ಬೀದರ್ | ವಿದ್ಯಾರ್ಥಿಗಳಲ್ಲಿ ಶಿಕ್ಷಕರು ವೈಚಾರಿಕತೆ ಪ್ರಜ್ಞೆ ಬೆಳೆಸಬೇಕು: ಸಾಹಿತಿ ಪುಣ್ಯವತಿ ವಿಸಾಜಿ

Date:

ಶಿಕ್ಷಕರು ವೃತ್ತಿನಿಷ್ಠೆಯನ್ನು ಬೆಳೆಸಿಕೊಂಡು ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ಮತ್ತು ಸಂಸ್ಕಾರವನ್ನು ನೀಡುವುದು ಇಂದಿನ ಕಾಲದಲ್ಲಿ ಅವಶ್ಯಕತೆ ಇದೆ. ತಂತ್ರಜ್ಞಾನ ಎಷ್ಟೇ ಮುಂದುವರಿದರು ಅಲ್ಲಲ್ಲಿ ಮೌಡ್ಯತೆಯನ್ನು ಕಾಣುತ್ತಿರುವುದು ದುರಾದೃಷ್ಟಕರ. ಹಾಗಾಗಿ,ಶಿಕ್ಷಕರು ಮಕ್ಕಳಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸಬೇಕು ಎಂದು ಹಿರಿಯ ಸಾಹಿತಿ ಪುಣ್ಯವತಿ ವಿಸಾಜಿ ತಿಳಿಸಿದರು.

ಬೀದರ್‌ನಲ್ಲಿ ಸಮಾಜ ಸೇವಾ ಸಮಿತಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು.

ನಿವೃತ್ತ ಪ್ರಾಧ್ಯಾಪಕ ಡಾ. ಭಾಗೀರಥಿ ಕೊಂಡ ಮಾತನಾಡಿ, “ಎಲ್ಲ ವೃತ್ತಿಗಳಲ್ಲಿಯೇ ಶಿಕ್ಷಕರ ವೃತ್ತಿ ಪವಿತ್ರವಾದದ್ದು, ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡ ಶಿಕ್ಷಕರು ನೈತಿಕ ಮೌಲ್ಯವನ್ನು ಕಳೆದುಕೊಳ್ಳದೆ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಮಕ್ಕಳಿಗೆ ಪ್ರೇರೇಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷ ಉಪನ್ಯಾಸ ನೀಡಿದ ಬೇಮಳಖೇಡದ ಸರ್ಕಾರಿ ಆದರ್ಶ ವಿದ್ಯಾಲಯದ ಪ್ರಾಂಶುಪಾಲೆ ಗೀತಾ ಎಸ್. ಗಡ್ಡಿ, “ಸರ್ವಪಲ್ಲಿ ರಾಧಾಕೃಷ್ಣನ್ ಅವರು ನಮ್ಮ ದೇಶದಲ್ಲಿ ಶ್ರೇಷ್ಠ ಶಿಕ್ಷಕರಾಗಿ ,ರಾಷ್ಟ್ರಪತಿಗಳಾಗಿ ಅಪರೂಪದ ಸೇವೆಯನ್ನು ಸಲ್ಲಿಸಿದ್ದಾರೆ, ಅವರು ತಮ್ಮ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲು ಸೂಚಿಸಿದ ಪ್ರಯುಕ್ತ ಪ್ರತಿ ವರ್ಷ ಶಿಕ್ಷಕರ ಸೇವೆಯನ್ನು ಸ್ಮರಿಸಿಕೊಂಡು ಈ ದಿನವನ್ನು ಆಚರಿಸಿಕೊಂಡು ಬರುತ್ತಿದ್ದೇವೆ” ಎಂದು ತಿಳಿಸಿದರು.

ಸಮಾಜ ಸೇವಾ ಸಮಿತಿ ಬೆಂಗಳೂರು ನ ಕಾರ್ಯದರ್ಶಿ ಬಿ ಎಂ ಶಶಿಕಲಾ ಮಾತನಾಡಿ, “ಕಳೆದ ಅನೇಕ ವರ್ಷಗಳಿಂದ ಸಮಾಜ ಸೇವಾ ಸಮಿತಿಯು ಸ್ತ್ರೀಯರಲ್ಲಿ ಜಾಗೃತಿಯನ್ನು ಉಂಟುಮಾಡುವ ಹತ್ತು ಹಲವಾರು ರೀತಿಯ ಕಾರ್ಯ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿದೆ, ಸಧೃಡ ಸಮಾಜ ನಿರ್ಮಾಣಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ” ಎಂದು ಹೇಳಿದರು.

ಕಾರ್ಯಕ್ರಮದ ಸಂಯೋಜಕ ಡಾ. ಸಂಜೀವಕುಮಾರ್ ಅತಿವಾಳೆ ಮಾತನಾಡಿ, “ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಶಿಕ್ಷಕರಾಗಿ ಉತ್ತಮ ಸಮಾಜದ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡ ಶಿಕ್ಷಕರನ್ನು ಗುರುತಿಸಿ ಸಮಾಜ ಸೇವಾ ಸಮಿತಿಯು ಉತ್ತಮ ಶಿಕ್ಷಕ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ” ಎಂದು ಹೇಳಿದರು.

ಸಮಾಜ ಸೇವಾ ಸಮಿತಿ ಜಿಲ್ಲಾ ಸಂಚಾಲಕಿ ಮಹಾದೇವಿ ಬಿರಾದಾರ್ ಮಾತನಾಡಿ, “ಮಹಿಳೆಯರಿಗೆ ಕರಕುಶಲ ಕಲೆಗಳನ್ನು ಕಲಿಸಿಕೊಡುತ್ತ ಅವರ ಕಾಲ ಮೇಲೆ ಅವರು ಬದುಕನ್ನು ನಡೆಸುವಂತೆ ಮಾಡುವಲ್ಲಿ ಹಾಗೂ ಮಹಿಳೆಯರನ್ನು ಎಲ್ಲರಂಗದಲ್ಲಿ ಏಳಿಗೆ ಆಗುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಸಮಾಜ ಸೇವಾ ಸಮಿತಿಯು ನಿರಂತರವಾಗಿ ಸೇವೆ ಮಾಡುತ್ತಿದೆ” ಎಂದು ತಿಳಿಸಿದರು.

ಶಿಕ್ಷಕರಾದ ಸಿದ್ದಮ್ಮ ಹಳಕಾಯಿ, ನರಸಮ್ಮ ಪಾಟೀಲ, ಸಂಗೀತಾ ಶಂಕರ ಬಾಪುರೆ, ಸೂರ್ಯಕಾಂತ ನಿರ್ಣಾಕರ್ ಪ್ರಿಯಾ ಲಂಜವಾಡಕರ್, ಮುರಳಿನಾಥ ಮೇತ್ರೆ, ಲಕ್ಷ್ಮಿ ಚಂಪಾಕರ್, ಸುವರ್ಣ, ಇಂದುಮತಿ ಹತ್ತಿ, ಶೋಭಾ, ಸತ್ಯವತಿ, ಮೀನಾಕುಮಾರಿ, ಶೈಲಜಾ ನೆಲ್ಸನ್ ಇವರನ್ನು “ಉತ್ತಮ ಶಿಕ್ಷಕ ಪ್ರಶಸ್ತಿ ” ಪ್ರದಾನ ಮಾಡಲಾಯಿತು.
ಕೀರ್ತಿಲತಾ ಹೊಸಳೆ ಸ್ವಾಗತಿಸಿದರು ಶ್ರೀಲತಾ ಅತಿವಾಳೆ ನಿರೂಪಿಸಿದರು, ರಾಜಮ್ಮ ಚಿಕ್ಕಪೇಟೆ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...