ಬೀದರ್‌ | ಕಾವ್ಯ ಮೀಮಾಂಸೆಗೆ ಜಿ.ಎಸ್‌.ಶಿವರುದ್ರಪ್ಪ ಕೊಡುಗೆ ಅಪಾರ : ರಮೇಶ ಮೂಲಗೆ

Date:

ಕನ್ನಡ ಕಾವ್ಯ ಮತ್ತು ಕಾವ್ಯ ಮೀಮಾಂಸೆಯ ಕ್ಷೇತ್ರಕ್ಕೆ ಜಿ.ಎಸ್‌.ಶಿವರುದ್ರಪ್ಪ ಅವರ ಕೊಡುಗೆ ಅಪಾರ. ಪಾಶ್ಚಾತ್ಯ ಹಾಗೂ ಭಾರತೀಯ ಕಾವ್ಯ ಮೀಮಾಂಸೆ ಕುರಿತ ಅವರ ದೃಷ್ಟಿಕೋನ ಶ್ರೇಷ್ಠಮಟ್ಟದ್ದು ಎಂದು ಮಹಾರಾಷ್ಟ್ರದ ಉದಯಗಿರಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ರಮೇಶ ಮೂಲಗೆ ಹೇಳಿದರು.

ಕಮಲನಗರ ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆ ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಚಕೋರ ಸಾಹಿತ್ಯ ವಿಚಾರ ವೇದಿಕೆ ಸಹಯೋಗದಲ್ಲಿ ʼಜಿ.ಎಸ್.ಶಿವರುದ್ರಪ್ಪ ಅವರ ಕನ್ನಡ ಸಾಹಿತ್ಯದಲ್ಲಿ ಸೌಂದರ್ಯ ಮೀಮಾಂಸೆʼ ಕುರಿತು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ʼನವೋದಯದ ಸಂದರ್ಭದಲ್ಲಿ ರಮ್ಯ ಕವಿತೆಗಳ ಮೂಲಕ ಕಾವ್ಯಯಾನ ಆರಂಭಿಸಿದ ಅವರು ನಂತರ ತಮ್ಮದೇ ಆದ ಭಿನ್ನ ಕಾವ್ಯಮಾರ್ಗವನ್ನು ರೂಪಿಸಿಕೊಂಡರು. ಎಪ್ಪತ್ತರ ದಶಕದಲ್ಲಿ ಜಿ.ಎಸ್.ಎಸ್ ಹೋರಾಟಗಾರರಿಗೆ ಸ್ಫೂರ್ತಿಯಾಗಿದ್ದರು. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಹೋರಾಟದ ಮಾರ್ಗವನ್ನು ತೋರಿಸಿದವರು ಅವರು. ಆಧುನಿಕ ಜೀವನ ಶೈಲಿಯ ಯಾಂತ್ರಿಕ ಬುದುಕನ್ನು ಅವರು ತಮ್ಮ ಮುಂಬೈ ಜಾತಕ ಕವನದಲ್ಲಿ ಮನಮುಟ್ಟುವಂತೆ ನಿರೂಪಿಸಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಕನ್ನಡ ಸಾಹಿತ್ಯ ಪರಂಪರೆ ಶ್ರೇಷ್ಠವಾದದ್ದು. ಉದಯೋನ್ಮುಖ ಕವಿಗಳು ಹಳೆಯ ಕಾವ್ಯಗಳನ್ನು ಅಧ್ಯಯನ ಮಾಡುವುದರಿಂದ ಜ್ಞಾನದ ಹರಿವು ಹೆಚ್ಚುತ್ತದೆʼ ಎಂದರು.

ಕಸಾಪ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ ಮಾತನಾಡಿ, ʼಪಾಶ್ಚಾತ್ಯ ಹಾಗೂ ಭಾರತೀಯ ಕಾವ್ಯ ಮೀಮಾಂಸೆಯ ಸೇತುವಂತೆ ಜಿ.ಎಸ್.ಎಸ್ ಕೆಲಸ ಮಾಡಿದ್ದಾರೆ. ಜತೆಗೆ ಪಾಶ್ಚಾತ್ಯ ಹಾಗೂ ಭಾರತೀಯ ಕಾವ್ಯ ಮೀಮಾಂಸೆಯ ಸಾಮ್ಯತೆಗಳನ್ನು ಅವರು ಗುರುತಿಸಿದರು. ಅವರು ಕನ್ನಡ ಸಾಹಿತ್ಯದಲ್ಲಿ ವಿಮರ್ಶೆಯ ದೃಷ್ಟಿಕೋನವನ್ನು ಬೆಳೆಸಿದ ಕವಿ ಹೃದಯಿ ವಿದ್ವಾಂಸರಾಗಿದ್ದರುʼ ಎಂದರು.

ತಾ.ಪಂ ಇಒ ಹಣಮಂತರಾಯ ಕೌಟಗೆ ಮಾತನಾಡಿ, ʼಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಜಿ.ಎಸ್.ಎಸ್ ಕವಿಯಾಗಿಯೂ, ವಿದ್ವಾಂಸರಾಗಿಯೂ ಗುರುತಿಸಿಕೊಂಡವರು. ಅವರು ಕೇವಲ ವ್ಯಕ್ತಿಗಳನ್ನು ಬೆಳೆಸದೆ ಸಮುದಾಯವನ್ನು ಕಟ್ಟುವ ಪ್ರಯತ್ನ ಮಾಡಿದರು. ಪ್ರಸ್ತುತ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗಂಭೀರವಾದ ಸಂಶೋಧನೆ ನಡೆಯಬೇಕುʼ ಎಂದರು.

ಚಕೋರ ಸಾಹಿತ್ಯ ವಿಚಾರ ವೇದಿಕೆ ಜಿಲ್ಲಾ ಸಂಚಾಲಕಿ ಡಾ.ಮಕ್ತುಂಬಿ ಎಂ, ಪಿಎಸ್‌ಐ ಆಶಾ ರಾಠೋಡ ಮಾತನಾಡಿದರು.
ಭಾಲ್ಕಿ ಹಿರೇಮಠದ ಪೂಜ್ಯ ಮಹಾಲಿಂಗ ದೇವರು ದಿವ್ಯ ಸಾನಿಧ್ಯ ವಹಿಸಿದ್ದರು. ಆಡಳಿತ ಅಧಿಕಾರಿ ಚನ್ನಬಸವ ಘಾಳೆ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ : ಬೀದರ್ | 2 ಎಕರೆ ನಿವೇಶನ ಮಂಜೂರು : ಅಲೆಮಾರಿಗಳ ಹೋರಾಟಕ್ಕೆ ಜಯ; ಧರಣಿ ಅಂತ್ಯ

ಕಸಾಪ ಗೌರವಾಧ್ಯಕ್ಷ ಪ್ರೊ.ಎಸ್.ಎನ್.ಶಿವಣಕರ, ಉಪಾಧ್ಯಕ್ಷ ಧನರಾಜ ಭವರಾ, ಮಡಿವಾಳಪ್ಪ ಮಹಾಜನ, ಸಂತೋಷ ಸುಲಾಕೆ, ತಾಪಂ ಮಾಜಿ ಅಧ್ಯಕ್ಷ ಶ್ರೀರಂಗ ಪರಿಹಾರ, ಡಾ.ಎಸ್.ಎಸ್.ಮೈನಾಳೆ, ಮನೋಜ ಹಿರೇಮಠ, ಮಹಾದೇವ ಬಿರಾದಾರ, ರಾಜೇಶ್ವರಿ ಬಿರಾದಾರ, ಪಲ್ಲವಿ ನಾಯಕ್, ಶಿವಕುಮಾರ ಏಕಲಾರೆ, ಸುಭಾಷ ಧರಣೆ, ಜ್ಞಾನೋಬಾ ಹಂಡೆ, ದೇವಿದಾಸ ಡಾಂಗೆ, ನಿಜಲಿಂಗಯ್ಯ ಸ್ವಾಮಿ, ಶರಣಬಸವ ಗೋರ್ಟಾ ಇತರರಿದ್ದರು. ಡಾ.ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆ ಮಕ್ಕಳು ನಾಡಗೀತೆ ಹಾಡಿದರು. ಸಾಹಿತಿ ಸಂಗಮೇಶ ಮುರ್ಕೆ ಸ್ವಾಗತಿಸಿದರು. ಮಹಾದೇವ ಮಡಿವಾಳ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...