ಬೀದರ್‌ | ಸಮಾನತೆಯ ಸಂದೇಶ ಸಾರಿದ ಸಿದ್ದರಾಮೇಶ್ವರರು : ಗುರುಮಹಾಂತ ಸ್ವಾಮೀಜಿ

Date:

ಶಿವಯೋಗಿ ಸಿದ್ದರಾಮೇಶ್ವರರು ಬಸವಾದಿ ಶರಣರಲ್ಲಿ ಪ್ರಮುಖ ಶರಣರಾಗಿದ್ದರು. ಸಿದ್ಧರಾಮೇಶ್ವರರು ಬಸವಣ್ಣನವರನ್ನು ಪರಮ ಗುರುವಾಗಿ ಕಂಡರು, ಬಸವಣ್ಣನವರ ಮಾರ್ಗದರ್ಶನದಿಂದ ಸಿದ್ಧರಾಮೇಶ್ವರರು ಶಿವಯೋಗಿಯಾದರು ಎಂದು ಇಳಕಲ್‌ನ
ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ ಹೇಳಿದರು.

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಬುಧವಾರ ಆಯೋಜಿಸಿದ್ದ ಸಿದ್ಧರಾಮೇಶ್ವರ ಜಯಂತಿ ಮತ್ತು ವಿಶ್ವಗುರು ಬಸವಣ್ಣನವರ ಮೂರ್ತಿ ಅನಾವರಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ʼಸಿದ್ಧರಾಮೇಶ್ವರರು ಲಿಂಗಭೇದ ನಿವಾರಿಸಿ ಸಮಾನತೆಯ ಸಂದೇಶ ನೀಡಿದರು. ಕೆರೆ, ಬಾವಿ, ದೇವಾಲಯಗಳ ನಿರ್ಮಿಸಿ ಜನಕಲ್ಯಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡರು. ಸೊಲ್ಲಾಪುರವನ್ನು ಭೂಕೈಲಾಸವನ್ನಾಗಿ ಪರಿವರ್ತಿಸಿದರು. ಅಂತಹ ಶರಣರ ಆದರ್ಶಗಳು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ʼಸಿದ್ದರಾಮೇಶ್ವರರು ಕೇವಲ ದಾರ್ಶನಿಕರಾಗಿರದೆ, ತಮ್ಮ ಕಾಯಕ ಮತ್ತು ಚಿಂತನೆಗಳ ಮೂಲಕ ಸಮಾಜದ ಓರೆಕೋರೆಗಳನ್ನು ಸರಿಪಡಿಸಲು ಶ್ರಮಿಸಿದರುʼ ಎಂದು ತಿಳಿಸಿದರು. 

WhatsApp Image 2026 01 14 at 7.26.19 PM

ಸಂಕ್ರಾಂತಿ ಹಬ್ಬದ ನಿಮಿತ್ತ ಮಕ್ಕಳಿಗೆ ಇಳಕಲ್, ಭಾಲ್ಕಿ ಶ್ರೀಗಳು ಮಕ್ಕಳಿಗೆ ಸಂಕ್ರಾಂತಿ ಹಬ್ಬದ ಶುಭ ಕೋರಿದರು. ಚನ್ನಬಸವೇಶ್ವರ ಗುರುಕುಲದಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉಭಯ ಪೂಜ್ಯರು ಎಳ್ಳು, ಬೆಲ್ಲ ವಿತರಿಸಿ ಆಶೀರ್ವದಿಸಿದರು.

ಸಾಮಾಜಿಕ ಕ್ರಾಂತಿ ಹಾಗೂ ವಚನ ಸಾಹಿತ್ಯಕ್ಕೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಅಪಾರ. ಅವರು ಶಿವಯೋಗಿ ಮಾತ್ರವಲ್ಲದೇ ಕಾಯಕ ಯೋಗಿ ಆಗಿದ್ದರು ಎಂದು ಗುರುಬಸವ ಪಟ್ಟದ್ದೇವರು ಹೇಳಿದರು.

ಇದನ್ನೂ ಓದಿ : ಬೀದರ್‌ | ಕೋಟಿ ಖರ್ಚಾದರೂ ಉದ್ಘಾಟನೆಯಾಗದ ಪದವಿ ಕಾಲೇಜು ಹಾಸ್ಟೆಲ್‌ : ಕುಸಿಯುತ್ತಿದೆ ದಾಖಲಾತಿ!

ಮದನೂರಿನ ಯುವ ಮುಖಂಡ ಗುಂಡಪ್ಪ ಬೆಲ್ಲೆ ಅವರು ಬಸವಣ್ಣನವರ ಮೂರ್ತಿಗೆ ಪೂಜೆ ನೆರವೇರಿಸಿದರು. ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ, ಹಿರೇಮಠ ಸಂಸ್ಥಾನದ ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ, ಸಂಸ್ಥೆಯ ಆಡಳಿತಾಧಿಕಾರಿ ಮೋಹನ ರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪಪ್ರಾಚಾರ್ಯ ಸಿದ್ರಾಮ ಗೊಗ್ಗಾ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...