ಬೀದರ್ | ಎಸ್ಸೆಸ್ಸೆಲ್ಸಿ ಫಲಿತಾಂಶ ಶೂನ್ಯ ಬಂದರೆ ಶಿಕ್ಷಕರೇ ಹೊಣೆ : ಡಿಸಿ ಶಿಲ್ಪಾ ಶರ್ಮಾ

Date:

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಪಡೆದ ಶಾಲೆಗಳ ಶಿಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು, ಅಗತ್ಯವಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಎಚ್ಚರಿಸಿದರು.

ಬೀದರ್ ನಗರದ ಶಾಹೀನ್ ಪದವಿ‌ ಪೂರ್ವ ಕಾಲೇಜು ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಬೀದರ ವತಿಯಿಂದ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಭೆ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ. ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ 1 ಮತ್ತು 2ರಲ್ಲಿ ಶೂನ್ಯ ಹಾಗೂ ಶೇ.50ರಷ್ಟು ಫಲಿತಾಂಶ ಪಡೆದ ಶಾಲೆಗಳಲ್ಲಿ ಬೆಳಿಗ್ಗೆ ಹಾಗೂ ಸಂಜೆ ವಿಶೇಷ ತರಗತಿ ನಡೆಸಿ 3ನೇ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರುವಂತೆ ಶ್ರಮಿಸಬೇಕು’ ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆಗಾಗಿ ಎಲ್ಲಾ ಶಿಕ್ಷಕರು ಪ್ರಾಮಾಣಿಕವಾಗಿ ಬೋಧನೆ ಮಾಡಬೇಕು. ಫಲಿತಾಂಶ ಸುಧಾರಣೆಗೆ ಕೆಕೆಆರ್‌ಡಿಬಿ ವತಿಯಿಂದ ಪ್ರತಿ ತಾಲ್ಲೂಕಿಗೆ 25 ಲಕ್ಷ ರೂ. ವೆಚ್ಚದಲ್ಲಿ ವಿಷಯವಾರು ಅತಿಥಿ ಶಿಕ್ಷಕರನ್ನು ನೇಮಿಸಿ ವಿಶೇಷ ಬೋಧನೆಗೆ ಕ್ರಮ ಕೈಗೊಳ್ಳಲಾಗಿದೆ. ಹಲವು ಕಾರ್ಯಾಗಾರಗಳನ್ನು ನಡೆಸಿದರೂ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ’ ಎಂದು ಅವರು ವಿಷಾದಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬದೋಲೆ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಗೊಳಿಸಲು ಶಿಕ್ಷಣ ಇಲಾಖೆ 29 ಅಂಶಗಳ ಕಾರ್ಯಕ್ರಮ ರೂಪಿಸಿದೆ. ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಗುಂಪು ಚಟುವಟಿಕೆ, ಪೋಷಕರ ಸಭೆ ಹಾಗೂ ಪೂರ್ವ ಸಿದ್ಧತಾ ಪರೀಕ್ಷೆಗಳ ಮೂಲಕ ಮಾರ್ಗದರ್ಶನ ನೀಡಲಾಗುತ್ತಿದೆ. ಆದರೂ ಫಲಿತಾಂಶ ಸುಧಾರಣೆ ಆಗುತ್ತಿಲ್ಲ’ ಎಂದರು.

‘ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಪೈಕಿ ಬೀದರ ಜಿಲ್ಲೆಗೆ 34ನೇ ಸ್ಥಾನ ಬಂದಿದೆ. ಖಾಸಗಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳ ಸಾಧನೆ ಏಕೆ ಕಡಿಮೆಯಾಗಿದೆ ಎಂಬುದನ್ನು ಬಿಇಒ ಮತ್ತು ಬಿಆರ್‌ಸಿ ಅಧಿಕಾರಿಗಳು ಪರಿಶೀಲಿಸಬೇಕು. ಉತ್ತಮ ಫಲಿತಾಂಶ ನೀಡುವ ಶಾಲಾ ಶಿಕ್ಷಕರನ್ನು ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಲಾಗುವುದು’ ಎಂದರು.

ಬೀದರ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಮಾತನಾಡಿ, ‘ವಿದ್ಯಾರ್ಥಿಗಳು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಎಂಬುದನ್ನು ಗುರುತಿಸಿ ವಿಶೇಷ ಬೋಧನೆ ನೀಡಬೇಕು’ ಎಂದು ಶಿಕ್ಷಕರಿಗೆ ಸಲಹೆ ನೀಡಿದರು.

ಇದನ್ನೂ ಓದಿ: ಬೀದರ್ | ಮುಷ್ಕರ : ಹೊಸ ಕಾರ್ಮಿಕ ನೀತಿ ವಿರೋಧಿಸಿ ಬೃಹತ್ ಪ್ರತಿಭಟನೆ

ಪ್ರೊಬೇಷನರಿ ಐಎಎಸ್ ಅಧಿಕಾರಿ ರಮ್ಯಾ ರಂಗನಾಥ, ‘ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಜಿ. ಸುರೇಶ್, ಡಯಟ್ ಪ್ರಾಚಾರ್ಯರು, ಕಾರ್ಯಕ್ರಮ ಸಂಯೋಜಕ ಸೈಯದ್ ಪುರ್ಖಾನ್, ಶಾಹೀನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಹಜಿಜ್ ಸೇರಿದಂತೆ ವಿವಿಧ ಅಧಿಕಾರಿಗಳು ಮತ್ತು ಎಲ್ಲಾ ತಾಲ್ಲೂಕಿನ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...