ಬೀದರ್‌ | ಅಧಿಕಾರಿಗಳ ಮನವೋಲಿಕೆ ವಿಫಲ : ಮುಂದುವರೆದ ಅಲೆಮಾರಿಗಳ ಧರಣಿ

Date:

ಶಾಶ್ವತ ನಿವೇಶನ ನೀಡುವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ಅಲೆಮಾರಿ ಸಮುದಾಯದ ಮಹಿಳೆಯರು, ಮಕ್ಕಳು ತಹಸೀಲ್ದಾರ್‌ ಕಚೇರಿ ಎದುರುಗಡೆ ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನವೂ ಮುಂದುವರಿಸಿದರು.

ಔರಾದ್‌ ಪಟ್ಟಣದ ಎಪಿಎಂಸಿ, ಬಿಇಒ ಕಚೇರಿ ಸಮೀಪದ ರಸ್ತೆ ಬದಿಯಲ್ಲಿ ನಾಲ್ಕು ದಶಕಗಳಿಂದ ತಾತ್ಕಾಲಿಕ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಅಲೆಮಾರಿ, ಅರೆಅಲೆಮಾರಿ ಜನಾಂಗಕ್ಕೆ ಸರ್ಕಾರದಿಂದ ನಿವೇಶನ ಮಂಜೂರಾದರೂ ಹಂಚಿಕೆ ಮಾಡಲು ಮೀನಾಮೇಷ ಎಣಿಸಲಾಗುತ್ತಿದೆಂದು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲ್‌ ಕಚೇರಿ ಎದುರು ಧರಣಿ ಆರಂಭಿಸಿದ್ದಾರೆ.

ಅಹೋರಾತ್ರಿ ಧರಣಿ ಆರಂಭವಾದ ಸ್ಥಳಕ್ಕೆ ನಿನ್ನೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ಹಾಗೂ ತಹಸೀಲ್ದಾರ್‌ ಮಹೇಶ ಪಾಟೀಲ್‌ ಅವರು ಭೇಟಿ ನೀಡಿ, ʼಈಗಾಗಲೇ ಅಲೆಮಾರಿ ಜನಾಂಗಕ್ಕೆ ಮಂಜೂರಾದ ಸರ್ವೇ ನಂ- 205ರಲ್ಲಿ ಎರಡು ಎಕರೆ ಜಾಗದಲ್ಲಿ 72 ಅಲೆಮಾರಿ ಕುಟುಂಬಗಳಿಗೆ ಮನೆ ಮಂಜೂರಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. ಮುಂದಿನ ಐದಾರು ತಿಂಗಳಲ್ಲಿ ಕಾಮಗಾರಿ ಆರಂಭಿಸಲಾಗುವುದು ಧರಣಿ ಹಿಂಪಡೆಯಿರಿʼ ಎಂದು ಮನವೋಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಕ್ಕೂಟದ ಮುಖಂಡ ರಾಹುಲ್‌ ಖಂದಾರೆ ಅವರು ಮಾತನಾಡಿ, ʼ2019ರಲ್ಲಿ ಔರಾದ ಹೊರವಲಯದಲ್ಲಿ ಸರ್ವೇ ನಂ-183ರಲ್ಲಿ 2 ಎಕರೆ ಅಲೆಮಾರಿ ಜನಾಂಗದ ನಿವೇಶನಕ್ಕಾಗಿ ಮೀಸಲಿಟ್ಟ ಜಮೀನು ರದ್ದತಿಗಾಗಿ ತಾಲೂಕು ಆಡಳಿತದಿಂದ ಪತ್ರ ಬರೆಯಲಾಗಿದೆ. ಆ ಜಮೀನು ರದ್ದತಿ ಪ್ರಸ್ತಾವನೆ ಹಿಂಪಡೆದು ಅಲೆಮಾರಿ ಸಮುದಾಯಕ್ಕೆ ಹಂಚಿಕೆ ಮಾಡುವರೆಗೆ ನಾವು ಧರಣಿ ಸ್ಥಳ ಬಿಟ್ಟು ಕದಲುವುದಿಲ್ಲʼ ಎಂದು ಅಹೋರಾತ್ರಿ ಧರಣಿ ಮುಂದುವರೆಸಿದರು.

ಎರಡನೇ ದಿನ ಮಂಗಳವಾರ ಧರಣಿ ಮುಂದುವರೆಯಿತು. ಸಂಜೆ 4 ಗಂಟೆ ಸುಮಾರಿಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ಅವರು ಪುನಃ ಧರಣಿ ಸ್ಥಳಕ್ಕೆ ಭೇಟಿ ನೀಡಿ, ‘ಅಲೆಮಾರಿ ಜನಾಂಗದ ಕುಟುಂಬಗಳಿಗೆ ಮಂಜೂರಾದ ಸರ್ವೇ ನಂ-205ರ 2 ಎಕರೆ ಜಾಗದಲ್ಲಿ ಮನೆ ನಿರ್ಮಿಸಿಕೊಡಲು ಪ್ರಸ್ತಾವನೆ ಕಳಿಸಲಾಗಿದ್ದು, ಧರಣಿ ಹಿಂಪಡೆಯಿರಿ’ ಎಂದು ಮನವೋಲಿಸಲು ಪ್ರಯತ್ನಿಸಿದರು.

ಧರಣಿನಿರತ ಮುಖಂಡ ರಾಹುಲ್‌ ಖಂದಾರೆ ಮಾತನಾಡಿ, ʼಸರ್ವೇ ನಂ-205ರಲ್ಲಿ ಅಲೆಮಾರಿ ಜನಾಂಗಕ್ಕೆ ಮನೆ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಿದ ತಾಲೂಕಾಡಳಿತ ನಿರ್ಧಾರಕ್ಕೆ ಸ್ವಾಗತಾರ್ಹವಾಗಿದೆ. ಆದರೆ, ಅಲೆಮಾರಿ ಜನಾಂಗಕ್ಕೆ ಈ ಹಿಂದೆ ಮಂಜೂರಾದ ಸರ್ವೇ ನಂ-183ರಲ್ಲಿ 2 ಎಕರೆ ಜಾಗ ಹಂಚಿಕೆ ಮಾಡದೆ ರದ್ದುಪಡಿಸಬೇಕೆಂದು ಜಿಲ್ಲಾಡಳಿತಕ್ಕೆ ಪತ್ರ ಯಾಕೆ ಬರೆದಿದ್ದೀರಾ? ನಿವೇಶನ ರದ್ದುಪಡಿಸುವ ಹಿಂದಿನ ಉದ್ದೇಶವೇನು? ಅದರ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟಪಡಿಸಬೇಕುʼ ಎಂದು ಪಟ್ಟು ಹಿಡಿದರು.

ನಾಲ್ಕು ದಶಕಗಳಿಂದ ಕನಿಷ್ಠ ಮೂಲಸೌಕರ್ಯ ಇಲ್ಲದೆ ಪುಟ್ಟ ಮಕ್ಕಳು, ವೃದ್ಧರು, ಗರ್ಭಿಣಿಯರು ಬೀದಿಯಲ್ಲಿ ಬದುಕುತ್ತಿದ್ದಾರೆ. ಆದರೆ, ತಾಲೂಕು ಆಡಳಿತ ಮಾನವೀಯತೆ ದೃಷ್ಟಿಯಿಂದ ಎಂದಾದರೂ ಅವರ ನೋವು-ಸಂಕಟ ಆಲಿಸುವ ಪ್ರಯತ್ನ ಮಾಡಿದೆಯಾ? ಮೂರ್ನಾಲ್ಕು ದಶಕ ಕಳೆದರೂ ಅಲೆಮಾರಿ ಜನಾಂಗಕ್ಕೆ ಮಂಜೂರಾದ ನಿವೇಶನ ಹಂಚಿಕೆ ಮಾಡದೆ ನಿರ್ಲಕ್ಷಿಸಲು ಕಾರಣಗಳೇನು ಎಂದು ಪ್ರಶ್ನಿಸಿದ ಅವರು, ʼಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸುವರೆಗೆ ಈ ಅಹೋರಾತ್ರಿ ಧರಣಿ ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲʼ ಎಂದು ಧರಣಿ ಮುಂದುವರೆಸಿದ್ದಾರೆ.

ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡಿರುವರಿಗೆ ಆರೋಗ್ಯ ಸಮಸ್ಯೆ ಆಗುತ್ತಿದ್ದು, ಎಲ್ಲರಿಗೂ ವೈದ್ಯಕೀಯ ತಪಾಸಣೆ ನಡೆಸಬೇಕೆಂದು ಒಕ್ಕೂಟದ ಮುಖಂಡ ರಾಹುಲ ಖಂದಾರೆ ಅವರು ಕೋರಿದ ಮನವಿ ಮೇರೆಗೆ ವೈದ್ಯರ ತಂಡ ಧರಣಿ ಸ್ಥಳಕ್ಕೆ ತೆರಳಿ ಎಲ್ಲರಿಗೂ ವೈದ್ಯಕೀಯ ತಪಾಸಣೆ ನಡೆಸಿ, ಔಷಧಿ ನೀಡಿದ್ದಾರೆ.

ಇದನ್ನೂ ಓದಿ : ಬೀದರ್‌ | ಸೂರಿಗಾಗಿ ಈ ಅಲೆಮಾರಿ ಜನಾಂಗ ಇನ್ನೆಷ್ಟು ವರ್ಷ ಹೋರಾಟ ನಡೆಸಬೇಕು?

ಧರಣಿಯಲ್ಲಿ ಅಲೆಮಾರಿ ಸಮುದಾಯದ ಮುಖಂಡ ನಾಗನಾಥ ವಾಕೋಡೆ, ಒಕ್ಕೂಟದ ಪ್ರಮುಖರಾದ ಸುಭಾಷ ಲಾಧಾ, ಸಿದ್ದಾರ್ಥ ಭೋಸ್ಲೆ, ಸಂತೋಷ ಸಿಂಧೆ, ಪ್ರವೀಣ ಕಾರಂಜೆ, ಸಂತೋಷ ಸೂರ್ಯವಂಶಿ, ಪ್ರವೀಣ್ ಕಾರಂಜೆ, ಸಂಪತ್ ಫೈಟರ್, ಸುಂದರ ಮೇತ್ರೆ, ಪ ಸೇರಿದಂತೆ ಅಲೆಮಾರಿ ಸಮುದಾಯದವರು ಮಹಿಳೆಯರು, ಮಕ್ಕಳು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...