ಬೀದರ್‌ | ಮಾಧ್ಯಮಗಳಲ್ಲಿ ಮಹಿಳೆಯರು ಹೆಚ್ಚು ತೊಡಗಿಕೊಳ್ಳಲಿ : ಬಸವರಾಜ ಹೊರಟ್ಟಿ

Date:

ಮಾಧ್ಯಮಗಳಲ್ಲಿ ಇನ್ನಷ್ಟು ಮಹಿಳೆಯರು ತಮ್ಮನ್ನು ತಾವು ತೊಡಗಿಕೊಳ್ಳಬೇಕು. ಎಲ್ಲ ಕ್ಷೇತ್ರಗಳಲ್ಲಿ ತೋರಿದ ಅಭಿಲಾಷೆ ಈ ಕ್ಷೇತ್ರದಲ್ಲೂ ತೋರಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಸೋಮವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೀದರ್ ಜಿಲ್ಲಾ ಘಟಕದಿಂದ ಆಯೋಜಿಸಲು ಉದ್ದೇಶಿಸಿರುವ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

ʼಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಗಳನ್ನು ಸರಿ ದಾರಿಗೆ ತರುವ, ಅವುಗಳ ಯೋಜನೆ ಹಾಗೂ ಕಾರ್ಯಶೈಲಿ ಬಿತ್ತರಿಸುವ ಕಾರ್ಯ ಮಾಧ್ಯಮಗಳು ಮಾಡುತ್ತವೆ. ಇಂದು ನನ್ನಂತಹ ಒಬ್ಬ ಪರಿಪೂರ್ಣ ರಾಜಕಾರಣಿಗಳನ್ನು ತಯ್ಯಾರು ಮಾಡುವ ಕಾರ್ಯ ಮಾಧ್ಯಮಗಳು ಮಾಡಿವೆ. ನಿಸ್ವಾರ್ಥಿ ರಾಜಕಾರಣಿಗಳು ಸಮಾಜದ ಮುಖ್ಯವಾಹಿನಿಗೆ ಬರಲು ಮಾಧ್ಯಮಗಳ ಪಾತ್ರ ಬಹಳಷ್ಟಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20260223 WA0013

ʼಬಸವಣ್ಣನವರ ಪರಿಕಲ್ಪನೆ ಎತ್ತಿ ಹಿಡಿದವರು ಬೀದರ್ ಜನರು ಮಾತ್ರ. ಇಲ್ಲಿನ ಜನರ ಮುಗ್ದ ಸ್ವಭಾವ, ಸಹಕಾರ, ಮನೋಭಾವ ನಾಡಿಗೆ ಮಾದರಿಯಾಗಿದೆ. ಬಸವಣ್ಣನವರ ಕರ್ಮಭೂಮಿ ಬೀದರ್‌ನಲ್ಲಿ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನ ನಡೆಸುತ್ತಿರುವುದು ಸಂತೋಷ ತಂದಿದೆ. ಹೊರ ದೇಶಗಳಿಂದ ಪತ್ರಕರ್ತರನ್ನು ಸಮ್ಮೇಳನಕ್ಕೆ ಅಹ್ವಾನಿಸಲು ಮುಂದಾಗಿರುವುದು ಸ್ವಾಗತಾರ್ಹʼ ಎಂದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಸಮ್ಮೇಳನದ ವೆಬ್ ಸೈಟ್ ಅನಾವರಣಗೊಳಿಸಿ ಮಾತನಾಡಿ, ʼಇಂದು ಅಭಿವೃದ್ಧಿ ಪತ್ರಿಕೋದ್ಯಮ ಪಕ್ಕಕ್ಕೆ ಸರಿದು ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ. ಹೀಗಾಗಿ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನ ಮಾಧ್ಯಮ ಜಗತ್ತಿನ ʼಚಿಂತನ-ಮಂಥನʼ ವೇದಿಕೆಯಾಗಬೇಕುʼ ಎಂದರು.

ʼಡೀಪ್‌ಫೇಕ್‌ಗಳನ್ನು ಹೇಗೆ ಗುರುತಿಸುವುದು ಮತ್ತು ಸಾಮಾಜಿಕ ಮಾಧ್ಯಮ ಲೀಡ್‌ಗಳನ್ನು ಪರಿಶೀಲಿಸುವುದು ಹೇಗೆ ಎಂಬುದನ್ನು ನ್ಯೂಸ್‌ರೂಮ್‌ಗಳು ಕಲಿಸಬೇಕಾಗಿದೆ. ಮಾಧ್ಯಮ ಲೋಕದ ಕಾರ್ಪೊರೇಟ್‌ಕರಣ ತಂದೊಡ್ಡಿರುವ ನೈತಿಕ ಸವಾಲುಗಳ ನಡುವೆಯೇ ಈಗ ಎಐ ಮತ್ತು ಆಧುನಿಕ ತಂತ್ರಜ್ಞಾನವೂ ವಿನೂತನ ನೈತಿಕ ಸವಾಲುಗಳನ್ನು ಮುಂದಿಟ್ಟಿದೆ. ನೈತಿಕ, ತಾಂತ್ರಿಕ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಗೆಯಾಗಲಿ. ಈ ಬಾರಿಯ ಬಜೆಜ್‌ನಲ್ಲಿ ಪತ್ರಕರ್ತ ಸಮುದಾಯಕ್ಕೆ ಉತ್ತಮ್ಮ ಅನುಕೂಲಗಳು ಆಗುವ ಭರವಸೆ ಇದೆʼ ಎಂದು ಅಭಿಪ್ರಾಯಪಟ್ಟರು.

IMG 20260223 WA0019
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಕೆ.ವಿ ಪ್ರಭಾಕರ್ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷರೂ ಆದ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಅವರು ಮಾತನಾಡಿದರು. ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದರು. ಸಂಘದ ಜಿಲ್ಲಾಧ್ಯಕ್ಷ ಅನಂದ ದೇವಪ್ಪ ಪ್ರಾಸ್ತಾವಿಕ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ನೀರು-ಮೇವು ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ : ಡಿಸಿ ಶಿಲ್ಪಾ ಶರ್ಮಾ

ರಾಜ್ಯ ಸಂಘದ ಉಪಾಧ್ಯಕ್ಷರಾದ ಹೆಚ್.ಬು ಮದನಗೌಡ, ಮತ್ತಿಕೆರೆ ಜಯರಾಮ, ಅಜ್ಜಮಾಡ ರಮೇಶ ಕುಟ್ಟಪ್ಪ, ಕಾರ್ಯದರ್ಶಿಗಳಾದ ಪುಂಢಲಿಕ ಬಾಳೊಜಿ, ಸೋಮಶೇಖರ ಕೆರೆಗುಡು, ಖಜಾಂಚಿ ವಾಸುದೇವ ಹೊಳ್ಳ, ಮಾಜಿ ಉಪಾಧ್ಯಕ್ಷ  ವೇದಿಕೆಯಲ್ಲಿದ್ದರು. ಸಂಘದ ಮಾಜಿ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ ಠಾಕೂರ್, ಅಡಾಕ ಸಮಿತಿ ಸದಸ್ಯರಾದ ಶಿವಕುಮಾರ ಸ್ವಾಮಿ, ಅಪ್ಪಾರಾವ ಸೌದಿ, ಮಾಜಿ ಜಿಲ್ಲಾಧ್ಯಕ್ಷರಾದ ಗಂಧರ್ವ ಸೇನಾ, ಮಲ್ಲಿಕಾರ್ಜುನ ಬಿರಾದಾರ, ಬಸವರಾಜ ಕಾಮಶೆಟ್ಟಿ, ಅಶೋಕಕುಮಾರ ಕರಂಜಿ, ಡಿ.ಕೆ.ಗಣಪತಿ, ದೀಪಕ ವಾಲಿ, ಡಾ.ರಜನೀಶ ವಾಲಿ, ಬಾಬುವಾಲಿ, ಪ್ರಥ್ವಿರಾಜ.ಎಸ್ ಸೇರಿದಂತೆ ಜಿಲ್ಲಾ ಪತ್ರಕರ್ತ ಸಂಘದ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...