ಔರಾದ ತಾಲೂಕಿನ ಚಟ್ನಾಳ ಗ್ರಾಮದ ಸುಮಾರು 70 ರೈತರಿಗೆ ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಜಮೆಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತ್ರತ್ವದಲ್ಲಿ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ʼಜಿಲ್ಲೆಯ ಎಲ್ಲಾ ಕಬ್ಬಿನ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 2,950 ದರ ನಿಗದಿಪಡಿಸಿ, ಪ್ರತಿ 15 ದಿನಕ್ಕೊಮ್ಮೆ ರೈತರ ಖಾತೆಗಳಿಗೆ ಹಣ ಪಾವತಿಸುವುದಾಗಿ ನೀಡಿದ ಆಶ್ವಾಸನೆಯನ್ನು ಪಾಲಿಸುತ್ತಿಲ್ಲ. ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ಜಿಲ್ಲೆಯ ಹಲವು ರೈತರಿಗೆ ಪರಿಹಾರ ಇನ್ನೂ ಜಮೆಯಾಗಿಲ್ಲ. ಈ ಬಗ್ಗೆ ಮರುಪರಿಶೀಲಿಸಿ ರೈತರಿಗೆ ಪರಿಹಾರ ವಿತರಿಸಬೇಕುʼ ಎಂದರು.
ಜಿಲ್ಯಾದ್ಯಂತ ಕಬ್ಬು ಕಟಾವು ಮಾಡುವ ಕೂಲಿ ಆಳುಗಳ ಕೊರತೆ, ಬೆಳೆ ವಿಮೆ ಪರಿಹಾರದ ವಿಳಂಬ, ತೊಗರಿ ಖರೀದಿ ಕೇಂದ್ರಗಳ ಆರಂಭದ ಅಗತ್ಯ, ಹೊರ ರಾಜ್ಯಗಳಿಂದ ಕಬ್ಬು ತರದಂತೆ ನಿರ್ಬಂಧ ವಿಧಿಸಬೇಕು. ಎಪಿಎಂಸಿಗಳಲ್ಲಿ ಅಕ್ರಮ ಕಡತ ಮತ್ತು ಕಮಿಷನ್ ವಸೂಲಿಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದುʼ ಎಂದು ಎಚ್ಚರಿಸಿದರು.
ಇದನ್ನೂ ಓದಿ : ರಾಜ್ಯಪಾಲರ ನಡೆ ಸಂವಿಧಾನದ ಆತ್ಮಕ್ಕೆ ಹೊಂದಿಕೆಯಾಗಿಲ್ಲ : ಈಶ್ವರ ಖಂಡ್ರೆ ವಿಷಾದ
ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರದಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ ಸೇರಿದಂತೆ ಪ್ರಮುಖರಾದ ಬಾಬು ಮಾದಪ್ಪಾ, ರಾಜಕುಮಾರ ಪಾಟೀಲ, ಪ್ರಕಾಶ ಬಾವಗೆ, ಗಣಪತಿ ಕಾಶೆಪ್ಪಾ, ಶ್ರೀನಿವಾಸ ಶಾಮರಾವ, ಗುರುನಾಥ ಮಾಣಿಕರಾಯ ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.





