ಬೀದರ್‌ | ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ : ಮುಕುಲ್ ಜೈನ್

Date:

ಮಕ್ಕಳು ಮೊಬೈಲ್‌ ಗೀಳಿನಿಂದ ದೂರವುಳಿದು, ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಂಡು ಅಭ್ಯಾಸದ ಕಡೆಗೆ ಗಮನ ಹರಿಸಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಬೀದರ ಮಹಾನಗರ ಪಾಲಿಕೆ ಪೌರಾಯುಕ್ತ ಮುಕುಲ ಜೈನ್ ತಿಳಿಸಿದರು.

ಬೀದರ್ ನಗರದ ಪನ್ನಾಲಾಲ್ ಹೀರಾಲಾಲ್ ಪ್ರಾಥಮಿಕ ಶಾಲೆಯ 25ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ ಬೆಳ್ಳಿ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿ, ʼಮಕ್ಕಳು ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸಿದಾಗ ಗುರಿ ತಲುಪಲು ಸಾಧ್ಯʼ ಎಂದರು.

ʼಮನೆಯಲ್ಲಿ ಪಾಲಕರು ಹಾಗೂ ಶಾಲೆಯಲ್ಲಿ ಶಿಕ್ಷಕರು ಅವರಿಗೆ ಮಕ್ಕಳಿಗೆ ಉತ್ತಮ ಸಂಸ್ಕಾರ ಜೊತೆಗೆ ಶಿಕ್ಷಣ ನೀಡಬೇಕು. ಮೊಬೈಲ್ ಹಿಡಿಯದಂತೆ ಕಠಿಣ ನಿಯಮ ಜಾರಿಗೆ ತರುವಂತೆ ಶಾಲಾ ಸಿಬ್ಬಂದಿ ಪ್ರಯತ್ನಿಸಬೇಕು. ರಾಷ್ಟ್ರಭಾಷಾ ಸಂವರ್ಧನಾ ಸಮಿತಿಯು ಕನ್ನಡ ಶಾಲೆ ಆರಂಭಿಸಿ ಮಕ್ಕಳಿಗೆ ಮಾತೃಭಾಷೆಯ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2026 01 29 at 7.39.30 AM
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳಿಂದ ನೃತ್ಯ ಪ್ರದರ್ಶನ ಮನಸೂರೆಗೊಳಿಸಿತು.

ಕಾರ್ಯಕ್ರಮ ಉದ್ಘಾಟಿಸಿದ ಪನ್ನಾಲಾಲ್ ಹೀರಾಲಾಲ್ ಎಜುಕೇಶನ್ ಟ್ರಸ್ಟ್ ಸಂಸ್ಥಾಪಕ ಟ್ರಸ್ಟಿ ಕೈಲಾಸ ನಾರಾಯಣ ಭಾಂಗಡಿಯಾ ಮಾತನಾಡಿ, ʼಮಾತೃಭಾಷೆ ಕನ್ನಡದಲ್ಲಿ ಶಾಲೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿರುವ ಆಡಳಿತ ಮಂಡಳಿಯ ಎಲ್ಲಾ ಸದಸ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದುʼ ಎಂದು ತಿಳಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಮಾತನಾಡಿ, ʼಆಡಳಿತ ಮಂಡಳಿಯ ಬಹುತೇಕ ಸದಸ್ಯರ ಮಾತೃಭಾಷೆ ಹಿಂದಿಯಾಗಿದ್ದರೂ ಸಹಿತ ಕನ್ನಡ ಮಾಧ್ಯಮದಲ್ಲಿ ಶಾಲೆ ಆರಂಭಿಸಿ ಉತ್ತಮ ಶಿಕ್ಷಣ ಮತ್ತು ಮಕ್ಕಳಿಗೆ ಸಂಸ್ಕಾರ ನೀಡುತ್ತಿರುವುದು ಶ್ಲಾಘನೀಯ ಕಾರ್ಯ. ಈ ಶಾಲೆಯಲ್ಲಿ ಸುಮಾರು 800ಕ್ಕೂ ಹೆಚ್ಚು ಮಕ್ಕಳು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಓದಿದ ಮಕ್ಕಳು ಕ್ರಿಯಾಶೀಲರು, ಸೃಜನಶೀಲರಾಗಿ ಬೆಳೆಯುತ್ತಾರೆ. ಆಡಳಿತ ಮಂಡಳಿಯ ಕನ್ನಡ ಪ್ರೇಮ ಮೆಚ್ಚುವಂತಹದುʼ ಎಂದರು.

WhatsApp Image 2026 01 29 at 7.39.47 AM

ಇದನ್ನೂ ಓದಿ : ʼಈದಿನʼ ಸಂದರ್ಶನ | ಬಹುಭಾಷಿಕ ನೆಲೆಯಲ್ಲಿ ಕನ್ನಡಕ್ಕಿರಲಿ ಮನ್ನಣೆ : ಡಾ.ಮನ್ಮಥ ಡೋಳೆ

ಸಿಆರ್‌ಪಿ ತ್ರಿಂಬಕ್ ದೇವರ್ಸೆ, ಶಾಲೆಯ ಮ್ಯಾನೇಜಿಂಗ್ ಟ್ರಸ್ಟಿ ಕಮಲನಾರಾಯಣ ಭಾಂಗಡಿಯಾ, ನಂದಕಿಶೋರ ವರ್ಮಾ, ರಾಷ್ಟ್ರಭಾಷಾ ಸಂವರ್ಧನಾ ಸಮಿತಿಯ ಅಧ್ಯಕ್ಷ ರಾಜಕುಮಾರ ಅಗರವಾಲ್, ಪ್ರಧಾನ ಕಾರ್ಯದರ್ಶಿ ಬ್ರಿಜ್‌ ಕಿಶೋರ್ ಮಾಲಾನಿ, ಸಂಸ್ಥೆಯ ಉಪಾಧ್ಯಕ್ಷ ರಾಜೇಂದ್ರಸಿಂಗ್ ಪವಾರ್, ಸಹ ಕಾರ್ಯದರ್ಶಿ ಸತ್ಯನಾರಾಯಣ ಬದವಾ, ಖಜಾಂಚಿ ಓಂಪ್ರಕಾಶ ಬಜಾಜ್, ಘನಶ್ಯಾಮಜಿ ಗೋಯೆಲ್, ಪ್ರಾಚಾರ್ಯ ಸುಮತಿ ಪಡಶೆಟ್ಟಿ, ಅಂಬಾದಾಸ ಮೋರೆ, ಪ್ರೌಢ ಶಾಲಾ ಮುಖ್ಯಗುರು ಸುಧಾರಾಣಿ ಬಿರಾದಾರ, ಪ್ರಾಥಮಿಕ ಶಾಲೆಯ ಮುಖ್ಯಗುರು ಸಂಜೀವಕುಮಾರ ಬೇಲೂರ ಸೇರಿದಂತೆ ಪೋಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...