ಬೆಂಗಳೂರಿನ ಪಿಸಿ ಮತ್ತು ಪಿಎನ್ಡಿಟಿ ಉಪನಿರ್ದೇಶಕ ಡಾ.ವಿವೇಕ ದೂರೈ ನೇತ್ರತ್ವದ ತಂಡವು ಜಿಲ್ಲೆಯ ವಿವಿಧೆಡೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಕಾಯ್ದೆ ಉಲ್ಲಂಘಿಸಿ ಕಾರ್ಯ ನಿರ್ವಹಿಸುತ್ತಿದ್ದ ಮೂರು ಕೇಂದ್ರಗಳನ್ನು ಸೀಜ್ ಮಾಡಿದ್ದಾರೆ.
ಹುಮನಾಬಾದ, ಭಾಲ್ಕಿ, ಬಸವಕಲ್ಯಾಣ ಮತ್ತು ಔರಾದ(ಬಿ) ತಾಲೂಕಿನಲ್ಲಿ 8 ವಿವಿಧ ಸ್ಕ್ಯಾನಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು, ಬಸವಕಲ್ಯಾಣ ನಗರದ ನ್ಯೂ ರೀಫಾ ಆಸ್ಪತ್ರೆ, ಔರಾದ(ಬಿ) ಪಟ್ಟಣದ ವಿಶ್ವ ಮತ್ತು ಮುಗಳೆ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ಹಾಗೂ ಭಾಲ್ಕಿ ಪಟ್ಟಣದ ಜೀಜಾಮಾತಾ ಆಸ್ಪತ್ರೆಯಲ್ಲಿರುವ ಸ್ಕ್ಯಾನಿಂಗ್ ಕೇಂದ್ರಗಳು ಸೀಜ್ ಮಾಡಲಾಗಿದೆ.
ಈ ಮೂರು ಆಸ್ಪತ್ರೆಯಲ್ಲಿರುವ ಸ್ಕ್ಯಾನಿಂಗ್ ಕೇಂದ್ರಗಳು ಪಿಸಿ ಮತ್ತು ಪಿಎನ್ಡಿಟಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಆಗಿರುವುದರಿಂದ 3 ಸ್ಕ್ಯಾನಿಂಗ್ ಕೇಂದ್ರಗಳನ್ನು ಸೀಜ್ ಮಾಡಿ, ಪಿಸಿ ಮತ್ತು ಪಿಎನ್ಡಿಟಿ ಕಾಯ್ದೆ ಪ್ರಕಾರ ಕ್ರಮ ಜರುಗಿಸಲು ಪ್ರಕರಣ ದಾಖಲು ಮಾಡಲಾಗವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ತಮಿಳುನಾಡು ಚುನಾವಣೆ | ದಳಪತಿ ವಿಜಯ್ ಸೆಳೆಯಲು ಖೆಡ್ಡಾ ತೋಡಿತೇ ಬಿಜೆಪಿ?
ಕಾರ್ಯಾಚರಣೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಅಧಿಕಾರಿ ಡಾ. ಧ್ಯಾನೇಶ್ವರ ನಿರುಗುಡೆ, ಜಿಲ್ಲಾ ಪಿಸಿ ಮತ್ತು ಪಿಎನ್ಡಿಟಿ ನೋಡಲ್ ಅಧಿಕಾರಿ ಡಾ.ದಿಲೀಪ ಡೊಂಗ್ರೆ, ಪಿಸಿ ಮತ್ತು ಪಿಎನ್ಡಿಟಿ ರಾಜ್ಯ ತಪಾಸಣಾ ಮತ್ತು ಮೇಲ್ವಿಚಾರಣೆ ಸಮಿತಿಯ ಸದಸ್ಯ ವಸಂತಕುಮಾರ, ಕಾನೂನು ಸಲಹೆಗಾರರಾದ ಮೋನಿಶಾ ಡಿ.ಎನ್, ದ್ವಿತೀಯ ದರ್ಜೆ ಸಹಾಯಕ ಅನೀಲ್ ಥಾಮಸ್, ಪಿಸಿ ಮತ್ತು ಪಿಎನ್ಡಿಟಿ ಕಾರ್ಯಕ್ರಮ ಸಲಹೆಗಾರ ಬನಾಮಾ ಎಸ್ ಸಜ್ಜನ್, ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಸದಸ್ಯ ಡಾ.ಅಬ್ರಾರ್ ಖಾದ್ರಿ, ಡಾ.ಅಶೋಕ ಕಟ್ಟಿಮನಿ, ಪಿಸಿ ಮತ್ತು ಪಿಎನ್ಡಿಟಿ ವಿಷಯ ನಿರ್ವಾಹಕ ಮಹೇಶ್ವರ ರಡ್ಡಿ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.





