ಬೀದರ್‌ | ಚಂದಾ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮಾರಣಾಂತಿಕ ಹಲ್ಲೆ : ನಾಲ್ವರ ಬಂಧನ

Date:

ಮಹಾಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬಲವಂತದಿಂದ ಚಂದಾ ವಸೂಲಿಗೆ ಯತ್ನಿಸಿ, ಹಣ ನೀಡದಿದ್ದಕ್ಕೆ ಮೂವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೀದರ್ ನಗರದ ಮೈಲೂರು ಬಡಾವಣೆಯಲ್ಲಿ‌ ಶನಿವಾರ ನಡೆದಿದೆ.

ಗಾಯಾಳು ಮಹೇಶ ಬಿರಾದರ್‌ ನೀಡಿದ ದೂರಿನ ಮೇರೆಗೆ ಏಳು ಜನ ಹಾಗೂ ಇತರರ ಗಾಂಧಿ ಗಂಜ ಠಾಣೆಯಲ್ಲಿ ವಿರುದ್ಧ ಪ್ರಕರಣ ದಾಖಲಾಗಿದ್ದು. ವಿದ್ಯಾನಗರ ಕಾಲೋನಿಯ ಕೃಷ್ಣ, ನರೇಂದ್ರ, ಕಿರಣ್‌ ಮತ್ತು ನಿಖಿಲ್‌ ಅವರನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.

ಘಟನೆ ಏನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್ ನಗರದ ಮೈಲೂರು ಕ್ರಾಸ್‌ ಬಳಿ ಮಹೇಶ್‌ ಜಗದೀಶ್‌ ಬಿರಾದಾರ ಎಂಬುವವರ ಫೋಟೋ ಸ್ಟುಡಿಯೋ ಇದೆ. ಮಹೇಶ್‌, ಇವರ ಸಹೋದರ ಸಚಿನ್‌ ಹಾಗೂ ವಿಷ್ಣು, ರೋಹಿತ್‌ ಮೈಕಲ್‌ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಾರೆ. ನಿನ್ನೆ (ಫೆ.7) ರಂದು ಸಂಜೆ ಕೃಷ್ಣ, ನರೇಂದ್ರ, ಕಿರಣ್‌ ಮತ್ತು ನಿಖಿಲ್‌ ಸೇರಿ ಏಳೆಂಟು ಜನ ಮಹೇಶ ಅವರ ಫೋಟೋ ಸ್ಟುಡಿಯೋಗೆ ತೆರಳಿ ಶಿವರಾತ್ರಿ ಹಬ್ಬಕ್ಕೆ ಚಂದಾ (ಪಟ್ಟಿ) ಕೊಡಬೇಕೆಂದು ಮಹೇಶ ಅವರ ತಮ್ಮ ಸಚಿನ್‌ಗೆ ಕೇಳಿದ್ದಾರೆ. ಆಗ ʼನನ್ನ ಅಣ್ಣ ಇಲ್ಲ. ಆಮೇಲೆ ಬನ್ನಿ’ ಎಂದು ಹೇಳಿದ್ದಾರೆ. ಅದಕ್ಕೆ ಕೋಪಗೊಂಡು ಅವಾಚ್ಯವಾಗಿ ನಿಂದಿಸಿ, ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಜಗಳ ಬಿಡಿಸಲು ಹೋದ ವಿಷ್ಣುವಿಗೂ ಹೊಡೆದಿದ್ದಾರೆ.

ಸಚಿನ್‌ ಅವರು, ಮಹೇಶ್‌ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದಾಗ ಮಹೇಶ ಸ್ಟುಡಿಯೋಗೆ ಧಾವಿಸಿ ಹಲ್ಲೆ ನಡೆಸಿದರನ್ನು ಮಹೇಶ್‌ ʼಯಾಕೆ ಹೊಡೆದಿದ್ದಿರಾʼ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದು ಮಹೇಶ್‌ಗೂ ಹೊಡೆದು, ಚಾಕುವಿನಿಂದ ಕುತ್ತಿಗೆ ಹಿಂಭಾಗದಲ್ಲಿ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಆನಂತರ ಜೀವ ಬೆದರಿಕೆ ಕೂಡ ಒಡ್ಡಿದ್ದಾರೆ. ಕೊಲೆ ಮಾಡುವ ಉದ್ದೇಶದಿಂದಲೇ ಈ ರೀತಿ ಮಾಡಿದ್ದಾರೆ ಎಂದು ಮಹೇಶ್‌ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಗಾಂಧಿಗಂಜ್‌ ಠಾಣೆಯಲ್ಲಿ 7 ಜನ ಸೇರಿ ಇತರರ ವಿರುದ್ಧ 115(5), 118(1), 109, 352, 351(2) ಜೊತೆ 109 ಬಿಎನ್‌ಎಸ್ ಅಡಿಯಲ್ಲಿ ದೂರು ದಾಖಲಾಗಿದೆ.

ʼಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಯಾರೇ ಆಗಲಿ ತೊಂದರೆ ಅಥವಾ ಅಪರಾಧ ಕೃತ್ಯ ಎಸಗಿದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಇಂತಹ ಘಟನೆಗಳು ಕಂಡು ಬಂದಲ್ಲಿ ಸಾರ್ವಜನಿಕರು ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಲ್ಲಿ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಇಂತಹ ಕೃತ್ಯದಲ್ಲಿ ಪದೇ ಪದೇ ಭಾಗಿಯಾದವರ ವಿರುದ್ಧ ರೌಡಿ ಶೀಟರ್‌ ತೆರೆದು ಸೂಕ್ತ ಕಾನೂನು ಕಠಿಣ ಕ್ರಮ ಜರುಗಿಸಲಾಗುವುದುʼ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಗಂಡನ ಮನೆಯವರ ಕಿರುಕುಳ : 11 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ

ಠಾಣೆಯ ಪಿಐ ಆನಂದರಾವ್‌, ಪಿಎಸ್‌ಐ ದಶರಥ ಹಾಗೂ ಸಿಬ್ಬಂದಿಗಳಾದ ನವೀನ್‌, ಅನಿಲ್‌, ಇರ್ಫಾನ್‌, ಗಂಗಾಧರ್‌, ಸುಧಾಕರ್‌ ಅವರನ್ನು ಒಳಗೊಂಡ ತಂಡವು ಪ್ರಕರಣ ದಾಖಲಾದ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿರುವುದಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ಅವರು ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...