ಬೀದರ್‌ | ಬಿಎಸ್‌ಎಸ್‌ಕೆ ಆಡಳಿತ ಮಂಡಳಿ ವಜಾಕ್ಕೆ ಆಗ್ರಹ

Date:

ಜಿಲ್ಲೆಯ ರೈತರ ಜೀವನಾಡಿಯಾಗಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಆಡಳಿತ ಮಂಡಳಿ ಮತ್ತು ವ್ಯವಸ್ಥಾಪಕ ನಿರ್ದೇಶಕರು ಕಾರ್ಮಿಕರ  ಸುಮಾರು 1.19 ಕೋಟಿ ರೂ. ದುರುಪಯೋಗ ಮಾಡಿಕೊಂಡಿದ್ದು, ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಅಪರಾಧಿಕ ಪ್ರಕರಣ ದಾಖಲಿಸುವಂತೆ ಭಾರತ ಕಮ್ಯೂನಿಸ್ಟ್ ಪಕ್ಷ ಮತ್ತು ಅಖಿಲ ಭಾರತ ಕಿಸಾನ ಸಭಾ ಒತ್ತಾಯಿಸಿದೆ.

ಸಿಪಿಐ ಮತ್ತು ಎಐಕೆಎಸ್ ಕಾರ್ಯಕರ್ತರು ಜಂಟಿಯಾಗಿ ಬೀದರ್‌ ನಗರದ ಭಗತ್‌ ಸಿಂಗ್‌ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಸಲ್ಲಿಸಿದರು.

ರೈತರ ಕಲ್ಪವೃಕ್ಷವಾಗಿದ್ದ ಹಳ್ಳಿಖೇಡ್ (ಬಿ) ಪಟ್ಟಣದ ಬೀದರ ಸಹಕಾರಿ ಸಕ್ಕರೆ ಕಾರ್ಖಾನೆ ಇದನ್ನು ಸಂಪೂರ್ಣವಾಗಿ ಮುಚ್ಚಲು ಇಂದಿನ ಆಡಳಿತ ಮಂಡಳಿ ಮತ್ತು ವ್ಯವಸ್ಥಾಪಕ ನಿರ್ದೇಶಕರು ಹೊಣೆಗಾರರಾಗಿದ್ದಾರೆ. ಸರ್ಕಾರದ ಅನುಮತಿ ಇಲ್ಲದೆಯೇ ಬಿಎಸ್‌ಎಸ್‌ಕೆ ಆಡಳಿತ ಮಂಡಳಿ ಬೀಗ್‌ ಹಾಕಿದ್ದಾರೆ. ರೈತರ ಬಾಕಿ ಹಣ, ಕಾರ್ಮಿಕರ ಭವಿಷ್ಯ ನಿಧಿ, ವಿಮೆ ಹಣ, ನಿವೃತ್ತಿ ಹಣ ಮತ್ತು ಕಾರ್ಮಿಕರ ಉಪದಾನ ಸಂದಾಯ ಹಣ ಕಾರ್ಖಾನೆಗೆ ಬಂದರೂ ಹಣವನ್ನು ನಿವೃತ್ತಿ ಹೊಂದಿರುವ ಕಾರ್ಮಿಕರಿಗೆ ಕೊಡಲಿಲ್ಲ. ಸರ್ಕಾರದ ಅನುಮತಿ ಇಲ್ಲದೆಯೇ ನೌಕರರನ್ನು ಕೆಲಸಕ್ಕೆ ತೆಗೆದುಕೊಳ್ಳದೇ ಕಾರ್ಖಾನೆಯನ್ನು ಮುಚ್ಚಲ್ಪಟ್ಟಿದೆ, ಕಾರ್ಮಿಕರು ಬೋನಸ್ ಮತ್ತು ಇತರೆ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೌಕರರ ಹಣ ದುರುಪಯೋಗ ಮಾಡಿಕೊಂಡಿರುವ ಆಡಳಿತ ಮಂಡಳಿ ಮತ್ತು ವ್ಯವಸ್ಥಾಪಕ ನಿರ್ದೇಶಕರನ್ನು ವಜಾಗೊಳಿಸಬೇಕು. ನೌಕರರ ಹಣ ದುರುಪಯೋಗ ಮಾಡಿಕೊಂಡಿರುವ ಆಡಳಿತ ಮಂಡಳಿ ಮತ್ತು ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಅಪರಾಧಿಕ ಪ್ರಕರಣವನ್ನು ದಾಖಲಿಸಬೇಕು. ಆಡಳಿತ ಮಂಡಳಿ ಮತ್ತು ನೌಕರರ ಸಭೆ ಕರೆಯಬೇಕು. ಬಿಎಸ್‌ಎಸ್‌ಕೆ ಜವಾಬ್ದಾರಿ ಸರ್ಕಾರವೇ ವಹಿಸಿಕೊಳ್ಳಬೇಕು. ನೌಕರರಿಗೆ ಬರಬೇಕಾದ ಸಂಬಳ ಮತ್ತು ಇತರೆ ಬಾಕಿ ಹಣ ಹಾಗೂ ರೈತರಿಗೆ ಕೊಡಬೇಕಾದ ಬಾಕಿ ಹಣವನ್ನು ಸರ್ಕಾರದಿಂದ ಕೊಡಿಸಬೇಕು ಎಂದು ಒತ್ತಾಯಿಸಿದರು.‌

ಈ ಸುದ್ದಿ ಓದಿದ್ದೀರಾ? ಬೀದರ್‌ | ಆಟವಾಡುತ್ತಿದ್ದ ಮಗು ಮೇಲೆ ಹರಿದ ಕಾರು; ಸ್ಥಳದಲ್ಲೇ ಎರಡು ವರ್ಷದ ಮಗು ಸಾವು

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಎಂ.ಡಿ. ಶಫಾಯತ್‌ಅಲಿ,ಬಾಬುರಾವ ಹೊನ್ನಾ, ಅಲಿ ಅಹ್ಮದ್ ಖಾನ್, ಚಾಂದೋಬಾ ಭೋಸ್ಲೆ, ನಜೀರ್ ಅಹ್ಮದ್, ಶಿವಾಜಿರಾವ ಭೋಸ್ಲೆ, ಪ್ರಭು ಹೊಚಕನಳ್ಳಿ, ನಿಜಾಮೋದ್ದೀನ್, ಖಮರ್ ಪಟೇಲ್, ಪ್ರಭು ತಗಣಿಕರ್, ಶಿವರಾಜ ಕಮಠಾಣ, ಪಾಂಡುರಂಗ ಪ್ಯಾಗೆ, ಶೇಖ ನವಾಜ್, ಜಿ.ಎ.ಭೋಸ್ಲೆ ವಾಗನಗೇರಾ, ಮೊಗಲಪ್ಪಾ ಸುಂದಾಳ, ಚಂದ್ರಕಲಾ, ಭೀಮಣ್ಣಾ ಭಂಡೆ, ಖಾದರ್ ಶಾಹ‌ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...