ಬೀದರ್‌ | ಪ್ರತಿ ಮನೆಯಲ್ಲಿ ಇರಲಿ ಗ್ರಂಥಾಲಯ : ಡಾ. ಮಾನಸ

Date:

ಮನೆಯಲ್ಲಿ ಗ್ರಂಥಾಲಯವಿದ್ದರೆ ಮಕ್ಕಳಲ್ಲಿ ಪುಸ್ತಕ ಓದುವ ಹವ್ಯಾಸವನ್ನು ಹೆಚ್ಚಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಹೇಳಿದರು.

ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಆಯೋಜಿಸಿದ ʼಮನೆಗೊಂದು ಗ್ರಂಥಾಲಯʼ ಸಮಾರಂಭವನ್ನು ಬೀದರನ ಚನ್ನಬಸವ ನಗರದಲ್ಲಿರುವ ಕರ್ನಾಟಕ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ, ಸಾಹಿತಿ ಡಾ.ಬಸವರಾಜ ಬಲ್ಲೂರ ಅವರ ಮನೆಯಲ್ಲಿ ಸ್ಥಾಪಿಸಿದ ಗ್ರಂಥಾಲಯ ಉದ್ಘಾಟಿಸಿ ಅವರು ಮಾತನಾಡಿದರು.

ʼಜನಮಾನಸದಲ್ಲಿ ಪುಸ್ತಕದ ಬಗ್ಗೆ ಅಭಿಮಾನ ಹೆಚ್ಚಿಸಿ, ಓದುವ ಅಭಿರುಚಿ ಮೂಡಿಸುವ ಅಗತ್ಯವಿರುವುದರಿಂದ ಕನ್ನಡ ಪುಸ್ತಕ ಪ್ರಾಧಿಕಾರವು ಮನೆ-ಮನೆಗೆ ಪುಸ್ತಕ ಸಂಸ್ಕೃತಿ ಪ್ರಸರಣ ಶೀರ್ಷಿಕೆಯಡಿ ‘ಮನೆಗೊಂದು ಗ್ರಂಥಾಲಯ’ ಸೇರಿ ಅನೇಕ ಯೋಜನೆಗಳನ್ನು ರೂಪಿಸಿದೆ. ಪುಸ್ತಕ ಓದುವವರ ಸಂಖ್ಯೆ ಕಡಿಮೆ ಆಗುತ್ತಿದೆ, ಪುಸ್ತಕ ಓದಬೇಕು ಎಂದು ವೇದಿಕೆಗಳಲ್ಲಿ ಭಾಷಣ ಮಾಡುವುದರಿಂದ ಯಾವುದೇ ಉಪಯೋಗವಿಲ್ಲ ಬದಲಿಗೆ ಜನರು ಪುಸ್ತಕ ಕೊಂಡು ಓದುವಂತಹ ವಾತಾವರಣ ನಿರ್ಮಿಸಬೇಕಿದೆ. ಆಗ ಓದುಗರ ಸಂಖ್ಯೆಯೂ ಹೆಚ್ಚುವುದಲ್ಲದೆ, ಲೇಖಕರು, ಪ್ರಕಾಶಕರು ಹಾಗೂ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ವಿವಿಧ ವಿಭಾಗದವರ ಬದುಕು ಕೂಡ ಗಟ್ಟಿಗೊಳ್ಳುತ್ತದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮನೆಯಲ್ಲೊಂದು ಗ್ರಂಥಾಲಯವಿದ್ದರೆ ಪುಸ್ತಕಗಳ ಖರೀದಿಯೂ ಹೆಚ್ಚುತ್ತದೆ. ಇದರಿಂದ ಮನೆಯ ಸದಸ್ಯರ ಪುಸ್ತಕ ಪ್ರೀತಿ ದುಪ್ಪಟ್ಟಾಗುತ್ತದೆ. ಬಸವರಾಜ ಬಲ್ಲೂರ ಅವರ ಮನೆಯಲ್ಲಿನ ಗ್ರಂಥಾಲಯದಲ್ಲಿ ಸಾವಿರಾರು ಪುಸ್ತಕಗಳ ಅಮೂಲ್ಯ ಸಂಗ್ರಹವಿದೆ. ಇದು ಇತರರಿಗೂ ಪ್ರೇರಣದಾಯಿಯಾಗಿದೆ, ಪುಸ್ತಕ ಪ್ರಾಧಿಕಾರದ ಮೂಲ ಉದ್ದೇಶವು ಇದೇ ಆಗಿದೆʼ ಎಂದರು.

ಸಾಹಿತಿ ಡಾ.ಬಸವರಾಜ ಬಲ್ಲೂರ ಮಾತನಾಡಿ, ʼಇಂದಿನ ತಂತ್ರಜ್ಞಾನದ ಕಾಲದಲ್ಲಿ ಪುಸ್ತಕಗಳು ಸುಲಭವಾಗಿ ದೊರೆಯುತ್ತಿವೆ. ಆದರೆ ಓದುವವರ ಸಂಖ್ಯೆ ಕ್ಷೀಣಿಸುತ್ತಿದೆ. ಮೊಬೈಲ್ ಗೀಳಿನ ನಡುವೆ ಪುಸ್ತಕಗಳ ಓದನ್ನು ಹೆಚ್ಚಿಸಲು ಈ ರೀತಿಯ ಗ್ರಂಥಾಲಯಗಳು ಎಲ್ಲರ ಮನೆಯಲ್ಲಿರಬೇಕುʼ ಎಂದು ಆಶಯ ವ್ಯಕ್ತಪಡಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಪುಸ್ತಕಗಳನ್ನು ಖರೀದಿಸಿ ಓದುವ ಪ್ರವೃತ್ತಿಯನ್ನು ಬೆಳೆಸುವುದರ ಜೊತೆಗೆ ಪುಸ್ತಕ ಪ್ರೀತಿಯನ್ನು ಹೆಚ್ಚಿಸುವುದು ಜನಸಾಮಾನ್ಯರ ಕರ್ತವ್ಯವೂ ಹೌದು. ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮದ ಉದ್ದೇಶವು ಪುಸ್ತಕ ಪ್ರೀತಿಯನ್ನು ಬೆಳೆಸುವುದಾಗಿದೆ. ಈ ನಿಟ್ಟಿನಲ್ಲಿ ಬಲ್ಲೂರ ಅವರ ಮನೆಯಲ್ಲಿನ ಗ್ರಂಥಾಲಯವು ಅನೇಕರಿಗೆ ಮಾದರಿಯಾಗಿದೆʼ ಎಂದು ಹೇಳಿದರು.

ಇದನ್ನೂ ಓದಿ : ಶೌಚಾಲಯ ಕಾಣದ ರಾಜ್ಯದ 170 ಸರ್ಕಾರಿ ಶಾಲೆಗಳು

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಸಾಹಿತಿಗಳಾದ ಗುರುನಾಥ ಅಕ್ಕಣ್ಣ, ಬಸವರಾಜ ಬಲ್ಲೂರ, ಬಾಲಾಜಿ ಕುಂಬಾರ, ವೀರಶೆಟ್ಟಿ ಪಾಟೀಲ ಬಸವಕಲ್ಯಾಣ, ಕಸಾಪ ಯುವ ಘಟಕದ ಅಧ್ಯಕ್ಷ ಗುರುನಾಥ ರಾಜಗಿರಾ, ನಿವೃತ್ತ ಶಿಕ್ಷಕ ಸಿದ್ದಾರೆಡ್ಡಿ ನಾಗೋರಾ ಹಾಗೂ ಬಸವ ಕೇಂದ್ರ ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾವತಿ ಬಲ್ಲೂರ ಹಾಗೂ ಸಿದ್ದಾರೂಢ ಭಾಲ್ಕೆ, ಅನುಷಯಾ ಸಂಗಶೆಟ್ಟಿ ಉದ್ಗಿರೆ ಮೊದಲಾದವರು ಭಾಗವಹಿಸಿದ್ದರು. ಜಿಲ್ಲಾ ಕಸಾಪ ಕಾರ್ಯದರ್ಶಿ ಶಿವಕುಮಾರ ಕಟ್ಟೆ, ನಿರೂಪಿಸಿದರು, ಕೋಶಾಧ್ಯಕ್ಷ ಶಿವಶಂಕರ ಟೋಕರೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...