ಬೀದರ್‌ | ಭಾಷಾ ಸೌಹಾರ್ದತೆಗೆ ಪರಧರ್ಮ ಸಹಿಷ್ಣುತೆ ಅಗತ್ಯ : ಸಂತೋಷ ಹಾನಗಲ್ಲ

Date:

ಮಾನವನ ಅತ್ಯಮೂಲ್ಯ ಮೌಲ್ಯಗಳಲ್ಲಿ ಪ್ರಮುಖವಾದುದು ಪರಪರಧರ್ಮ ಸಹಿಷ್ಣುತೆ; ಅದೇ ನಿಜವಾದ ಭಾಷಾ ಸೌಹಾರ್ದತೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ತಿಳಿಸಿದರು.

ಬೀದರ್ ನಗರದ ನೌಬಾದನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಹಿತ್ಯ ಸಂಘ ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ‘ಭಾಷಾ ಸೌಹಾರ್ದ ಸಂಸ್ಕೃತಿ’ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ʼಇನ್ನೊಬ್ಬರ ಸಂಸ್ಕೃತಿ, ಆಚಾರ-ವಿಚಾರ, ಉಡುಗೆ-ತೊಡುಗೆ ಹಾಗೂ ಧಾರ್ಮಿಕ ವಿಧಾನಗಳನ್ನು ಗೌರವಿಸುವುದೇ ಸೌಹಾರ್ದತೆ. ಇದು ಭಾರತೀಯ ಸಂವಿಧಾನದ ಆಶಯವೂ ಆಗಿದೆ. “ಇವನಮ್ಮವ” ಎನ್ನುವ ಭಾವನೆ ಹಾಗೂ “ಮನುಷ್ಯ ಕುಲವೊಂದೇ” ಎಂಬ ವಿಶ್ವಮಾನವ ಸಂದೇಶವೇ ಸೌಹಾರ್ದತೆಯ ಸಾರವಾಗಿದೆ. ನಮ್ಮ ಸಂಸ್ಕೃತಿಯನ್ನು ಮನೆ ಒಳಗೆ ಮಾತ್ರ ಸೀಮಿತಗೊಳಿಸದೇ, ಹೊರಗೆ ಬಂದಾಗ ರಾಜ್ಯ ಮತ್ತು ರಾಷ್ಟ್ರದ ಹಿತಾಸಕ್ತಿಗಳನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಆಡಳಿತದಲ್ಲಿ ಶೇ. 92ರಷ್ಟು ಕನ್ನಡ ಬಳಕೆಗೆ ನಿಯಮವಿದ್ದರೂ ಜನಮಟ್ಟದಲ್ಲಿ ಕನ್ನಡದ ಬಳಕೆ ಕುಗ್ಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಅವರು, ವಿದ್ಯಾರ್ಥಿಗಳು ದೈನಂದಿನ ಜೀವನದಲ್ಲಿ ಕನ್ನಡ ಬಳಸಿದಾಗ ಮಾತ್ರ ಭಾಷೆಯ ಶ್ರೇಯೋಭಿವೃದ್ಧಿ ಸಾಧ್ಯವೆಂದರು. ಮಕ್ಕಳು ಯಾವಾಗಲೂ ಪಾಲಕರು, ಗುರುಗಳು ಮತ್ತು ರಾಷ್ಟ್ರಕ್ಕೆ ಗೌರವ ಸಲ್ಲಿಸಬೇಕುʼ ಎಂದು ಸಲಹೆ ನೀಡಿದರು.

ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಪ್ರೊ.ಜಗನ್ನಾಥ ಹೆಬ್ಬಾಳೆ ಪ್ರಾಸ್ತಾವಿಕವಾಗಿ ಮಾತನಾಡಿ, ʼಭಾಷೆ ಇಲ್ಲದಿದ್ದರೆ ಜಗತ್ತು ಕತ್ತಲಾಗುತ್ತಿತ್ತು. ಭಾಷೆ ಮತ್ತು ಸಂಸ್ಕೃತಿ ಈರುಳ್ಳಿಯ ಪದರಗಳಂತೆ; ಅವುಗಳನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವೆರಡರ ಮುಂದುವರಿದ ರೂಪವೇ ಸೌಹಾರ್ದತೆʼ ಎಂದು ಅಭಿಪ್ರಾಯಪಟ್ಟರು.

ʼಬೀದರ ಜಿಲ್ಲೆಯ ವೈವಿಧ್ಯಮಯ ಧಾರ್ಮಿಕ-ಸಾಂಸ್ಕೃತಿಕ ತಾಣಗಳಾದ ಅಷ್ಟೂರ ಗುಂಬಜ್, ಬೀದರ ಗುರುದ್ವಾರ, ಪಾಪನಾಶ ದೇವಸ್ಥಾನ ಇತ್ಯಾದಿಗಳು ಸೌಹಾರ್ದತೆಯ ಸಂಕೇತಗಳಾಗಿವೆ. ಗಡಿ ಜಿಲ್ಲೆಯಾದ ಬೀದರ ಸರ್ವಜನಾಂಗದ ಶಾಂತಿಯ ತೋಟವಾಗಿದೆʼ ಎಂದು ಹೇಳಿದರು.

WhatsApp Image 2026 03 01 at 5.56.00 AM
ಕಾರ್ಯಕ್ರಮ ಉದ್ಘಾಟನೆ

ಶಾಹಿನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಮಾತನಾಡಿ, ʼಎಲ್ಲಾ ಭಾಷೆಗಳೂ ದೇವರ ಭಾಷೆಗಳೇ. ಕೆಲವು ಸುಶಿಕ್ಷಿತರಿಗೆ ಕನ್ನಡ ತಿಳಿಯದಿರುವುದು ವಿಷಾದನೀಯ. ಪ್ರತಿಯೊಬ್ಬರೂ ಮಾತೃಭಾಷೆಗೆ ಒತ್ತು ನೀಡಿ ಕಲಿಯಬೇಕು. ಕನಿಷ್ಠ 10ನೇ ತರಗತಿವರೆಗೆ ಮಕ್ಕಳಿಗೆ ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕುʼ ಎಂದು ಸಲಹೆ ನೀಡಿದರು.

ಹಿರಿಯ ಸಾಹಿತಿ ಸೋಮನಾಥ ಯಾಳವಾರ ಮಾತನಾಡಿ, ʼಸೌಹಾರ್ದತೆ ಅಂತಃಕರಣದ ಜೀವಕೇಂದ್ರವಾಗಿದೆ. ಭಾಷೆ ಮತ್ತು ಸಂಸ್ಕೃತಿ ಮೂಲಕ ಸೌಹಾರ್ದತೆಯ ಸಂದೇಶವನ್ನು ಮೊಟ್ಟಮೊದಲು ಸಾರಿದವರು ಬಸವಾದಿ ಶರಣರು. ಉದಾತ್ತ ಭಾವನೆ, ಪರಿಶುದ್ಧ ಮನಸ್ಸು ಮತ್ತು ನಿರ್ಮಲ ಪ್ರೀತಿಯೇ ಸೌಹಾರ್ದತೆಯ ಮೂಲ ಅಂಶಗಳುʼ ಎಂದರು.

ಕಾಲೇಜಿನ ಪ್ರಾಚಾರ್ಯ ಶಂಕರ ಗಣಗೊಂಡ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಂಶೋಧನಾ ಮಹಾಪ್ರಬಂಧಗಳ ಸಂಕಲನಗಳನ್ನೊಳಗೊಂಡ ‘ಶಂಖಲ’ ನಿಯತಕಾಲಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಇದನ್ನೂ ಓದಿ : ಬೀದರ್‌ | ನಶೆ, ಭಿಕ್ಷಾಟನೆ ಮುಕ್ತ ಜಿಲ್ಲೆಗೆ ಸಂಕಲ್ಪ : ಅಬ್ದುಲ್‌ ಖದೀರ್

ಕಾರ್ಯಕ್ರಮದಲ್ಲಿ ಪ್ರೊ.ಶ್ರೀಕಾಂತ ಪಾಟೀಲ, ನಿಜಲಿಂಗಪ್ಪ ತಗಾರೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಪ್ರೊ.ರಾಜಕುಮಾರ ಅಲ್ಲೂರೆ ಸ್ವಾಗತಿಸಿದರು, ಮಹಾದೇವಿ ಹೆಬ್ಬಾಳೆ ನಿರೂಪಿಸಿದರು, ದೇವೇಂದ್ರ ಬರಗಲೆ ವಂದಿಸಿದರು. ಅಶೋಕ ಕೋರೆ, ಸಂಜೀವಕುಮಾರ ತಾಂದಳೆ, ಲಕ್ಷ್ಮಿಕಾಂತ ಸಿ.ಪಂಚಾಳ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...