ಬೀದರ್‌ | ನೀರು-ಮೇವು ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ : ಡಿಸಿ ಶಿಲ್ಪಾ ಶರ್ಮಾ

Date:

ಮುಂಬರುವ ದಿನಗಳಲ್ಲಿ ಬೀದರ್ ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಹಾಗೂ ಕ್ರಿಯಾಯೋಜನೆ ಸಿದ್ದಪಡಿಸಿ ಒಂದು ವಾರದಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಆಯಾ ತಾಲೂಕಿನ ತಹಸೀಲ್ದಾರ್, ತಾಲ್ಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ಕ್ರೀಯಾಶೀಲರಾಗಿ ನೀರಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕುʼ ಎಂದು ತಿಳಿಸಿದರು.

ʼಈ ವರ್ಷ ಮುಂಬರುವ ದಿನಗಳಲ್ಲಿ ತಾಪಮಾನವು ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ವರದಿಯಿದೆ. ಕಳೆದ ಮೂರ್ನಾಲ್ಕು ವರ್ಷಗಳ ಅನುಭವದ ಹಿನ್ನೆಲೆಯಲ್ಲಿ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಸಿದ್ದಗೊಳಿಸಿ ಕುಡಿಯುವ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಬೇಕು. ನಗರ ಹಾಗೂ ಗ್ರಾಮೀಣ ಜನತೆಗೆ ಸ್ಥಳೀಯ ಸಂಸ್ಥೆ ತಮ್ಮ ಅನುದಾನದಲ್ಲಿ ನೀರಿನ ಸಮಸ್ಯೆ ಬಗೆಹರಿಸಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. 15 ದಿನಕ್ಕೊಮ್ಮೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆ ಸೇರಿ ಸಮಸ್ಯೆಗಳನ್ನು ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಕಳೆದ ಬಾರಿ ಕಂಡುಬಂದ ಸಮಸ್ಯೆಗಳ ಆಧಾರದ ಮೇಲೆ ಈಗಾಗಲೇ ಸಿದ್ಧಗೊಳ್ಳಬೇಕು. ಬರ ಘೋಷಣೆಯಾದಲ್ಲಿ ತಾಲ್ಲೂಕಾ ಟಾಸ್ಕ್ ಫೋರ್ಸ್ ಅನುದಾನದಲ್ಲಿ ಕೊಳವೆ ಬಾವಿ ಪುನಶ್ಚೇತನ, ಪೈಪಲೈನ್, ಮೋಟಾರ್ ರಿಪೇರಿ, ಖಾಸಗಿ ಕೊಳವೆಬಾವಿ ಬಾಡಿಗೆ, ಕಾಮಗಾರಿ ಹಾಗೂ ಟ್ಯಾಂಕರ್ ಮೂಲಕ ನೀರು ಸರಬರಾಜು ಕೈಗೊಳ್ಳಬಹುದುʼ ಎಂದರು.

ಔರಾದ್, ಕಮಲನಗರ ಅಧಿಕಾರಿಗಳು ಹೆಚ್ಚು ನಿಗಾ ವಹಿಸಬೇಕು. ಔರಾದ್‌ ತಾಲೂಕಿನಲ್ಲಿ ಕಳೆದ ಬಾರಿ 48 ಗ್ರಾಮ, 29 ತಾಂಡಾಗಳಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿತು ಎಂದು ತಾಲ್ಲೂಕು ಪಂಚಾಯತ ಅಧಿಕಾರಿಗಳು ಸಭೆಗೆ ತಿಳಿಸಿದರು. ಕಮಲನಗರ ತಾಲೂಕಿನ ಚಿಕ್ಲಿ(ಯು) ಸುತ್ತಲಿನ 28 ತಾಂಡಾ ಹಾಗೂ ಭಾಲ್ಕಿ ತಾಲ್ಲೂಕಿನ 15 ಗ್ರಾಮಗಳಲ್ಲಿ ಸಮಸ್ಯೆ ಎದುರಾಗಿತು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಖಾಸಗಿ ಕೊಳವೆ ಬಾವಿ ಬಾಡಿಗೆಗೆ ಈಗಾಗಲೇ ಗುರುತಿಸಿಕೊಳ್ಳಬೇಕು. ತೆರೆದ ಬಾವಿ ಹಾಗೂ ಸಣ್ಣ ನೀರಾವರಿ ಇಲಾಖೆಯ ಕೆರೆಗಳನ್ನು ಸಹ ಕುಡಿಯುವ ನೀರಿಗೆ ಬಳಸಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

ಕ್ರಿಯಾಯೋಜನೆ ಸಿದ್ದಪಡಿಸಿಕೊಂಡು ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಈಗಿರುವ ಮೇವು ಆದ್ಯತೆ, ದಾಸ್ತಾನು ಗಮನಿಸಬೇಕು. ಜಿಲ್ಲೆಯ ಹೊರಗೆ ಮೇವು ಸಾಗಾಟ ಆಗದಂತೆ ತಹಸೀಲ್ದಾರರು ಎಚ್ಚರಿಕೆ ವಹಿಸಬೇಕುʼ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ : ಅಗ್ನಿಪಥ ನೇಮಕಾತಿಗಾಗಿ ಆನ್‌ಲೈನ್ ನೋಂದಣಿ ಆರಂಭ

ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಸಹಾಯಕ ಆಯುಕ್ತ ಮೊಹಮ್ಮದ್ ಶಕೀಲ್, ಆಯಾ ತಾಲ್ಲೂಕಿನ ತಹಸೀಲ್ದಾರರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ವ್ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

–ನಿಮ್ಮ ಊರು, ನಗರ, ಪಟ್ಟಣದ ಕುಂದು-ಕೊರತೆಗಳ ಬಗ್ಗೆ ಪೋಟೋ, ವಿಡಿಯೋ ಮಾಹಿತಿಯನ್ನು
ʼಈದಿನʼ ನ್ಯೂಸ್ ಬೀದರ್ ಸಹಾಯವಾಣಿ 9035053805 ವಾಟ್ಸಪ್ ಸಂಖ್ಯೆಗೆ ಕಳುಹಿಸಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...