ದಾವಣಗೆರೆ | ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ವಚನ ಸಂವಾದ

Date:

“ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ರಾಜ್ಯಾದ್ಯಂತ ಆಯೋಜಿಸಿರುವ ಬಸವ ಸಂಸ್ಕೃತಿ ಅಭಿಯಾನವು ಸೋಮವಾರ ದಾವಣಗೆರೆಯಲ್ಲಿ ನಡೆಯುತ್ತಿದ್ದು ಇದರ ಅಂಗವಾಗಿ ದಾವಣಗೆರೆ ನಗರದ ಎವಿಕೆ ರಸ್ತೆಯ ಎವಿ ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ವಚನ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

1002695330

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೇಳಿದ ದೇಗುಲ, ವಚನ ಮತ್ತು ಕಾಯಕ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ
ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀಗಳು “ಶರಣರು ಮನುಷ್ಯ ಎನ್ನುವುದನ್ನು ಬಿಟ್ಟು ‘ಭಕ್ತ ಮತ್ತು ಭವಿ’ ಎನ್ನುವ ಪದಗಳನ್ನು ಬಳಸುತ್ತಾರೆ. ಭಕ್ತ ಎಂದರೆ ಸದಾಚಾರಿ, ಭವಿ ಎಂದರೆ ದುರಾಚಾರಿ ಎನ್ನುವುದೇ ಇದರ ಅರ್ಥ. ಬಸವಣ್ಣ ದೇವಾಲಯ ಗುಡಿ ಗೋಪುರಗಳನ್ನು ಸಂಪೂರ್ಣವಾಗಿ ನಿರಾಕರಿಸಿದರು. ಎಲ್ಲರಿಗೂ ದೇಹವೇ ದೇವಾಲಯ ಎಂದು ತಿಳಿಸಿ ಇಷ್ಟಲಿಂಗ ಪ್ರಸಾದಿಸಿದರು. ಇದರಿಂದಾಗಿ ಎಲ್ಲಾ ವರ್ಗದ ಜನತೆ ದೇವರನ್ನು ಮುಟ್ಟುವ ಅವಕಾಶವನ್ನು ಮಾಡಿಕೊಟ್ಟವರು ಬಸವಾದಿ ಶರಣರು. ಕಾಯಕದಲ್ಲಿ ಭೇದಭಾವ ಮೇಲು ಕೀಳು ಇಲ್ಲ ಕಾಯಕವನ್ನು ಅರ್ಥ ಮಾಡಿಕೊಂಡಲ್ಲಿ ಅದರ ಮಹತ್ವವನ್ನು ತಿಳಿದುಕೊಂಡಲ್ಲಿ ಕಾಯಕದಲ್ಲಿರುವ ಮೇಲುಕೀಳು ಕಳೆದುಹೋಗುತ್ತದೆ. ಈ ಕಾಯಕದ ಮಹತ್ವವನ್ನು ಬಸವಾದಿ ಶರಣರು ಅರ್ಥ ಮಾಡಿಕೊಂಡಿದ್ದರು” ಎಂದು ವಿವರಿಸಿದರು.

1002695346

ಬೀದರ್ ಬಾಲ್ಕಿ ಸಂಸ್ಥಾನದ ಬಸವಲಿಂಗಪಟ್ಟ ದೇವರು ವಿದ್ಯಾರ್ಥಿಗಳ ಮೌಡ್ಯ, ಮೂಡನಂಬಿಕೆ ಕುರಿತ ಪ್ರಶ್ನೆಗೆ ಉತ್ತರಿಸಿ “ಸಾವಿರಾರು ವರ್ಷಗಳಿಂದ ವಚನ ಸಾಹಿತ್ಯ ಕಣ್ಮರೆಯಾಗಿತ್ತು. ಇತ್ತೀಚೆಗೆ ಒಂದು ನೂರು ವರ್ಷಗಳಲ್ಲಿ ಹಳಕಟ್ಟಿಯವರಿಂದ ಹಿಡಿದು ಅನೇಕರು ಸೇರಿ ಅದನ್ನು ಹೊರತರಲಾಗಿದೆ. ವಚನಗಳನ್ನು ಎಲ್ಲರಲ್ಲೂ ಭಿತ್ತಿ ಕುಟುಂಬಗಳಲ್ಲಿ ಬಸವಾದಿ ಶರಣರ ವಿಚಾರಧಾರೆಗಳನ್ನು ಮೂಡಿಸಿ ಮೌಢ್ಯತೆ ಕಳೆಯುವುದು ಬಸವಾದಿ ಶರಣರ ಉದ್ದೇಶವಾಗಿತ್ತು. ಇದಕ್ಕಾಗಿ ವಚನ ಸಾಹಿತ್ಯವನ್ನು ಅರ್ಥ ಮಾಡಿಕೊಳ್ಳಬೇಕಿದೆ, ಅಧ್ಯಯನ ಮಾಡಬೇಕಾಗಿದೆ. ಇದರ ಅಧ್ಯಯನ ಹೆಚ್ಚಾದಂತೆ ಮೂಡನಂಬಿಕೆ ಮತ್ತು ಮೌಢ್ಯತೆ ಕಳೆದು ಹೋಗಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002695345

“ಮನುಕುಲದ ಎಲ್ಲಾ ವ್ಯಕ್ತಿಗಳಲ್ಲಿ ದೇವರಿದ್ದಾನೆ. ಮನುಷ್ಯರೆಲ್ಲರೂ ಒಂದೇ, ದೇವರೊಬ್ಬನೇ ತಂದೆ ಎಂದು ಶರಣರು ಸಾರಿದ್ದಾರೆ. ಸಮ ಸಮಾಜದ ಕನಸು ಶರಣದಿಂದ ಅಂದು ಸಾಕಾರಗೊಂಡಿತ್ತು. ಇಂದಿಗೂ ಕೂಡ ಬಸವ ಪರಂಪರೆಯ ಮಠಗಳಲ್ಲಿ ಸಾಕಾರಗೊಳ್ಳುತ್ತಿದೆ. ಎಲ್ಲ ವರ್ಗದ ಜನ ಬಸವಪರ ಮಠಗಳಲ್ಲಿ ಇದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಬೀದಿನಾಯಿಗಳಿಂದ ಮಾರಣಾಂತಿಕ ದಾಳಿ: ಸುರಕ್ಷತೆ, ನಿಯಂತ್ರಣಕ್ಕೆ ನಾಗರಿಕರ ಆಗ್ರಹ

ಕಾರ್ಯಕ್ರಮದಲ್ಲಿ ಡಂಬಳ ಮಠದ ತೋಂಟದ ಸಿದ್ದರಾಮ ಶರಣರು, ದಾವಣಗೆರೆ ವಿರಕ್ತಮಠದ ಬಸವ ಪ್ರಭು ಶರಣರು, ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಶರಣರು ಸೇರಿದಂತೆ ವಿವಿಧ ಮಠಗಳ ಶರಣರು, ಲಿಂಗಾಯತ ಮಹಾಸಭಾ ಉಪಾಧ್ಯಕ್ಷ ಅಣಬೇರು ರಾಜಣ್ಣ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಕುರ್ಕಿ, ಲಿಂಗರಾಜು, ನಿವೃತ್ತ ಪ್ರಾಧ್ಯಾಪಕರಾದ ಪ್ರಭಾಕರ್, ಸಹ ಪ್ರಾಧ್ಯಾಪಕರಾದ ಅನಿತಾ ದೊಡ್ಡಗೌಡರ್, ಎವಿಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕಮಲ ಸೇರಿದಂತೆ 20ಕ್ಕೂ ಹೆಚ್ಚು ಬಸವಪರ ಮಠಗಳ ಶರಣರು ಮತ್ತು ಬಸವಾಭಿಮಾನಿಗಳು, ಕದಳಿ ಮಹಿಳಾ ವೇದಿಕೆಯ ಶರಣರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...