ಬೀದರ್‌ | 2 ದಿನಗಳ ಸಿರಿಧಾನ್ಯ, ಫಲಪುಷ್ಪ, ಮತ್ಸ್ಯಮೇಳಕ್ಕೆ ಚಾಲನೆ ನೀಡಿದ ಸಚಿವ ಈಶ್ವರ ಖಂಡ್ರೆ

Date:

ಕೃಷಿ ಲಾಭದಾಯಕ ಕ್ಷೇತ್ರವಾಗಲೂ ಚರ್ಚೆ, ಸಂಶೋಧನೆ, ಮಾರುಕಟ್ಟೆ ಲಭ್ಯತೆ, ಸರ್ಕಾರದ ಯೋಜನೆಗಳು ರೈತರ ಮನೆ ಬಾಗಿಲಿಗೆ ತಲುಪುವಂತಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದ ಉದ್ಯೋಗ ಮೇಳ, ಸಿರಿಧಾನ್ಯ ಮೇಳ, ಫಲಪುಷ್ಪ ಪ್ರದರ್ಶನ ಹಾಗೂ ಮತ್ಸ್ಯಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

WhatsApp Image 2026 02 22 at 2.58.22 PM

ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕೆಗಳು ಇಲ್ಲದಿದ್ದರಿಂದ ಶೇ.75 ರಷ್ಟು ಜನ ಕೃಷಿ ಮೇಲೆ ಅವಲಂಬಿತರಾಗಿದ್ದಾರೆ. ಕೃಷಿಗೆ ಉತ್ತೇಜನೆ ನೀಡಬೇಕಿದೆ. ಪ್ರತಿ ವರ್ಷ ಜಿಲ್ಲೆಯಲ್ಲಿ 10 ಲಕ್ಷ ಎಕರೆ ಭೂಮಿಯಲ್ಲಿ ಬಿತ್ತಣಿಕೆ ಮಾಡಲಾಗುತ್ತದೆ. ಅದರಲ್ಲಿ ಶೇ 50ರಷ್ಟು ಸೋಯಾ, ಶೇ 25ರಷ್ಟು ತೊಗರಿ ಹಾಗೂ ಶೇ 25 ರಷ್ಟು ಇತರೆ ಬೆಳೆಗಳನ್ನು ಬೆಳೆಯಲಾಗುತ್ತದೆ. ರೈತರು ಕೇವಲ ಒಂದೇ ಬೆಳೆಗೆ ಅವಲಂಬಿತರಾಗದೆ ಸಿರಿಧಾನ್ಯಗಳಂತಹ ವಿವಿಧ ಬೆಳೆ ಬೆಳೆಯಲು ಮುಂದಾಗಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿರಿಧಾನ್ಯಗಳು ಕೇವಲ ಆಹಾರವಲ್ಲ; ಆರೋಗ್ಯಪೂರ್ಣ ಜೀವನದ ಭದ್ರ ಆಧಾರವಾಗಿವೆ. ಸಿರಿಧಾನ್ಯಗಳು ಕಡಿಮೆ ನೀರಿನಲ್ಲಿ ಬೆಳೆಯುವ ಶಾಶ್ವತ ಬೆಳೆಗಳಾಗಿದ್ದು, ಹವಾಮಾನ ಬದಲಾವಣೆಯ ಸಂದರ್ಭದಲ್ಲಿಯೂ ರೈತರಿಗೆ ಭದ್ರ ಆದಾಯ ನೀಡುತ್ತವೆ. ಆರೋಗ್ಯ ಮತ್ತು ಕೃಷಿ ಎರಡನ್ನೂ ಒಟ್ಟಿಗೆ ರಕ್ಷಿಸುವ ಶಕ್ತಿ ಸಿರಿಧಾನ್ಯಗಳಲ್ಲಿ ಅಡಗಿದೆ. ಜನರು ತಮ್ಮ ದೈನಂದಿನ ಆಹಾರದಲ್ಲಿ ಸಿರಿಧಾನ್ಯಗಳನ್ನು ಅಳವಡಿಸಿಕೊಳ್ಳಬೇಕು. ರೈತರು ಮೌಲ್ಯವರ್ಧಿತ ಉತ್ಪನ್ನಗಳತ್ತ ಗಮನಹರಿಸಬೇಕು. ಸರ್ಕಾರದ ಯೋಜನೆ, ಕಾರ್ಯಕ್ರಮ, ತೋಟಗಾರಿಕೆ ಉತ್ಪನ್ನ ಹಾಗೂ ಮಾರುಕಟ್ಟೆಯಲ್ಲಿ ರೈತರಿಗೆ ಬೆಂಬಲ ಬೆಲೆ ಸಿಗಬೇಕೆಂಬುದು ಈ ಮೇಳದ ಮುಖ್ಯ ಉದ್ದೇಶವಾಗಿದೆʼ ಎಂದರು.

WhatsApp Image 2026 02 22 at 2.58.24 PM

ಕಳೆದ ವರ್ಷದಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ 1.65 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದರು. ಸರಕಾರವು ಕಾಳಜಿ ವಹಿಸಿ ಹೆಚ್ಚಿನ ಪರಿಹಾರ ಒದಗಿಸಿದೆ. 1.92 ಲಕ್ಷ ರೈತರ ಖಾತೆಗೆ ₹288 ಕೋಟಿ ರೂಪಾಯಿ ನೇರವಾಗಿ ಜಮೆಯಾಗಿದೆ. ಇದಕ್ಕೆ ಅನುಗುಣವಾಗಿ ಬೆಳೆ ಕಟಾವು ಪ್ರಯೋಗ ಮಾಡಿಸಿ ಈಗಾಗಲೇ ₹100 ಕೋಟಿ ಬೆಳೆ ವಿಮೆ ಹಣ ಜಮೆಯಾಗಿದ್ದು, ಇನ್ನು ₹50 ಕೋಟಿ ರೂ. ಬೆಳೆ ವಿಮೆ ಬರಲಿದೆ. ಒಟ್ಟು ₹450 ಕೋಟಿ ಜಿಲ್ಲೆಯ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗಿದೆʼ ಎಂದು ಸಚಿವ ಖಂಡ್ರೆ ಅವರು ತಿಳಿಸಿದರು.

WhatsApp Image 2026 02 22 at 6.02.59 PM

ʼರೈತರ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಬೆಲೆ ದೊರೆಯಬೇಕು, ರೈತರು ಸಹ ವಿವಿಧ ಬೆಳೆಗಳನ್ನು ಬೆಳೆಯಬೇಕು. ಎಲ್ಲೆಡೆ ಮಾಲಿನ್ಯ ಕಂಡು ಬರುತ್ತಿದೆ. ಮಣ್ಣಿನಲ್ಲಿ, ಬೆಳೆಗಳಲ್ಲಿ ರಸಾಯನಿಕಗಳ ಪ್ರಮಾಣ ಹೆಚ್ಚುತ್ತಿದೆ. ರೈತರು ಹೆಚ್ಚು ಸಿರಿಧಾನ್ಯ ಬೆಳೆಯಬೇಕಿದೆ. ಜಿಲ್ಲೆಯಲ್ಲಿ ಕಾರಂಜಾ, ಮೇಹಕರ್ ನೀರಾವರಿ ಚಾಲ್ತಿಯಲ್ಲಿದೆ. ಔರಾದ್ ಕೆರೆಗಳನ್ನು ತುಂಬಿಸಲಾಗುವುದು. ರೈತರ ಅಭಿವೃದ್ಧಿಗೆ ತಾವು ಬದ್ಧರಿದ್ದೇವೆʼ ಎಂದು ತಿಳಿಸಿದರು.

WhatsApp Image 2026 02 22 at 8.36.48 PM

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದಿಲೀಪ್ ಬದೋಲೆ ಪ್ರಾಸ್ತಾವಿಕವಾಗಿ ಮಾತನಾಡಿ, ʼಉದ್ಯೋಗ ಮೇಳದಲ್ಲಿ 32 ವಿವಿಧ ಕಂಪನಿಗಳು ಭಾಗವಹಿಸಿವೆ, ಉದ್ಯೋಗಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಲು ಎನ್.ಆರ್.ಎಲ್.ಎಮ್ ಯೋಜನೆಯಿಂದ ಜಿ.ಪಿ.ಎಲ್.ಎಫ್ ಗಳ ಮೂಲಕ ಗ್ರಾಮಗಳಲ್ಲಿ ಪ್ರಚಾರ ನಡೆಸಿ ನೋಂದಣಿಗಾಗಿ ಆನ್‌ಲೈನ್ ಲಿಂಕ್‌ನಲ್ಲಿ ಅವಕಾಶ ನೀಡಲಾಗಿದೆ, ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಕೊಂಡು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಿʼ ಎಂದು ಹೇಳಿದರು.

ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಗ್ರಾಮೀಣಾಭಿವೃದ್ಧಿ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಖಾಸಗಿ ಸಂಸ್ಥೆಗಳು ಮೇಳದಲ್ಲಿ ಸ್ಥಾಪಿಸಿದ 49 ಮಳಿಗೆಗಳಿಗೆ ಭೇಟಿ ನೀಡಿ ವೀಕ್ಷಿಸಿದರು.

WhatsApp Image 2026 02 22 at 6.03.18 PM

ಬೆಳಿಗ್ಗೆ ನಗರದ ಛತ್ರಪತಿ ಶಿವಾಜಿ ವೃತ್ತದಿಂದ ನೆಹರೂ ಕ್ರೀಡಾಂಗಣದವರೆಗೆ ನಡೆದ ʼಸಿರಿಧಾನ್ಯ ನಡಿಗೆʼ ಮೆರವಣಿಗೆಗೆ ಬೀದರ ದಕ್ಷಿಣ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆ ಅವರು ಚಾಲನೆ ನೀಡಿದರು, ಮೆರವಣಿಗೆಯಲ್ಲಿ ಸಿರಿಧಾನ್ಯ ಹೊತ್ತ ಮಹಿಳೆಯರು ಗಮನ ಸೆಳೆದರು.

ಇದನ್ನೂ ಓದಿ : ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭಿಸಿ, ರೈತರ ಸಾಲ ಮನ್ನಾ ಮಾಡಿ : ಸರ್ಕಾರಕ್ಕೆ ಬಹಿರಂಗ ಪತ್ರ

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ, ಕಾಡಾ ಅಧ್ಯಕ್ಷ ಬಾಬು ಹೊನ್ನನಾಯ್ಕ, ಬೀದರ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಸಿದ್ರಾಮಯ್ಯಾ ಸ್ವಾಮಿ, ಕರ್ನಾಟಕ ಪ್ರದೇಶ ಕೃಷಿಕ ಸಮಾಜ ರಾಜ್ಯ ಪ್ರತಿನಿಧಿ ವಿಶ್ವನಾಥ ಪಾಟೀಲ ಮಾಡಗೊಳ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಬೀದರ ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ, ಜಂಟಿ ಕೃಷಿ ನಿರ್ದೇಶಕ ದೇವಿಕಾ, ಮೀನುಗಾರಿಕೆ ಉಪ ನಿರ್ದೇಶಕರಾದ ಜಾನವಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

WhatsApp Image 2026 02 22 at 8.13.45 PM
ಸಿರಿಧಾನ್ಯ ನಡಿಗೆ
WhatsApp Image 2026 02 22 at 2.58.24 PM 1 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...