ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಸವಕಲ್ಯಾಣ ನಗರದ ಬಸ್ ನಿಲ್ದಾಣ ಸಮೀಪ ಬುಧವಾರ ಮಧ್ಯಾಹ್ನ ನಡೆದಿದೆ.
ಬಸ್ ನಿಲ್ದಾಣ ಸಮೀಪದ ಮುಚಳಂಬ ಕ್ರಾಸ್ ಬಳಿ ನಡೆದ ದುರ್ಘಟನೆಯಲ್ಲಿ ಬಸವಕಲ್ಯಾಣ ನಗರದ ಖಡಿ ಝಂಡಾ ಕಾಲೋನಿಯ ನಿವಾಸಿಗಳಾದ ಸೈಯದ್ ದಸ್ತಗೀರ್ (35) ಹಾಗೂ ಅವರ ಪತ್ನಿ ಯಾಸ್ಮೀನ್ ದಸ್ತಗೀರ್ (33) ಮೃತಪಟ್ಟ ದಂಪತಿ ಎಂದು ತಿಳಿದು ಬಂದಿದೆ.
ಸದ್ಯ ತ್ರಿಪುರಾಂತ ಸಮೀಪದ ಕಾಲೋನಿಯೊಂದರಲ್ಲಿ ವಾಸಿಸುತ್ತಿದ್ದ ಅವರು ಬೈಕ್ ಮೇಲೆ ಬಸ್ ನಿಲ್ದಾಣ ಕಡೆಯಿಂದ ಖಡಿ ಝಂಡಾ ಕಾಲೋನಿ ಕಡೆಗೆ ತೆರಳುತ್ತಿರುವ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ರಸ್ತೆ ಮೇಲೆ ಬಿದ್ದು ಕೊನೆಯುಸಿರೆಳೆದಿದ್ದಾರೆ.
ಬಸವಕಲ್ಯಾಣ ಸಿಪಿಐ ಅಲಿಸಾಬ್, ಸಂಚಾರಿ ಠಾಣೆ ಪಿಎಸ್ಐ ಸಿದ್ದೇಶ್ವರ ಹಾಗೂ ನಗರ ಠಾಣೆ ಪಿಎಸ್ಐ ಚಂದ್ರಶೇಖರ್ ನಾರಾಯಣಪುರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವಕಲ್ಯಾಣ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಇದನ್ನೂ ಓದಿ : ಬೀದರ್ | ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಬಲಗೈ ಸಮುದಾಯಗಳ ಬೃಹತ್ ಪ್ರತಿಭಟನೆ





