ಬೀದರ್‌ | ಸಂತ ಸೇವಾಲಾಲ್‌ ವಿಚಾರಧಾರೆ ಯುವ ಜನಾಂಗಕ್ಕೆ ದಾರಿದೀಪ : ಸಚಿವ ಈಶ್ವರ ಖಂಡ್ರೆ

Date:

ಸಂತ ಸೇವಾಲಾಲ್ ಮಾಹಾರಾಜರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ದಿಕ್ಕು ತೋರಿಸುವ ದೀಪವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ ಸಂತ ಸೇವಾಲಾಲ್‌ ಅವರ 287ನೇ ಜಯಂತ್ಯೋತ್ಸವ ಅಂಗವಾಗಿ ಸಂತ ಸೇವಾಲಾಲ್ ಮಹಾರಾಜ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ʼಅನ್ಯಾಯ, ಅಂಧಶ್ರದ್ಧೆ ವಿರುದ್ಧ ಹೋರಾಡಿ ಸಮಾನತೆ, ಶಿಕ್ಷಣ ಹಾಗೂ ಆತ್ಮಗೌರವದ ಸಂದೇಶ ನೀಡಿದ ಸಂತ ಸೇವಾಲಾಲ್ ಮಹಾರಾಜರ ಆದರ್ಶಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿವೆ. ಸಂತ ಸೇವಾಲಾಲ್ ಮಹಾರಾಜರು ಮಹಾನ್ ಪವಾಡ ಪುರುಷರಾಗಿದ್ದರು, ಅವರು ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದರು. ಮೂಢನಂಬಿಕೆ, ಕೆಟ್ಟ ಆಚರಣೆಗಳ ವಿರುದ್ಧ ಧ್ವನಿ ಎತ್ತಿದರು ಮತ್ತು ಜನರಿಗೆ ತಿಳಿವಳಿಕೆ ಮೂಡಿಸಿದರುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜದ ಐಕ್ಯತೆ ಮತ್ತು ಸಹಬಾಳ್ವೆಗೆ ಪ್ರೇರೇಪಿಸಿದರು. ಬ್ರಿಟಿಷರು ತೆರಿಗೆ ಹೆಚ್ಚಳ ಮಾಡಿದಾಗ ವೀರ ಸೇನಾನಿಯಾಗಿ ಹೋರಾಡಿದರು. ಯಾವುದೇ ಮಹಾನ ಪುರುಷರು ಒಂದೇ ಜಾತಿಗೆ ಸಿಮಿತವಿಲ್ಲ. ಅವರು ಮಾನವ ಕುಲಕ್ಕೆ ಸುಧಾರಣೆಗೆ ಪ್ರಯತ್ನಿಸಿದವರುʼ ಎಂದು ತಿಳಿಸಿದರು.

ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಸೇರಿದಂತೆ ಜಿಲ್ಲಾ ಬಂಜಾರಾ ಸಮಾಜದ ಅಧ್ಯಕ್ಷ ಗೋವರ್ಧನ ರಾಠೋಡ, ಮುಖಂಡರಾದ ಬಸವರಾಜ ಪವಾರ, ಮಾಣಿಕರಾವ ಪವಾರ, ವೀರಶೆಟ್ಟಿ ರಾಠೋಡ, ಗೋಪಾಲಸಿಂಗ ರಾಠೋಡ, ಕೀಶನರಾವ ರಾಠೋಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಮಾಜಕ್ಕೆ ಶಾಂತಿಯ ಸಂದೇಶ ಸಾರಿದ ಸಂತ ಸೇವಾಲಾಲ್‌ : ಸಚಿವ ರಹೀಂ ಖಾನ್

ಸಂತ ಸೇವಾಲಾಲ್ ಮಹಾರಾಜರು ಇಡೀ ಸಮಾಜಕ್ಕೆ ಒಳಿತನ್ನು ಬಯಸಿ ಶಾಂತಿಯ ಸಂದೇಶ ಸಾರಿದವರು. ಅವರು ಮಾನವ ಕುಲಕ್ಕೆ ಸುಧಾರಣೆಗೆ ಪ್ರಯತ್ನಿಸಿದವರು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಸಂತ ಸೇವಾಲಾಲ್‌ ಅವರ 287ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

WhatsApp Image 2026 02 15 at 6.56.09 PM

ʼಸಂತ ಸೇವಾಲಾಲ್‌ ಅವರಂತಹ ದಾರ್ಶನಿಕರು ಒಂದು ಜಾತಿಗೆ ಸೀಮಿತರಲ್ಲ. ಅವರು ಬಂಜಾರ ಸಮಾಜ ಸುಧಾರಣೆ ಮತ್ತು ಅಭಿವೃದ್ಧಿಗಾಗಿ ಬಹಳಷ್ಟು ಉತ್ತಮ ಸಂದೇಶ ನೀಡಿದ್ದಾರೆ. ಅವರ ತತ್ವಾದರ್ಶ, ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಶಿಕ್ಷಿತರಾದರೆ ಮಾತ್ರ ಸಮಾಜ ಏಳಗೆಯಾಗಲು ಸಾಧ್ಯ. ಎಲ್ಲರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕುʼ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮರಖಲ್ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕ ಬಳವಂತರಾವ್ ರಾಥೋಡ್ ಅವರು ಸಂತ ಸೇವಾಲಾಲ್ ಮಹಾರಾಜರ ಕುರಿತು ಅತಿಥಿ ಉಪನ್ಯಾಸ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಸಂತ ಸೇವಲಾಲ್ ಮಾಹಾರಾಜ ಅವರ ಭಾವಚಿತ್ರ ಮೆರವಣಿಗೆಯು ನಗರದ ಛತ್ರಪತಿ ಶಿವಾಜಿ ವೃತ್ತ, ಭಗತಸಿಂಗ್ ವೃತ್ತ, ಬಸವೇಶ್ವರ ವೃತ್ತ, ಡಾ.ಅಂಬೇಡ್ಕರ ವೃತ್ತ, ಜನರಲ್ ಕರಿಯಪ್ಪ ವೃತ್ತದಿಂದ ಮಾರ್ಗವಾಗಿ ರಂಗಮಂದಿರ ನಡೆಯಿತು.

ಇದನ್ನೂ ಓದಿ : ಔರಾದ್‌ | ಸಮಾನತೆ ಸಂದೇಶ ಸಾರಿದ ಸಂತ ಸೇವಾಲಾಲ್‌ : ಶಾಸಕ ಪ್ರಭು‌ ಚವ್ಹಾಣ

ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾ ಬಂಜಾರಾ ಸಮಾಜದ ಅಧ್ಯಕ್ಷ ಗೋವರ್ಧನ ರಾಠೋಡ, ಮುಖಂಡರಾದ ಬಸವರಾಜ ಪವಾರ, ಮಾಣಿಕರಾವ ಪವಾರ, ವೀರಶೆಟ್ಟಿ ರಾಠೋಡ, ಗೋಪಾಲಸಿಂಗ ರಾಠೋಡ, ಕೀಶನರಾವ ರಾಠೋಡ ಸೇರಿದಮತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...