ಬೀದರ್‌ | ಮಾರ್ಚ್‌ನಲ್ಲಿ ಅಂಬೇಡ್ಕರ್ ಚಿಂತನೆಗಳ ಕುರಿತ ರಾಷ್ಟ್ರೀಯ–ಅಂತರಾಷ್ಟ್ರೀಯ ವಿಚಾರ ಸಂಕಿರಣ

Date:

ಡಾ.ಬಿ.ಆರ್.ಅಂಬೇಡ್ಕರ ಅವರ ʼಭಾರತದ ಪ್ರಸ್ತುತ ಸವಾಲುಗಳು, ಚಿಂತನೆಗಳು ಮತ್ತು ಸಮಕಾಲೀನ ಪರಿಹಾರಗಳುʼ ವಿಷಯದ ಕುರಿತು ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ʼಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಸವ ಭೂಮಿಯಾದ ಬೀದರದಲ್ಲಿ ಅಂಬೇಡ್ಕರ ಚಿಂತನೆಗಳ ಕುರಿತ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ನಡೆಯುತ್ತಿರುವುದು ಹೆಮ್ಮೆಯ ವಿಷಯ. ಬುದ್ಧ, ಬಸವ ಮತ್ತು ಅಂಬೇಡ್ಕರ ಅವರ ಆದರ್ಶಗಳು ಸಮಸಮಾಜ ನಿರ್ಮಾಣಕ್ಕೆ ದಾರಿ ತೋರಲಿವೆʼ ಎಂದು ಹೇಳಿದರು.

ʼಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮದಲ್ಲಿ ಖ್ಯಾತ ಕಲಾವಿದರಿಂದ ಅಂಬೇಡ್ಕರ ಕುರಿತ ನಾಟಕಗಳು, ಸಾಹಿತಿ ಮತ್ತು ಹೋರಾಟಗಾರರಿಂದ ವಿವಿಧ ವಿಷಯಗಳ ವಿಚಾರಗೋಷ್ಠಿಗಳು ನಡೆಯಲಿವೆ. ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಗಣ್ಯರನ್ನು ಆಹ್ವಾನಿಸಲಾಗುವುದುʼ ಎಂದು ಸಚಿವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರಗಳು ಎಲ್ಲ ಸಮುದಾಯಗಳಿಗೆ ಅಗತ್ಯವಾಗಿವೆ. ಜಿಲ್ಲೆಯ ಎಲ್ಲಾ ವರ್ಗದ ಜನರು, ಮುಖಂಡರು ಹಾಗೂ ಯುವ ಸಮುದಾಯಗಳನ್ನು ಒಳಗೊಳ್ಳುವಂತೆ ವಿಚಾರ ಸಂಕಿರಣವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗುವುದುʼ ಎಂದು ತಿಳಿಸಿದರು.

ʼವಿಚಾರ ಸಂಕಿರಣದಲ್ಲಿ ಅಂಬೇಡ್ಕರ ಚಿಂತನೆಗಳು, ಲಿಂಗ ಸಮಾನತೆ, ಅಸ್ಪೃಶ್ಯತೆಯ ಸಬಲೀಕರಣ, ಭಾರತೀಯ ಸಂವಿಧಾನದ ಮೌಲ್ಯಗಳು, ಸಾಮಾಜಿಕ ನ್ಯಾಯ, ಜಾತಿ ವ್ಯವಸ್ಥೆ ಸೇರಿದಂತೆ ಆರು ಪ್ರಮುಖ ವಿಷಯಗಳ ಕುರಿತು ಗೋಷ್ಠಿಗಳು ನಡೆಯಲಿವೆʼ ಎಂದು ವಿವರಿಸಿದರು.

ಸಭೆಯಲ್ಲಿ ಸಮಾಜದ ಹಿರಿಯ ಮುಖಂಡರುಗಳು ವಿಚಾರ ಸಂಕಿರಣದ ಯಶಸ್ವಿಗಾಗಿ ವಿವಿಧ ಸಲಹೆಗಳನ್ನು ನೀಡಿದರು. ಎಲ್ಲರ ಸಲಹೆಗಳನ್ನು ಪರಿಶೀಲಿಸಿ ಜಿಲ್ಲಾಡಳಿತ ಹಾಗೂ ಸಮಾಜದ ಎಲ್ಲ ಮುಖಂಡರುಗಳ ಸಹಕಾರದಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇದನ್ನೂ ಓದಿ : AI ಸೃಷ್ಟಿಸುವ ತಪ್ಪು ಮಾಹಿತಿ ಪ್ರಜಾಪ್ರಭುತ್ವದ ದಿಕ್ಕು ತಪ್ಪಿಸಬಹುದು: ಕೇಂದ್ರ ಸಚಿವ ಜಿತಿನ್‌ ಪ್ರಸಾದ ಎಚ್ಚರಿಕೆ

ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಸೇರಿದಂತೆ ವಿವಿಧ ಸಂಘ-ಸಂಸ್ಥೆ, ಸಮಾಜದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...