ಬೀದರ್‌ | ಕನ್ನಡ ಬಳಕೆಯಿಂದ ಭಾಷೆ ಬೆಳೆಯಲು ಸಾಧ್ಯ : ಭಾರತಿ ವಸ್ತ್ರದ

Date:

ಕನ್ನಡ ನಾಡು-ನುಡಿ, ಭಾರತ ಸಂಸ್ಕೃತಿ ಎಲ್ಲವೂ ಸಮೃದ್ಧಿಯಾಗಿದೆ. ಕನ್ನಡ ಹೆಚ್ಚು ಬಳಕೆಯಾದರೆ ಮಾತ್ರ ಕನ್ನಡ ಬೆಳೆದು ಉಳಿಯಲು ಸಾಧ್ಯ ಎಂದು ಹಿರಿಯ ಸಾಹಿತಿ ಭಾರತಿ ವಸ್ತ್ರದ ನುಡಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಇವರ ಸಹಯೋಗದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ ವಿಶ್ವ ಮಾನವ ಸಂದೇಶ ನೀಡಿದ ಮಹಾಕವಿ ಕುವೆಂಪು ಅವರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ʼಕುವೆಂಪು ಮಹಾನ್ ವ್ಯಕ್ತಿ, ಕನ್ನಡದ ಆಸ್ತಿಯಾಗಿದ್ದಾರೆ. ಅವರು ಬರೆದ ಅನೇಕ ಕಾದಂಬರಿಗಳು ಚಲನಚಿತ್ರಗಳಾಗಿವೆ. ಕುವೆಂಪು ಸಾಹಿತ್ಯ ಹೆಚ್ಚು ಅಧ್ಯಯನ ನಡೆಸಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಟ್ಟವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ರಮೇಶ ಬಿರಾದಾರ ಮಾತನಾಡಿ, ʼಗಡಿ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವ ಜೊತೆಗೆ ಗಡಿ ಭಾಗದಲ್ಲಿ ಕುವೆಂಪು ಅವರನ್ನು ಪರಿಚಯಿಸುವ ಕಾರ್ಯ ಆಗಬೇಕಿದೆ. ನಮ್ಮ ಅನುಕೂಲಕ್ಕೆ ತಕ್ಕಂತೆ ಕನ್ನಡ ಬಳಸಬಹುದುʼ ಎಂದರು.

ನೌಬಾದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ರಾಜಕುಮಾರ ಅಲ್ಲೂರೆ ಅವರು ವಿಶೇಷ ಉಪನ್ಯಾಸ ನೀಡಿ, ʼತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚು ಕನ್ನಡವನ್ನು ಬಳಸಬೇಕು. ಶೈಕ್ಷಣಿಕ, ಸಾಮಾಜಿಕ, ರಾಜಕೀಯ, ಆರ್ಥಿಕ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸುವ ಕಾರ್ಯದಲ್ಲಿ ಕನ್ನಡ ಬಳಕೆ ಹೆಚ್ಚಳವಾಗಬೇಕಿದೆ. ಕುವೆಂಪು ಸಾಹಿತ್ಯದಲ್ಲಿ ವೈಚಾರಿಕ, ವೈಜ್ಞಾನಿಕ ಚಿಂತನೆಯಿದೆ. ಎಲ್ಲರೂ ಕುವೆಂಪು ಸಾಹಿತ್ಯ ಓದಬೇಕುʼ ಎಂದು ತಿಳಿಸಿದರು.

ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕಿ ಡಾ.ಮಕ್ತುಂಬಿ ಎಂ. ಮಾತನಾಡಿ, ʼಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಬೇಕು. ಪುಸ್ತಕಗಳನ್ನು ಮಕ್ಕಳಿಗೆ ಕೊಟ್ಟು ಪ್ರೋತ್ಸಾಹ ನೀಡಬೇಕು. ಒಂದು ಸಲ ಓದುವ ಹವ್ಯಾಸ ಬೆಳೆಸಿಕೊಂಡರೆ ಅವರು ಮುಂದುವರೆಸಿಕೊಂಡು ಹೋಗುತ್ತಾರೆ. ಹೆಚ್ಚಿನ ಪುಸ್ತಕ ಓದು ಜ್ಞಾನ ವೃದ್ಧಿಸುತ್ತದೆʼ ಎಂದರು.

ಮುಖ್ಯ ಅತಿಥಿಗಳಾದ ಪಾಂಡುರಂಗ ಬೆಂಬೂಳಗಿ ಮಾತನಾಡಿ, ʼಕಲಿಕೆ ಎಂಬುದು ಬದುಕಿನೂದ್ದಕ್ಕೂ ನಿರಂತರವಾಗಿರುತ್ತದೆ. ಶ್ರದ್ಧೆ, ಭಕ್ತಿ, ಜ್ಞಾನ ನಮ್ಮನ್ನು ಉನ್ನತ ಮಟ್ಟಕ್ಕೆ ಕರೆದೊಯ್ಯುತ್ತದೆʼ ಎಂದು ನುಡಿದರು.

ಇದನ್ನೂ ಓದಿ : ಬೀದರ್‌ | ಅಸ್ಪೃಶ್ಯತೆ ಆಚರಣೆಗೆ ತಡೆಗೆ ಆಗ್ರಹ

ಬೀದರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಲಕ್ಷ್ಮಿಕಾಂತ ಶಂಕರರಾವ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗೌರಮ್ಮ ಅವರು ಜನಪದ ಗೀತೆ ಹಾಡಿದರು. ರಮೇಶ ಪೂಜಾರಿ ನಿರೂಪಿಸಿದರು. ಗೌಡಪ್ಪ ಜಿ ಸ್ವಾಗತಿಸಿದರು. ವೀರಶೆಟ್ಟಿ ಕುಂಬಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...