ಬೀದರ್ | ಎಲ್ಲರೂ ಒಗ್ಗೂಡಿದಾಗ ಕಲ್ಯಾಣ ರಾಜ್ಯ ನಿರ್ಮಾಣ ಸಾಧ್ಯ

Date:

ಬಸವಾದಿ ಶರಣರ ಚಿಂತನೆಗಳನ್ನು ಮೈಗೂಡಿಸಿಕೊಂಡಿರುವ ಎಲ್ಲರೂ ಒಗ್ಗೂಡಿದಾಗ ಕಲ್ಯಾಣ ರಾಜ್ಯ ನಿರ್ಮಾಣದ ಸಂಕಲ್ಪ ಸಾಕಾರಗೊಳ್ಳಲು ಸಾಧ್ಯ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಹೇಳಿದರು.

ಬಸವಕಲ್ಯಾಣ ಬಸವ ಧರ್ಮ ಪೀಠ ಸಭಾಂಗಣದಲ್ಲಿ ಭಾನುವಾರ ನಡೆದ ಕಲ್ಯಾಣ ನಡಿಗೆ ಮತ್ತು ಹರಳಯ್ಯ ಜ್ಯೋತಿಯಾತ್ರೆ ಹಾಗೂ ಶರಣ ಸಂಸತ್, ಶರಣ ವಂದನೆ ಹಾಗೂ ಶರಣಾರತಿ ಸಮಾವೇಶದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಬಿಜನಳ್ಳಿ ಗ್ರಾಮದಿಂದ ಫೆ.15 ರಿಂದ ಬಸವಕುಮಾರ್ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಪಾದಯಾತ್ರೆ ವಿವಿಧ ಗ್ರಾಮಗಳ ಮುಖಾಂತರ ಬಸವಕಲ್ಯಾಣದಲ್ಲಿ ಭಾನುವಾರ ಸಮಾವೇಶಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಶರಣ ಹರಳಯ್ಯ ಕಲ್ಯಾಣಮ್ಮ ದಂಪತಿ ತಮ್ಮ ತೊಡೆ ಚರ್ಮದಿಂದ ತಯಾರಿಸಿದ ಚಮ್ಮಾವುಗೆಗಳಿರುವ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಬಿಜನಳ್ಳಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಅನುದಾನ ಒದಗಿಸಬೇಕು’ ಎಂದು ಆಗ್ರಹಿಸಿದರು.

‘ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ಬಿತ್ತಿದ ಬಸವಕಲ್ಯಾಣ ಜಗತ್ತಿನ ಪವಿತ್ರ ಕ್ಷೇತ್ರವಾಗಿದೆ. ಮುಂದಿನ ಶತಮಾನದಲ್ಲಿ ವಿಶ್ವದ ಎಲ್ಲ ಸಮುದಾಯದ ಜನರ ದಾರಿ ಬಸವಕಲ್ಯಾಣದತ್ತ ಬರುವಂತಾಗುತ್ತದೆ. ಬಸವಕಲ್ಯಾಣದ ತ್ರಿಪುರಾಂತ ಕೆರೆ ಅಭಿವೃದ್ಧಿ ಹಾಗೂ ಕೆರೆ ಮಧ್ಯದಲ್ಲಿ ನಿತ್ಯ ವಚನ ಪಠಣ ನಡೆಸಲು ವಚನ ಮಂಟಪ ನಿರ್ಮಿಸಲು ಸರ್ಕಾರ ಒತ್ತು ನೀಡಬೇಕು’ ಎಂದು ಒತ್ತಾಯಿಸಿದರು.

1004974257

ಸಾನಿಧ್ಯ ವಹಿಸಿದ ಬಸವಕಲ್ಯಾಣ ಗುಣತೀರ್ಥವಾಡಿ ಮಠದ ಬಸವಪ್ರಭು ಸ್ವಾಮೀಜಿ ಮಾತನಾಡಿ, ‘ಲಿಂಗಾಯತ ಧರ್ಮ ಭಕ್ತಿ ಪ್ರಧಾನ ಧರ್ಮವಾಗಿದೆ. ಈ ಧರ್ಮಕ್ಕೆ ವೈಜ್ಞಾನಿಕ, ವೈಚಾರಿಕತೆಯ ಅರಿವು, ಆಚಾರ ಹಾಗೂ ಭಕ್ತಿ ತಳಹದಿಯಾಗಿದೆ. ಬಸವಣ್ಣನವರ ಬಹುತೇಕ ವಚನಗಳಲ್ಲಿ ಭಕ್ತಿ ಭಾವ ತುಂಬಿದೆ’ ಎಂದರು.

ಶಿಕ್ಷಕ ಮಹಾಂತೇಶ ಕುಂಬಾರ ಅವರು ಮಾತನಾಡಿ, ‘ಸಮಾಜದಲ್ಲಿ ಬಸವ ಪ್ರಜ್ಞೆ ಎಚ್ಚರಗೊಳಿಸುವ ಕೆಲಸ ಆಗಬೇಕು. ಧಾರ್ಮಿಕ ಪರಂಪರೆಯಾದ ಇಷ್ಟಲಿಂಗದ ಮಹತ್ವವನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಬಸವಾದಿ ಶರಣರ ಸಾಮಾಜಿಕ ಮೌಲ್ಯಗಳನ್ನು ಪಾಲಿಸಬೇಕು. ಮಕ್ಕಳಿಗೆ ಶರಣ ಸಂಸ್ಕೃತಿಯ ಆಶಯಗಳನ್ನು ತಿಳಿಸುವುದು ಅತ್ಯಗತ್ಯ’ ಎಂದರು ಹೇಳಿದರು.

ಬೇಲೂರು ಮಠದ ನಿಜಗುಣಾನಂದ ಸ್ವಾಮೀಜಿ, ಹುಲಸೂರು ಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ, ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆ ಸೇರಿದಂತೆ ಮತ್ತಿತರರು ಮಾತನಾಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಜಗತ್ತು ಬಯಸುತ್ತಿರುವುದು ಯುದ್ಧವನ್ನಲ್ಲ; ಶಾಂತಿ-ನೆಮ್ಮದಿಯನ್ನು

ನಿವೃತ್ತ ನ್ಯಾಯಾಧೀಶ ಶರಣ ಎಸ್.ಎಸ್. ನಾಗರಾಣೆ ವಹಿಸಿದ್ದರು. ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಪದ್ಮಶ್ರೀ ಪುರಸ್ಕೃತೆ ಸುಶೀಲಮ್ಮ , ಬಸವ ಧರ್ಮ ಪೀಠದ ಸಿದ್ದರಾಮೇಶ್ವರ ಸ್ವಾಮೀಜಿ, ಅನುಭವ ಮಂಟಪ ಸಂಚಾಲಕ ಶಿವಾನಂದ ಸ್ವಾಮೀಜಿ, ಧುಮ್ಮನಸೂರಿನ ಶಂಕರಲಿಂಗ ಸ್ವಾಮಿಜಿ, ಲಾವಣ್ಯ ಮಾತಾಜಿ, ಬಸವ ದೇವರು, ಸತ್ಯಕ್ಕ ಮಾತಾಜಿ, ಶರಣ ಪಂಡಿತ ಬಾಳೂರೆ, ವೀರಣ್ಮ ಕೊರ್ಲಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...