಉಷಾ, ಸ್ನೇಹಾ ಅಗರವಾಲ್‌ ಸೇರಿದಂತೆ ಅನೇಕ ಮಹಿಳಾ ಕ್ರೀಡಾಪಟುಗಳು ದೇಶಕ್ಕೆ ಕೀರ್ತಿ ತಂದಿದ್ದಾರೆ. ಅಂತರಿಕ್ಷ ಕ್ಷೇತ್ರದಲ್ಲಿ ಕಲ್ಪನಾ ಚಾವ್ಲಾ ಹಾಗೂ ಸುನೀತಾ ವಿಲಿಯಮ್ಸ್‌ ಅವರು ಭಾರತದ ಹೆಸರನ್ನು ವಿಶ್ವದ ಮಟ್ಟದಲ್ಲಿ ಎತ್ತಿಹಿಡಿದಿದ್ದಾರೆʼ ಎಂದು ಸಚಿವರು ಉಲ್ಲೇಖಿಸಿದರು.

ʼಕರ್ನಾಟಕ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿ ಮಹಿಳೆಗೆ ತಿಂಗಳಿಗೆ ₹2000 ಆರ್ಥಿಕ ನೆರವು ನೀಡಲಾಗುತ್ತಿದೆ. ಶಕ್ತಿ ಯೋಜನೆಯಡಿ ರಾಜ್ಯದ ಕೋಟ್ಯಂತರ ಮಹಿಳೆಯರು ಉಚಿತ ಬಸ್ ಪ್ರಯಾಣದ ಸೌಲಭ್ಯ ಪಡೆಯುತ್ತಿದ್ದಾರೆʼ ಎಂದು ತಿಳಿಸಿದರು.

ಇದನ್ನೂ ಓದಿ : ನ್ಯಾಯಮೂರ್ತಿ ಹುದ್ದೆಗೆ ಅರ್ಹ ಮಹಿಳಾ ವಕೀಲರನ್ನು ಪರಿಗಣಿಸಿ: ಸಿಜೆಐ ಸಲಹೆ

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್‌, ಜಿಲ್ಲಾ ಪಂಚಾಯತ್‌ ಸಿಇಒ ಗಿರೀಶ ಬದೋಲೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ್‌ ಸೇರಿದಂತೆ ಅಧಿಕಾರಿಗಳು ಹಾಗೂ ಜಿಲ್ಲೆಯ ಅನೇಕ ಮಹಿಳೆಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...