ಬೀದರ್‌ | ಬರೀದಶಾಹಿ ಉದ್ಯಾನದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Date:

ಬೀದರ್ ನಗರದ ಬರೀದಶಾಹಿ ಉದ್ಯಾನದಲ್ಲಿರುವ ಹಿರಿಯರ ಯೋಗ ತಂಡ ಹಾಗೂ ಪಾಪನಾಶ ನಗೆಕೂಟದ ವತಿಯಿಂದ ಮಂಗಳವಾರ ಬೆಳಿಗ್ಗೆ ರಾಷ್ಟ್ರೀಯ ಯುವ ದಿನದ ಅಂಗವಾಗಿ ಸ್ವಾಮಿ ವಿವೇಕಾನಂದರ 164ನೇ ಜಯಂತಿಯನ್ನು ಆಚರಿಸಲಾಯಿತು.

ನಗೆಕೂಟದ ಹಿರಿಯರಾದ ಸಿದ್ದಪ್ಪ ಕಾವಡಿಮಟ ಅವರು ಮಾತನಾಡಿ, ʼಸ್ವಾಮಿ ವಿವೇಕಾನಂದರ ತತ್ವ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವಜನತೆಗೆ ಕರೆ ನೀಡಿದರು. ಯುವಕರು ಉನ್ನತ ಗುರಿಯನ್ನು ಹೊಂದಿ, ಅದನ್ನು ಸಾಧಿಸಲು ಕಠಿಣ ಪರಿಶ್ರಮ ಮಾಡಬೇಕುʼ ಎಂದು ಸಲಹೆ ನೀಡಿದರು.

ಹಿರಿಯ ಯೋಗ ಸಾಧಕ ವೀರಭದ್ರಪ್ಪ ಉಪ್ಪಿನ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ʼಇಂದಿನ ಯುವಕ-ಯುವತಿಯರು ಪಾಶ್ಚಾತ್ಯ ಶೈಲಿಯ ಆಕರ್ಷಣೆಯಿಂದ ಹೊರಬಂದು, ನಿರ್ದಿಷ್ಟ ಗುರಿಯೊಂದಿಗೆ ಶ್ರಮಪಟ್ಟು ಜೀವನ ರೂಪಿಸಬೇಕು. ವಿವೇಕಾನಂದರ ಚಿಂತನೆ ಇಂದಿನ ಸಮಾಜಕ್ಕೆ ಆದರ್ಶವಾಗಿವೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಜನವರಿ 30, 31 ಹಾಗೂ ಫೆಬ್ರುವರಿ 1ರಂದು ಬೀದರ್‌ನಲ್ಲಿ ನಡೆಯಲಿರುವ 24ನೇ ವಚನ ವಿಜಯೋತ್ಸವದ ಪೋಸ್ಟರ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು.

WhatsApp Image 2026 01 13 at 11.10.38 AM

ವಚನ ವಿಜಯೋತ್ಸವದ ಪೋಸ್ಟರ್ ಬಿಡುಗಡೆಗೊಳಿಸಿದ ಗಂಗಪ್ಪ ಸಾವಳೆ ಅವರು ಮಾತನಾಡಿ, ʼಕಳೆದ 23 ವರ್ಷಗಳಿಂದ ನಿರಂತರವಾಗಿ ಯಶಸ್ವಿಯಾಗಿ ನಡೆಯುತ್ತಿರುವ ವಚನ ವಿಜಯೋತ್ಸವವು ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಶಿಷ್ಟ ದಾಖಲೆ ನಿರ್ಮಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕುʼ ಎಂದು ಮನವಿ ಮಾಡಿದರು.

ಇದನ್ನೂ ಓದಿ : ಬೀದರ್‌ | ಮುಗಿಯದ ಸಮುದಾಯ ಮಹಿಳಾ ಶೌಚಾಲಯ ಕಾಮಗಾರಿ : ತೆರೆಯದ ಬಾಗಿಲು!

ಕಾರ್ಯಕ್ರಮದಲ್ಲಿ ಪ್ರಮುಖರಾದ ದಾಸಪ್ಪ ಬೋರಗುಂಡೆ, ನಿಜಲಿಂಗಪ್ಪ ತಗಾರೆ, ಮಲ್ಲಿಕಾರ್ಜುನ ಹಂಡೆ, ರಮೇಶ ಕಪಲಾಪುರ, ವೀರಶೆಟ್ಟಿ, ಈಶ್ವರ ಕನೆರಿ, ಮಹಾಲಿಂಗಪ್ಪ ಬೆಲ್ದಾಳೆ, ಪ್ರಭುಶೆಟ್ಟಿ ಮೂಲಗೆ, ಜಿ.ಬಿ.ವಿಸಾಜಿ, ಚಂದ್ರಪ್ಪ ಬಿರಾದಾರ, ರವಿ ದೇಶಮುಖ, ಬಿ.ಎನ್.ಸ್ವಾಮಿ, ಶೇಷಪ್ಪ, ಚಂದ್ರಕಾಂತ ಪಾಟೀಲ, ಅಶ್ವಿನಿ ಕೋಟಗೆ, ಡಾ.ಸಿ.ಎಸ್. ಮಾಲಿಪಾಟೀಲ್, ನೀಲಮ್ಮ, ಶಂಕರ ಚಿದ್ರಿ, ರಾಚಯ್ಯ ಸ್ವಾಮಿ, ಮೋಹನ ಎಳನೂರ್, ಚೆನ್ನಯ್ಯ ಹಿರೇಮಠ, ಗುಂಡಪ್ಪ, ಹಿಪ್ಪಳಗಾವ ಪಾಟೀಲ್, ರಾಜಪ್ಪ, ಬಂಡೆಪ್ಪ, ಶಿವರಾಜ, ಬಸವರಾಜ್ ಗಾದಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...