ಬೀದರ್‌ | ವಚನಕಾರರ ಸಂದೇಶ ಪಾಲಿಸಿದರೆ ಬದುಕಿಗೆ ಘನತೆ : ಶರಣಪ್ಪ ಮಿಠಾರೆ

Date:

ʼಛಲಬೇಕು ಶರಣಂಗೆ ಪರಧನ, ಪರಸ್ತ್ರೀ, ಪರದೈವ ಒಲ್ಲೆನೆಂಬʼ ಎನ್ನುವ ವಚನಕಾರರ ಸಂದೇಶ ಪಾಲಿಸಿದರೆ ಮನುಷ್ಯನ ಬದುಕಿಗೆ ಘನತೆ ಬರುತ್ತದೆ ಎಂದು ಬಸವಕೇಂದ್ರ ಜಿಲ್ಲಾಧ್ಯಕ್ಷ ಶರಣಪ್ಪಾ ಮಿಠಾರೆ ನುಡಿದರು.

ಬೀದರ್‌ ನಗರದಲ್ಲಿ ವಚನಾಮೃತ ಕನ್ನಡ ಸಂಘದಿಂದ ಶನಿವಾರ ಆಯೋಜಿಸಲಾದ ಡೋಹರ ಕಕ್ಕಯ್ಯ ಹಾಗೂ ವೀರಶರಣೆ ಗುಡ್ಡಾಪುರದ ದಾನಮ್ಮ ಕುರಿತಾದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ʼಮನುಷ್ಯ ಬದುಕಿ ಸಾಯಬಾರದು, ಸತ್ತು ಬದುಕಬೇಕುʼ ಎಂದು ಮಾರ್ಮಿಕವಾಗಿ ಹೇಳಿದರು.

ʼಸಮಾಜಕ್ಕೆ ನಮ್ಮದೇನಾದರೂ ಕಾಣಿಕೆ ಕೊಡಬೇಕೆಂಬ ಯೋಚನೆ ಮಾಡಬೇಕೆ ಹೊರತು ಸಮಾಜದಿಂದ ನಾವು ಏನಾದರೂ ಪಡೆಯಬೇಕೆಂಬ ಅಪೇಕ್ಷೆ ಇರಬಾರದುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೇಣುಕಾ ಎನ್.ಬಿ. ಅವರು ವೀರಶರಣೆ ಗುಡ್ಡಾಪುರದ ದಾನಮ್ಮ ಕುರಿತು ಮಾತನಾಡಿ, ʼಲಿಂಗಮ್ಮ ಎಂಬ ಹೆಸರು ಹೊಂದಿ ಭಕ್ತಿ ಭಂಡಾರಿ ಬಸವಣ್ಣನವರ ಪ್ರಭಾವದಿಂದ ದಾನಮ್ಮನೆಂಬ ಹೆಸರು ಪಡೆದು ಪ್ರಸಿದ್ಧಳಾದ ಗುಡ್ಡಾಪುರದ ದಾನಮ್ಮನ ಬದುಕಿನ ಕಥೆ ಕೇಳಿದವರಿಗೆ ರೋಮಾಂಚನ ಉಂಟಾಗುತ್ತದೆ. ದಾನಮ್ಮ ಯಾವುದೇ ರೀತಿಯ ವಚನಗಳನ್ನು ರಚನೆ ಮಾಡದೆ ಕೇವಲ ಶರಣರ ಜೀವನದ ಸಂದೇಶ ಹಾಗೂ ವಚನಗಳ ಸಾರವನ್ನು ಜನಮನಕ್ಕೆ ಮುಟ್ಟಿಸುವ ಕೆಲಸ ಮಾಡಿದ್ದಾರೆʼ ಎಂದು ತಿಳಿಸಿದರು.

ಡೋಹರ ಕಕ್ಕಯ್ಯನವರು ಕುರಿತು ರೇಣುಕಾ ಮಳ್ಳಿ ಪೂಜಾರಿ ಅವರು ಮಾತನಾಡಿ, ʼಡೋಹರ ಕಕ್ಕಯ್ಯ ಅವರು ಮಾಳವ ದೇಶದಿಂದ ಕಲ್ಯಾಣಕ್ಕೆ ಬಂದು ಅನುಭವ ಮಂಟಪದ ಹಿರಿಯ ಸದಸ್ಯರಾಗಿ ಬಸವಣ್ಣನವರಿಗೆ ಆಪ್ತರಾಗಿ ಗುರುತಿಸಿಕೊಂಡಿದ್ದರು. ಅಭಿನವ ಮಲ್ಲಿಕಾರ್ಜುನ ಎಂಬ ಅಂಕಿತ ನಾಮದಿಂದ ಆರು ವಚನಗಳನ್ನು ರಚಿಸಿದರು. ಕಕ್ಕಯ್ಯನವರು ತಮ್ಮ ವಚನಗಳಲ್ಲಿ ಮನುಷ್ಯ ಮನುಷ್ಯನಾಗಿ ಹೇಗೆ ಬಾಳಬೇಕೆಂಬ ಸಂದೇಶ ನೀಡಿ ಕನ್ನಡ ಕುಲಕ್ಕೆ ದೊಡ್ಡ ಕಾಣಿಕೆ ನೀಡಿದ್ದಾರೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ʼವಿಬಿ- ಜಿ ರಾಮ್‌ ಜಿʼ ಕರಾಳ ಕಾಯ್ದೆ ಹಿಂಪಡೆಯಲು ದೇಶಾದ್ಯಂತ ಆಂದೋಲನ : ಸಚಿವ ಈಶ್ವರ ಖಂಡ್ರೆ

ಸಾಯಿನಾಥ ಬಿರಾದಾರ ಅವರು ಕಾರ್ಯಕ್ರಮಕ್ಕೆ ದಾಸೋಹಗೈದದರು. ಮುಖ್ಯ ಅತಿಥಿಗಳಾಗಿ ಹಾವಗಿರಾವ ಬಚ್ಚಣ್ಣ ಉಪಸ್ಥಿತರಿದ್ದರು. ಶ್ರೀಕಾಂತ ಬಿರಾಗಾರ ವಚನ ಗಾಯನ, ಪ್ರವೀಣ ನಾಡ ಗೀತೆ ಹಾಡಿದರು. ಪದ್ಮರಾಜ ಅಜಿತಮಣಿ ನಿರೂಪಿಸಿದರು. ಸಂತೋಷ ಮಂಗಳೂರೆ ಸ್ವಾಗತಿಸಿದರು. ಪರಮೇಶ್ವರ ಭೂಶೆಟ್ಟಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...