ವ್ಯಕ್ತಿಯೊಬ್ಬ ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮನ್ನಳ್ಳಿ ಗ್ರಾಮದ ನಿವಾಸಿ ಅಶ್ವಿನಿ (28) ಮೃತ ಮಹಿಳೆ. ಪತಿ ಕಿಶನ್ ಕೊಲೆಗೈದ ಆರೋಪಿಯಾಗಿದ್ದಾನೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಕಿಶನ್ ಮಹಾರಾಷ್ಟ್ರದ ದಾಬಾವೊಂದರಲ್ಲಿ ಕೆಲಸ ಮಾಡುತ್ತಾನೆ. ಪತ್ನಿ ಅಶ್ವಿನಿ ಮೂರು ಮಕ್ಕಳೊಂದಿಗೆ ಮನ್ನಳ್ಳಿ ಗ್ರಾಮದಲ್ಲಿ ವಾಸವಾಗಿದ್ದಳು. ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಸಂಶಯದಿಂದ ಪದೇ ಪದೇ ಜಗಳ ಮಾಡುತ್ತಿದ್ದನು ಎನ್ನಲಾಗಿದೆ.
ಊರಿಗೆ ಬಂದ ಕಿಶನ್ ಹೆಂಡತಿಯೊಂದಿಗೆ ಅದೇ ವಿಷಯಕ್ಕೆ ಗುರುವಾರ ರಾತ್ರಿ ಜಗಳ ನಡೆದಿದ್ದು, ಕೋಪದ ಆವೇಶದಲ್ಲಿ ಹೆಂಡತಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವುದಾಗಿ ಪೊಲೀಸರು ʼಈದಿನʼಕ್ಕೆ ತಿಳಿಸಿದ್ದಾರೆ.
ಈ ಸಂಬಂಧ ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.





