ಬೀದರ್‌ | ಮಕ್ಕಳಲ್ಲಿ ಸಂವಿಧಾನದ ಅರಿವು ಮೂಡಿಸುವುದು ಅಗತ್ಯ

Date:

ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ್‌ ಸಹಯೋಗದಲ್ಲಿ ಬೀದರ್‌ ತಾಲೂಕಿನ ಮನ್ನಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ʼಪ್ರಜಾಪ್ರಭುತ್ವದಲ್ಲಿ ಸಂವಿಧಾನದ ಆಶಯಗಳುʼ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ರವೀಂದ್ರ ಲಂಜವಾಡಕರ್ ಮಾತನಾಡಿ, ʼನಮ್ಮ ಸಂವಿಧಾನವು ಗಾತ್ರದಲ್ಲಿ ದೊಡ್ಡದು, ಕಠಿಣವೂ ಆಗಿ ಸರಳವೂ ಆಗಿದೆ. ಜನರ ಆಶಯಗಳಿಗೆ ಅದು ತವರೂರಾಗಿದೆ. ಸಂವಿಧಾನವು ಮಹಿಳೆಯರಿಗೆ ವಿಶೇಷ ಹಕ್ಕು-ಅವಕಾಶಗಳನ್ನು ನೀಡಿದ್ದು, ಪ್ರತಿಯೊಬ್ಬ ವ್ಯಕ್ತಿಗೂ ಗೌರವದಿಂದ ಬದುಕುವ ಹಕ್ಕನ್ನು ಕಲ್ಪಿಸಿದೆʼ ಎಂದು ಹೇಳಿದರು.

ಧಾರವಾಡದ ನ್ಯಾಯವಾದಿ, ಸಾಹಿತಿ ಗುರು ಹಿರೇಮಠ ಅವರು ಮಾತನಾಡಿ, ʼಭಾರತದ ಸಂವಿಧಾನವು ವಿಶ್ವದಲ್ಲಿಯೇ ಅತ್ಯಂತ ಜನಪ್ರಿಯ ಸಂವಿಧಾನವಾಗಿದ್ದು, ಜನರಿಂದ ಜನರಿಗಾಗಿ ರೂಪುಗೊಂಡಿದೆ. ಮಕ್ಕಳಲ್ಲಿ ಸಂವಿಧಾನದ ಅರಿವು ಮೂಡಿಸುವುದು ಅತ್ಯಂತ ಅಗತ್ಯʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ.ಶರಣಪ್ಪ ಎಸ್.ಮಲಗೊಂಡ ಅವರು ಮಾತನಾಡಿ, ʼಸಂವಿಧಾನವು ಸ್ವಾತಂತ್ರ್ಯ, ನ್ಯಾಯ, ಸಮಾನತೆ ಹಾಗೂ ಸೌಹಾರ್ದತೆಯ ಮೌಲ್ಯಗಳನ್ನು ಒಳಗೊಂಡ ದೇಶದ ಆತ್ಮವಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಬೆಳೆಸಬಹುದು. ಮಕ್ಕಳ ಭವಿಷ್ಯದ ಕನಸುಗಳಿಗೆ ಇಂದಿನಿಂದಲೇ ಬುನಾದಿ ಹಾಕಬೇಕುʼ ಎಂದು ಅಭಿಪ್ರಾಯಪಟ್ಟರು.

ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕಿ ಡಾ.ಮಕ್ತುಂಬಿ ಎಂ. ಮಾತನಾಡಿ, ʼವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಕಾನೂನಿನ ಅರಿವು ಪಡೆದುಕೊಳ್ಳಬೇಕು. ಅರಿವಿನ ಕೊರತೆ ಅಜ್ಞಾನಕ್ಕೆ ಕಾರಣವಾಗುತ್ತದೆʼ ಎಂದು ಹೇಳಿದರು.

ಕಾಲೇಜಿನ ಸಿಬ್ಬಂದಿ ಕಾರ್ಯದರ್ಶಿ ಡಾ.ನವರಂಗ ಮಾಣಿಕರಾವ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಟಿ ಅವರು ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಒಳಮೀಸಲಾತಿ ಅನ್ಯಾಯ ಸರಿಪಡಿಸಲು ಬಲಗೈ ಸಮುದಾಯ ಒತ್ತಾಯ

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ.ಜೈಶೀಲಾ, ಡಾ.ಪೃಥ್ವಿರಾಜ, ಡಾ.ದಶವಂತ, ಡಾ.ಸುರೇಂದ್ರ ಸಿಂಗ್, ಡಾ.ಶಾಜಿಯಾ ಅಂಜುಮ್, ಡಾ.ಸುನೀಲಕುಮಾರ, ಉಷಾರಾಣಿ, ಕಚೇರಿ ಅಧೀಕ್ಷಕರಾದ ಮಗದುಮ್, ಆನಂದ, ಅಯುಬ್ ಸೇರಿದಂತೆ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರ್ಥಿಗಳಾದ ವೈಷ್ಣವಿ ಮತ್ತು ಜ್ಯೂಲಿ ನೆರವೇರಿಸಿದರು. ಪ್ರಾಧ್ಯಾಪಕರಾದ ಸವಿತಾ ಪಾಟೀಲ್ ನಿರ್ವಹಿಸಿದರು. ರೇಣುಕಾ ಸ್ವಾಗತಿಸಿದರು. ಡಾ.ಜ್ಞಾನಗಂಗಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...