ಬೀದರ್ | ಕಾರಂಜಾ ಸಂತ್ರಸ್ತರ ಬೇಡಿಕೆ: ಸಿಎಂ ಬಳಿ ಸರ್ವಪಕ್ಷಗಳ ನಿಯೋಗಕ್ಕೆ ಸಚಿವ ಖಂಡ್ರೆಗೆ ಆಗ್ರಹ

Date:

ಬೀದರ ಜಿಲ್ಲೆಯ ಪ್ರಮುಖ ಸಮಸ್ಯೆಯಾಗಿರುವ ಕಾರಂಜಾ ನೀರಾವರಿ ಯೋಜನೆಗೆ ಭೂಮಿ ನೀಡಿದ ರೈತ ಸಂತ್ರಸ್ತರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಆಗ್ರಹಿಸಿದ್ದಾರೆ.

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತರು ದೀರ್ಘಕಾಲದಿಂದ ಸಮರ್ಪಕ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿದ್ದು, ಮಾನವೀಯತೆ ಮತ್ತು ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಸೂಕ್ತ ಪರಿಹಾರ ನೀಡಬೇಕೆಂದು ಸಂತ್ರಸ್ತರು ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರಂಜಾ ಸಂತ್ರಸ್ತರ ಹೋರಾಟ ಸಮಿತಿಯು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದರು.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದ ವೇಳೆ ಸಂತ್ರಸ್ತರ ಬೇಡಿಕೆಗಳನ್ನು ಪರಿಗಣಿಸಿ ಉನ್ನತ ಮಟ್ಟದ ತಾಂತ್ರಿಕ ಸಮಿತಿಯನ್ನು ರಚಿಸಲು ಆದೇಶಿಸಿದ್ದರು. ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ರಚನೆಯಾದ ಸಮಿತಿಯು ಸುಮಾರು ಎರಡು ತಿಂಗಳ ಹಿಂದೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಸಂತ್ರಸ್ತರಲ್ಲಿ ಅಸಮಾಧಾನ ಉಂಟುಮಾಡಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಅವರ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಸಚಿವ ರಹೀಂ ಖಾನ್ ಅವರನ್ನು ಭೇಟಿ ಮಾಡಿ ತ್ವರಿತ ಕ್ರಮಕ್ಕೆ ಮನವಿ ಮಾಡಲಾಗಿದೆ.

ಇದೇ ಅಧಿವೇಶನದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಬಳಿ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗಲು ಪ್ರಯತ್ನಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ..

ಬೀದರ ಜಿಲ್ಲೆಯ ಜ್ವಲಂತ ಸಮಸ್ಯೆಯಾಗಿರುವ ಕಾರಂಜಾ ಸಂತ್ರಸ್ತರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಪ್ರಸ್ತುತ ಅಧಿವೇಶನದಲ್ಲೇ ಸರ್ವಪಕ್ಷಗಳ ನಿಯೋಗವನ್ನು ಮುಖ್ಯಮಂತ್ರಿಗಳ ಬಳಿ ಕರೆದುಕೊಂಡು ಹೋಗಬೇಕೆಂದು ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೊಚಕನಳ್ಳಿ, ಮುಖಂಡರಾದ ರಾಜಪ್ಪಾ ಕೋಸಮ್, ವಿನಯಕುಮಾರ್ ಮಾಳಗೆ, ರೋಹನಕುಮಾರ್, ರಾಜಕುಮಾರ ಭುಸ್ಸಾ, ಸಂಗಾರೆಡ್ಡಿ ಔರಾದ, ಮಹ್ಮದ್ ಸೋಲಾಪೂರಿ ಬಗದಲ್, ಇಸುಫ್ ರೇಕುಳಗಿ, ಮಾದಪ್ಪ ಖೌದೆ ಹಾಗೂ ರೇವಣಪ್ಪಾ ಖೇಣಿರಂಜೋಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ತಕ್ಷಣ ಅನುದಾನ ಒದಗಿಸುವುದು ಸೇರಿ ವಿವಿಧ...

ಬೀದರ್‌ನಲ್ಲಿ ಮಾ.16ರಂದು ಉದ್ಯೋಗ ಮೇಳ

ಬೀದರ್ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ (ಸರ್ಕಾರಿ ಐಟಿಐ...

ಬೀದರ್‌ | ಅಕ್ರಮ ಮಾದಕ ವಸ್ತು ಸಾಗಾಟ : ಮೂವರ ಬಂಧನ

ಬೀದರ ನಗರದ ಶಹಾಪುರ ಗ್ರಾಮದಿಂದ ಎರಡು ಮೋಟಾರ್ ಸೈಕಲ್‌ಗಳಲ್ಲಿ ಅಕ್ರಮವಾಗಿ...

ಬೀದರ್‌ | ಬೌದ್ಧ ವಿಹಾರಗಳು ಶಿಕ್ಷಣದ ಕೇಂದ್ರಗಳಾಗಿದವು : ಶಿವಕುಮಾರ್

ಇತಿಹಾಸವನ್ನು ಅವಲೋಕಿಸಿದರೆ ಹಿಂದಿನ ಎಲ್ಲಾ ಬೌದ್ಧ ವಿಹಾರಗಳು ಶಿಕ್ಷಣ ನೀಡುವ ಕೇಂದ್ರಗಳಾಗಿದವು....